Latest

₹2 ಕೋಟಿ ಲೂಟಿ: ನಕಲಿ ಸಹಿಯ ಷಡ್ಯಂತ್ರ: ಬ್ಯಾಂಕ್ ಗೋಲ್ಮಾಲ್,ಮತ್ತು ಯಲ್ಲಪ್ಪನ ರಹಸ್ಯ ಪರಾರೀ!”

ರಾಯಚೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಒಂದಕ್ಕೊಂದು ಹಗರಣಗಳು ಬೆಳಕಿಗೆ ಬರುತ್ತಿವೆ. ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣದ ನಂತರ ಇದೀಗ ಮುಜರಾಯಿ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿಗಳ ಲೂಟಿಯ ಬಗ್ಗೆ ಬೆಳಕಿಗೆ ಬಂದಿದೆ.

ಲಿಂಗಸುಗೂರಿನಲ್ಲಿ ಭಾರೀ ಹಣದ ಗೋಜಲು

ಜಿಲ್ಲೆಯ ಲಿಂಗಸುಗೂರಿನಲ್ಲಿ ಕಂದಾಯ ಇಲಾಖೆಯ ಕೆಲವು ಅಧಿಕಾರಿಗಳು ಮುಜರಾಯಿ ಇಲಾಖೆಯ ನಿಧಿಯಲ್ಲಿ ಭಾರೀ ಅವ್ಯವಹಾರ ನಡೆಸಿರುವುದು ವರದಿಯಾಗಿದೆ. ಮೂಲಗಳ ಪ್ರಕಾರ, ಅರ್ಚಕರಿಗೆ ಸಲ್ಲಬೇಕಿದ್ದ ಸುಮಾರು ₹2 ಕೋಟಿ ಹಣವನ್ನು ತಹಶೀಲ್ದಾರ್ ಖಾತೆಯಿಂದ ಎಸ್ಡಿಎ ಯಲ್ಲಪ್ಪ ಹಾಗೂ ಕೆನರಾ ಬ್ಯಾಂಕ್ನ ಕೆಲ ಸಿಬ್ಬಂದಿ ಸಹಕಾರದಿಂದ ತಾನಾಗಿಯೇ ವಿತರಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಹೊರಿಸಲಾಗಿದೆ.

ನಕಲಿ ಸಹಿಗಳಿಂದ ಹಣ ವರ್ಗಾವಣೆ

ಆರೋಪಿಗಳ ತಂಡ ತಹಶೀಲ್ದಾರ್ ಸಹಿಯನ್ನು ನಕಲು ಮಾಡಿ ಹಣವನ್ನು ತಮ್ಮ ಕುಟುಂಬದ ಸದಸ್ಯರು ಹಾಗೂ ಇತರ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಈ ಮೂಲಕ ಲಕ್ಷಾಂತರ ರೂಪಾಯಿ ಹಣ ಕಾನೂನು ಬಾಹಿರವಾಗಿ ಹಗರಣಕ್ಕೊಳಗಾಗಿದೆ.

ಕೆನರಾ ಬ್ಯಾಂಕ್ ಮ್ಯಾನೇಜರ್ ಹೇಳಿಕೆ

ಮಾಜಿ ಬ್ಯಾಂಕ್ ಮ್ಯಾನೇಜರ್ ಜೇಸನ್ ಅವರ ಪ್ರಕಾರ, ₹2 ಕೋಟಿ ಹಣದ ಲೂಟಿ ಬಗ್ಗೆ ಅವರಿಗೆ ಯಾವುದೇ ಮಾಹಿತಿ ಇಲ್ಲ. ಆದರೆ ಎಸ್ಡಿಎ ಯಲ್ಲಪ್ಪ ಅವರಿಂದ ನಕಲಿ ಸಹಿಗಳನ್ನು ಬಳಸಿ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಇದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ಯಲ್ಲಪ್ಪ ಲಂಚದೊತ್ತಡ ಕೂಡ ಹೇರಲು ಯತ್ನಿಸಿದ್ದ ಎಂದು ಜೇಸನ್ ಆರೋಪಿಸಿದ್ದಾರೆ.

ಹಗರಣ ಬೆಳಕಿಗೆ ಬಂದಂತೆ ಯಲ್ಲಪ್ಪ ಪರಾರಿ

ಹಗರಣ ಬಹಿರಂಗಗೊಂಡ ಬೆನ್ನಲ್ಲೇ ಪ್ರಮುಖ ಆರೋಪಿಯಾದ ಎಸ್ಡಿಎ ಯಲ್ಲಪ್ಪ ತಲೆಮರೆಸಿಕೊಂಡಿದ್ದಾನೆ. ಈ ಅವ್ಯವಹಾರದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಮುಜರಾಯಿ ಇಲಾಖೆಯಲ್ಲಿ ಈ ರೀತಿಯ ಹಗರಣಗಳು ನಡೆಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬ ಒತ್ತಾಯವೂ ಹೆಚ್ಚುತ್ತಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago