Latest

₹100 ಕೋಟಿ ಹೂಡಿಕೆ ವಂಚನೆ: ಹೊಸಪೇಟೆಯಲ್ಲಿ ಮುಮ್ತಾಜ್ ಬೇಗಂ ಮತ್ತು ತಂಡದ ದೋಖಾ ಬಯಲಿಗೆ!

ಹೊಸಪೇಟೆ: ಉದ್ಯಮದಲ್ಲಿ ಹೂಡಿಕೆ ಮಾಡಿದರೆ ಭಾರೀ ಲಾಭ ಮಾಡಿಕೊಡುತ್ತೇವೆ ಎಂದು ನಂಬಿಸಿ, ನೂರಾರು ಜನರಿಂದ ₹100 ಕೋಟಿಗೂ ಹೆಚ್ಚು ಹಣ ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

ಮುಖ್ಯ ಆರೋಪಿ ಮುಮ್ತಾಜ್ ಬೇಗಂ ಮತ್ತು ಅವರ ತಂಡ ಜನರನ್ನು ಮರುಳುಗೊಳಿಸಿ ಹೂಡಿಕೆ ಮಾಡಲು ಪ್ರೇರೇಪಿಸಿದ್ದರು. ಲಾಭದ ಆಮಿಷಕ್ಕೆ ನಂಬಿಕೊಂಡ ಜನ ಸಾಲ ತೆಗೆದುಕೊಂಡು, ಮನೆ ಮಾರಿ ದೊಡ್ಡ ಮೊತ್ತ ಹೂಡಿದ್ದರು. ಆದರೆ ಇದೀಗ ಹಣ ವಾಪಸು ಸಿಗದೇ, ವಂಚನೆಯ ಬಲಿಯಾಗಿ ಸಂಕಟದಲ್ಲಿದ್ದಾರೆ.

ಹೂಡಿಕೆದಾರರಲ್ಲಿ ಒಬ್ಬರಾದ ಹೊಸಪೇಟೆ ನಿವಾಸಿ ಅನೀಸ್, ತಾವು ₹1 ಕೋಟಿಗೂ ಹೆಚ್ಚು ಹಣ ಕಳೆದುಕೊಂಡಿದ್ದೇವೆ ಎಂದು ದೂರು ನೀಡಿದ್ದರು. ಈ ದೂರಿನ ಮೇರೆಗೆ ಹೊಸಪೇಟೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ವಂಚನೆ ಪ್ರಕರಣದಲ್ಲಿ ಕೇರಳ ಮೂಲದ ಇಬ್ಬರು ಆರೋಪಿಗಳು ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ, ಆದರೆ ಪ್ರಮುಖ ಆರೋಪಿ ಮುಮ್ತಾಜ್ ಬೇಗಂ ಸೇರಿದಂತೆ ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ಘಟನೆ ಜನರಿಗೆ ಎಚ್ಚರವಾಗುವಂತೆ ಮಾಡಿದ್ದು, ಸುಲಭ ಲಾಭದ ಆಸೆಗೆ ಬಿದ್ದು ಹಣ ಹೂಡಿಕೆ ಮಾಡುವ ಮುನ್ನ ಎಚ್ಚರಿಕೆಯಿಂದ ನಡೆಯುವಂತೆ ಪರಿಣಿತರ ಸಲಹೆ ನೀಡಿದ್ದಾರೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago