ಮಂಗಳೂರು: ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹಮ್ಮದ್ ಷರೀಫ್ ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ, ಲಂಚ ಪಡೆದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರ ಕೈಗೆ ಬಿದ್ದಿದ್ದಾರೆ. ಸ್ಕೂಟರ್ ಬಿಡುಗಡೆಗೆ ನ್ಯಾಯಾಲಯ ಆದೇಶ ಹೊರಡಿಸಿದ್ದರೂ, ಅದನ್ನು ಜಾರಿಗೆ ತರಲು ₹5,000 ಲಂಚದ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪದ ಆಧಾರದ ಮೇಲೆ ಈ ಬಂಧನ ನಡೆದಿದೆ.
ಘಟನೆಯ ವಿವರ:
ಪೊಲೀಸರ ವಶದಲ್ಲಿದ್ದ ಸ್ಕೂಟರ್ ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದ ಬಳಿಕ, ದೂರುದಾರ ಇನ್ಸ್ಪೆಕ್ಟರ್ ಮಹಮ್ಮದ್ ಷರೀಫ್ ಅವರನ್ನು ಭೇಟಿಯಾಗಿ ಸ್ಕೂಟರ್ ಬಿಡುಗಡೆಗಾಗಿ ವಿನಂತಿಸಿದರು. ಈ ವೇಳೆ, ಷರೀಫ್ ₹5,000 ಲಂಚದ ಬೇಡಿಕೆ ಇಟ್ಟಿದ್ದು, ದೂರುದಾರರು ಮೊತ್ತವನ್ನು ಕಡಿಮೆ ಮಾಡಲು ಮನವಿ ಮಾಡಿದಾಗ, ಅವರು ಠಾಣಾ ಬರಹಗಾರ ನಾಗರತ್ನ ಅವರನ್ನು ಸಂಪರ್ಕಿಸಲು ಸೂಚಿಸಿದರು.
ನಾಗರತ್ನ, ಲಂಚಕ್ಕಾಗಿ ಅವಾಚ್ಯವಾಗಿ ಬೈದು, ₹3,000 ಒಪ್ಪಿಕೊಳ್ಳುವಂತೆ ಹೇಳಿದರೆಂದು ದೂರುದಾರರು ಆರೋಪಿಸಿದರು. ಲಂಚ ನೀಡಲು ಮನಸ್ಸಿಲ್ಲದ ದೂರುದಾರರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರು.
ಲೋಕಾಯುಕ್ತ ಕಾರ್ಯಾಚರಣೆ:
ಲೋಕಾಯುಕ್ತ ಅಧಿಕಾರಿಗಳು ಸೋಮವಾರ ದೂರುದಾರರ ಮಾಹಿತಿಯ ಮೇರೆಗೆ ದಾಳಿ ಮಾಡಿ ₹3,000 ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಇನ್ಸ್ಪೆಕ್ಟರ್ ಮಹಮ್ಮದ್ ಷರೀಫ್ ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕನನ್ನು ಬಂಧಿಸಿದರು.
ಅಧಿಕಾರಿಗಳ ಪ್ರತಿಕ್ರಿಯೆ.
ಈ ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ ಎಂದು ಲೋಕಾಯುಕ್ತ ಪೊಲೀಸರು ಹೇಳಿರುತ್ತಾರೆ. ಅಧಿಕಾರಿಗಳಾದ ಪ್ರಭಾರ ಎಸ್ಪಿ ನಂದಿನಿ ಬಿ.ಎನ್., ಡಿವೈಎಸ್ಪಿ ಗಾನ ಪಿ.ಕುಮಾರ್, ಇನ್ಸ್ಪೆಕ್ಟರ್ ಅಮಾನುಲ್ಲಾ ಎ., ಚಂದ್ರಶೇಖರ್ ಕೆ.ಎನ್., ಉಡುಪಿ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ ಹಾಗೂ ಅವರ ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿರುತ್ತದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…