ರಾಯಚೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಒಂದಕ್ಕೊಂದು ಹಗರಣಗಳು ಬೆಳಕಿಗೆ ಬರುತ್ತಿವೆ. ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣದ ನಂತರ ಇದೀಗ ಮುಜರಾಯಿ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿಗಳ ಲೂಟಿಯ ಬಗ್ಗೆ ಬೆಳಕಿಗೆ ಬಂದಿದೆ.
ಲಿಂಗಸುಗೂರಿನಲ್ಲಿ ಭಾರೀ ಹಣದ ಗೋಜಲು
ಜಿಲ್ಲೆಯ ಲಿಂಗಸುಗೂರಿನಲ್ಲಿ ಕಂದಾಯ ಇಲಾಖೆಯ ಕೆಲವು ಅಧಿಕಾರಿಗಳು ಮುಜರಾಯಿ ಇಲಾಖೆಯ ನಿಧಿಯಲ್ಲಿ ಭಾರೀ ಅವ್ಯವಹಾರ ನಡೆಸಿರುವುದು ವರದಿಯಾಗಿದೆ. ಮೂಲಗಳ ಪ್ರಕಾರ, ಅರ್ಚಕರಿಗೆ ಸಲ್ಲಬೇಕಿದ್ದ ಸುಮಾರು ₹2 ಕೋಟಿ ಹಣವನ್ನು ತಹಶೀಲ್ದಾರ್ ಖಾತೆಯಿಂದ ಎಸ್ಡಿಎ ಯಲ್ಲಪ್ಪ ಹಾಗೂ ಕೆನರಾ ಬ್ಯಾಂಕ್ನ ಕೆಲ ಸಿಬ್ಬಂದಿ ಸಹಕಾರದಿಂದ ತಾನಾಗಿಯೇ ವಿತರಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಹೊರಿಸಲಾಗಿದೆ.
ನಕಲಿ ಸಹಿಗಳಿಂದ ಹಣ ವರ್ಗಾವಣೆ
ಆರೋಪಿಗಳ ತಂಡ ತಹಶೀಲ್ದಾರ್ ಸಹಿಯನ್ನು ನಕಲು ಮಾಡಿ ಹಣವನ್ನು ತಮ್ಮ ಕುಟುಂಬದ ಸದಸ್ಯರು ಹಾಗೂ ಇತರ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಈ ಮೂಲಕ ಲಕ್ಷಾಂತರ ರೂಪಾಯಿ ಹಣ ಕಾನೂನು ಬಾಹಿರವಾಗಿ ಹಗರಣಕ್ಕೊಳಗಾಗಿದೆ.
ಕೆನರಾ ಬ್ಯಾಂಕ್ ಮ್ಯಾನೇಜರ್ ಹೇಳಿಕೆ
ಮಾಜಿ ಬ್ಯಾಂಕ್ ಮ್ಯಾನೇಜರ್ ಜೇಸನ್ ಅವರ ಪ್ರಕಾರ, ₹2 ಕೋಟಿ ಹಣದ ಲೂಟಿ ಬಗ್ಗೆ ಅವರಿಗೆ ಯಾವುದೇ ಮಾಹಿತಿ ಇಲ್ಲ. ಆದರೆ ಎಸ್ಡಿಎ ಯಲ್ಲಪ್ಪ ಅವರಿಂದ ನಕಲಿ ಸಹಿಗಳನ್ನು ಬಳಸಿ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಇದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ಯಲ್ಲಪ್ಪ ಲಂಚದೊತ್ತಡ ಕೂಡ ಹೇರಲು ಯತ್ನಿಸಿದ್ದ ಎಂದು ಜೇಸನ್ ಆರೋಪಿಸಿದ್ದಾರೆ.
ಹಗರಣ ಬೆಳಕಿಗೆ ಬಂದಂತೆ ಯಲ್ಲಪ್ಪ ಪರಾರಿ
ಹಗರಣ ಬಹಿರಂಗಗೊಂಡ ಬೆನ್ನಲ್ಲೇ ಪ್ರಮುಖ ಆರೋಪಿಯಾದ ಎಸ್ಡಿಎ ಯಲ್ಲಪ್ಪ ತಲೆಮರೆಸಿಕೊಂಡಿದ್ದಾನೆ. ಈ ಅವ್ಯವಹಾರದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
ಮುಜರಾಯಿ ಇಲಾಖೆಯಲ್ಲಿ ಈ ರೀತಿಯ ಹಗರಣಗಳು ನಡೆಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬ ಒತ್ತಾಯವೂ ಹೆಚ್ಚುತ್ತಿದೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…