ರಾಯಚೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಒಂದಕ್ಕೊಂದು ಹಗರಣಗಳು ಬೆಳಕಿಗೆ ಬರುತ್ತಿವೆ. ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣದ ನಂತರ ಇದೀಗ ಮುಜರಾಯಿ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿಗಳ ಲೂಟಿಯ ಬಗ್ಗೆ ಬೆಳಕಿಗೆ ಬಂದಿದೆ.
ಲಿಂಗಸುಗೂರಿನಲ್ಲಿ ಭಾರೀ ಹಣದ ಗೋಜಲು
ಜಿಲ್ಲೆಯ ಲಿಂಗಸುಗೂರಿನಲ್ಲಿ ಕಂದಾಯ ಇಲಾಖೆಯ ಕೆಲವು ಅಧಿಕಾರಿಗಳು ಮುಜರಾಯಿ ಇಲಾಖೆಯ ನಿಧಿಯಲ್ಲಿ ಭಾರೀ ಅವ್ಯವಹಾರ ನಡೆಸಿರುವುದು ವರದಿಯಾಗಿದೆ. ಮೂಲಗಳ ಪ್ರಕಾರ, ಅರ್ಚಕರಿಗೆ ಸಲ್ಲಬೇಕಿದ್ದ ಸುಮಾರು ₹2 ಕೋಟಿ ಹಣವನ್ನು ತಹಶೀಲ್ದಾರ್ ಖಾತೆಯಿಂದ ಎಸ್ಡಿಎ ಯಲ್ಲಪ್ಪ ಹಾಗೂ ಕೆನರಾ ಬ್ಯಾಂಕ್ನ ಕೆಲ ಸಿಬ್ಬಂದಿ ಸಹಕಾರದಿಂದ ತಾನಾಗಿಯೇ ವಿತರಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಹೊರಿಸಲಾಗಿದೆ.
ನಕಲಿ ಸಹಿಗಳಿಂದ ಹಣ ವರ್ಗಾವಣೆ
ಆರೋಪಿಗಳ ತಂಡ ತಹಶೀಲ್ದಾರ್ ಸಹಿಯನ್ನು ನಕಲು ಮಾಡಿ ಹಣವನ್ನು ತಮ್ಮ ಕುಟುಂಬದ ಸದಸ್ಯರು ಹಾಗೂ ಇತರ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಈ ಮೂಲಕ ಲಕ್ಷಾಂತರ ರೂಪಾಯಿ ಹಣ ಕಾನೂನು ಬಾಹಿರವಾಗಿ ಹಗರಣಕ್ಕೊಳಗಾಗಿದೆ.
ಕೆನರಾ ಬ್ಯಾಂಕ್ ಮ್ಯಾನೇಜರ್ ಹೇಳಿಕೆ
ಮಾಜಿ ಬ್ಯಾಂಕ್ ಮ್ಯಾನೇಜರ್ ಜೇಸನ್ ಅವರ ಪ್ರಕಾರ, ₹2 ಕೋಟಿ ಹಣದ ಲೂಟಿ ಬಗ್ಗೆ ಅವರಿಗೆ ಯಾವುದೇ ಮಾಹಿತಿ ಇಲ್ಲ. ಆದರೆ ಎಸ್ಡಿಎ ಯಲ್ಲಪ್ಪ ಅವರಿಂದ ನಕಲಿ ಸಹಿಗಳನ್ನು ಬಳಸಿ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಇದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ಯಲ್ಲಪ್ಪ ಲಂಚದೊತ್ತಡ ಕೂಡ ಹೇರಲು ಯತ್ನಿಸಿದ್ದ ಎಂದು ಜೇಸನ್ ಆರೋಪಿಸಿದ್ದಾರೆ.
ಹಗರಣ ಬೆಳಕಿಗೆ ಬಂದಂತೆ ಯಲ್ಲಪ್ಪ ಪರಾರಿ
ಹಗರಣ ಬಹಿರಂಗಗೊಂಡ ಬೆನ್ನಲ್ಲೇ ಪ್ರಮುಖ ಆರೋಪಿಯಾದ ಎಸ್ಡಿಎ ಯಲ್ಲಪ್ಪ ತಲೆಮರೆಸಿಕೊಂಡಿದ್ದಾನೆ. ಈ ಅವ್ಯವಹಾರದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
ಮುಜರಾಯಿ ಇಲಾಖೆಯಲ್ಲಿ ಈ ರೀತಿಯ ಹಗರಣಗಳು ನಡೆಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬ ಒತ್ತಾಯವೂ ಹೆಚ್ಚುತ್ತಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…