Latest

ಸ್ಕೂಟರ್ ಬಿಡುಗಡೆಗೆ ₹3 ಸಾವಿರ ಲಂಚ: ಇನ್‌ಸ್ಪೆಕ್ಟರ್‌ ಸೇರಿದಂತೆ ಇಬ್ಬರು ಬಂಧನ

ಮಂಗಳೂರು: ಉತ್ತರ ಸಂಚಾರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್ ಮಹಮ್ಮದ್ ಷರೀಫ್ ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ, ಲಂಚ ಪಡೆದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರ ಕೈಗೆ ಬಿದ್ದಿದ್ದಾರೆ. ಸ್ಕೂಟರ್ ಬಿಡುಗಡೆಗೆ ನ್ಯಾಯಾಲಯ ಆದೇಶ ಹೊರಡಿಸಿದ್ದರೂ, ಅದನ್ನು ಜಾರಿಗೆ ತರಲು ₹5,000 ಲಂಚದ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪದ ಆಧಾರದ ಮೇಲೆ ಈ ಬಂಧನ ನಡೆದಿದೆ.

ಘಟನೆಯ ವಿವರ:
ಪೊಲೀಸರ ವಶದಲ್ಲಿದ್ದ ಸ್ಕೂಟರ್ ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದ ಬಳಿಕ, ದೂರುದಾರ ಇನ್‌ಸ್ಪೆಕ್ಟರ್ ಮಹಮ್ಮದ್ ಷರೀಫ್ ಅವರನ್ನು ಭೇಟಿಯಾಗಿ ಸ್ಕೂಟರ್ ಬಿಡುಗಡೆಗಾಗಿ ವಿನಂತಿಸಿದರು. ಈ ವೇಳೆ, ಷರೀಫ್ ₹5,000 ಲಂಚದ ಬೇಡಿಕೆ ಇಟ್ಟಿದ್ದು, ದೂರುದಾರರು ಮೊತ್ತವನ್ನು ಕಡಿಮೆ ಮಾಡಲು ಮನವಿ ಮಾಡಿದಾಗ, ಅವರು ಠಾಣಾ ಬರಹಗಾರ ನಾಗರತ್ನ ಅವರನ್ನು ಸಂಪರ್ಕಿಸಲು ಸೂಚಿಸಿದರು.

ನಾಗರತ್ನ, ಲಂಚಕ್ಕಾಗಿ ಅವಾಚ್ಯವಾಗಿ ಬೈದು, ₹3,000 ಒಪ್ಪಿಕೊಳ್ಳುವಂತೆ ಹೇಳಿದರೆಂದು ದೂರುದಾರರು ಆರೋಪಿಸಿದರು. ಲಂಚ ನೀಡಲು ಮನಸ್ಸಿಲ್ಲದ ದೂರುದಾರರು ಲೋಕಾಯುಕ್ತ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದರು.

ಲೋಕಾಯುಕ್ತ ಕಾರ್ಯಾಚರಣೆ:
ಲೋಕಾಯುಕ್ತ ಅಧಿಕಾರಿಗಳು ಸೋಮವಾರ ದೂರುದಾರರ ಮಾಹಿತಿಯ ಮೇರೆಗೆ ದಾಳಿ ಮಾಡಿ ₹3,000 ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಇನ್‌ಸ್ಪೆಕ್ಟರ್ ಮಹಮ್ಮದ್ ಷರೀಫ್ ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕನನ್ನು ಬಂಧಿಸಿದರು.

ಅಧಿಕಾರಿಗಳ ಪ್ರತಿಕ್ರಿಯೆ.

ಈ ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ ಎಂದು ಲೋಕಾಯುಕ್ತ ಪೊಲೀಸರು ಹೇಳಿರುತ್ತಾರೆ. ಅಧಿಕಾರಿಗಳಾದ ಪ್ರಭಾರ ಎಸ್‌ಪಿ ನಂದಿನಿ ಬಿ.ಎನ್., ಡಿವೈಎಸ್‌ಪಿ ಗಾನ ಪಿ.ಕುಮಾರ್, ಇನ್‌ಸ್ಪೆಕ್ಟರ್ ಅಮಾನುಲ್ಲಾ ಎ., ಚಂದ್ರಶೇಖರ್ ಕೆ.ಎನ್., ಉಡುಪಿ ಠಾಣೆಯ ಇನ್‌ಸ್ಪೆಕ್ಟರ್ ಮಂಜುನಾಥ ಹಾಗೂ ಅವರ ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿರುತ್ತದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago