Latest

₹100 ಕೋಟಿ ಹೂಡಿಕೆ ವಂಚನೆ: ಹೊಸಪೇಟೆಯಲ್ಲಿ ಮುಮ್ತಾಜ್ ಬೇಗಂ ಮತ್ತು ತಂಡದ ದೋಖಾ ಬಯಲಿಗೆ!

ಹೊಸಪೇಟೆ: ಉದ್ಯಮದಲ್ಲಿ ಹೂಡಿಕೆ ಮಾಡಿದರೆ ಭಾರೀ ಲಾಭ ಮಾಡಿಕೊಡುತ್ತೇವೆ ಎಂದು ನಂಬಿಸಿ, ನೂರಾರು ಜನರಿಂದ ₹100 ಕೋಟಿಗೂ ಹೆಚ್ಚು ಹಣ ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

ಮುಖ್ಯ ಆರೋಪಿ ಮುಮ್ತಾಜ್ ಬೇಗಂ ಮತ್ತು ಅವರ ತಂಡ ಜನರನ್ನು ಮರುಳುಗೊಳಿಸಿ ಹೂಡಿಕೆ ಮಾಡಲು ಪ್ರೇರೇಪಿಸಿದ್ದರು. ಲಾಭದ ಆಮಿಷಕ್ಕೆ ನಂಬಿಕೊಂಡ ಜನ ಸಾಲ ತೆಗೆದುಕೊಂಡು, ಮನೆ ಮಾರಿ ದೊಡ್ಡ ಮೊತ್ತ ಹೂಡಿದ್ದರು. ಆದರೆ ಇದೀಗ ಹಣ ವಾಪಸು ಸಿಗದೇ, ವಂಚನೆಯ ಬಲಿಯಾಗಿ ಸಂಕಟದಲ್ಲಿದ್ದಾರೆ.

ಹೂಡಿಕೆದಾರರಲ್ಲಿ ಒಬ್ಬರಾದ ಹೊಸಪೇಟೆ ನಿವಾಸಿ ಅನೀಸ್, ತಾವು ₹1 ಕೋಟಿಗೂ ಹೆಚ್ಚು ಹಣ ಕಳೆದುಕೊಂಡಿದ್ದೇವೆ ಎಂದು ದೂರು ನೀಡಿದ್ದರು. ಈ ದೂರಿನ ಮೇರೆಗೆ ಹೊಸಪೇಟೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ವಂಚನೆ ಪ್ರಕರಣದಲ್ಲಿ ಕೇರಳ ಮೂಲದ ಇಬ್ಬರು ಆರೋಪಿಗಳು ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ, ಆದರೆ ಪ್ರಮುಖ ಆರೋಪಿ ಮುಮ್ತಾಜ್ ಬೇಗಂ ಸೇರಿದಂತೆ ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ಘಟನೆ ಜನರಿಗೆ ಎಚ್ಚರವಾಗುವಂತೆ ಮಾಡಿದ್ದು, ಸುಲಭ ಲಾಭದ ಆಸೆಗೆ ಬಿದ್ದು ಹಣ ಹೂಡಿಕೆ ಮಾಡುವ ಮುನ್ನ ಎಚ್ಚರಿಕೆಯಿಂದ ನಡೆಯುವಂತೆ ಪರಿಣಿತರ ಸಲಹೆ ನೀಡಿದ್ದಾರೆ.

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

11 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

11 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

11 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

11 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

11 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

11 hours ago