Latest

ಸ್ಕೂಟರ್ ಬಿಡುಗಡೆಗೆ ₹3 ಸಾವಿರ ಲಂಚ: ಇನ್‌ಸ್ಪೆಕ್ಟರ್‌ ಸೇರಿದಂತೆ ಇಬ್ಬರು ಬಂಧನ

ಮಂಗಳೂರು: ಉತ್ತರ ಸಂಚಾರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್ ಮಹಮ್ಮದ್ ಷರೀಫ್ ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ, ಲಂಚ ಪಡೆದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರ ಕೈಗೆ ಬಿದ್ದಿದ್ದಾರೆ. ಸ್ಕೂಟರ್ ಬಿಡುಗಡೆಗೆ ನ್ಯಾಯಾಲಯ ಆದೇಶ ಹೊರಡಿಸಿದ್ದರೂ, ಅದನ್ನು ಜಾರಿಗೆ ತರಲು ₹5,000 ಲಂಚದ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪದ ಆಧಾರದ ಮೇಲೆ ಈ ಬಂಧನ ನಡೆದಿದೆ.

ಘಟನೆಯ ವಿವರ:
ಪೊಲೀಸರ ವಶದಲ್ಲಿದ್ದ ಸ್ಕೂಟರ್ ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದ ಬಳಿಕ, ದೂರುದಾರ ಇನ್‌ಸ್ಪೆಕ್ಟರ್ ಮಹಮ್ಮದ್ ಷರೀಫ್ ಅವರನ್ನು ಭೇಟಿಯಾಗಿ ಸ್ಕೂಟರ್ ಬಿಡುಗಡೆಗಾಗಿ ವಿನಂತಿಸಿದರು. ಈ ವೇಳೆ, ಷರೀಫ್ ₹5,000 ಲಂಚದ ಬೇಡಿಕೆ ಇಟ್ಟಿದ್ದು, ದೂರುದಾರರು ಮೊತ್ತವನ್ನು ಕಡಿಮೆ ಮಾಡಲು ಮನವಿ ಮಾಡಿದಾಗ, ಅವರು ಠಾಣಾ ಬರಹಗಾರ ನಾಗರತ್ನ ಅವರನ್ನು ಸಂಪರ್ಕಿಸಲು ಸೂಚಿಸಿದರು.

ನಾಗರತ್ನ, ಲಂಚಕ್ಕಾಗಿ ಅವಾಚ್ಯವಾಗಿ ಬೈದು, ₹3,000 ಒಪ್ಪಿಕೊಳ್ಳುವಂತೆ ಹೇಳಿದರೆಂದು ದೂರುದಾರರು ಆರೋಪಿಸಿದರು. ಲಂಚ ನೀಡಲು ಮನಸ್ಸಿಲ್ಲದ ದೂರುದಾರರು ಲೋಕಾಯುಕ್ತ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದರು.

ಲೋಕಾಯುಕ್ತ ಕಾರ್ಯಾಚರಣೆ:
ಲೋಕಾಯುಕ್ತ ಅಧಿಕಾರಿಗಳು ಸೋಮವಾರ ದೂರುದಾರರ ಮಾಹಿತಿಯ ಮೇರೆಗೆ ದಾಳಿ ಮಾಡಿ ₹3,000 ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಇನ್‌ಸ್ಪೆಕ್ಟರ್ ಮಹಮ್ಮದ್ ಷರೀಫ್ ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕನನ್ನು ಬಂಧಿಸಿದರು.

ಅಧಿಕಾರಿಗಳ ಪ್ರತಿಕ್ರಿಯೆ.

ಈ ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ ಎಂದು ಲೋಕಾಯುಕ್ತ ಪೊಲೀಸರು ಹೇಳಿರುತ್ತಾರೆ. ಅಧಿಕಾರಿಗಳಾದ ಪ್ರಭಾರ ಎಸ್‌ಪಿ ನಂದಿನಿ ಬಿ.ಎನ್., ಡಿವೈಎಸ್‌ಪಿ ಗಾನ ಪಿ.ಕುಮಾರ್, ಇನ್‌ಸ್ಪೆಕ್ಟರ್ ಅಮಾನುಲ್ಲಾ ಎ., ಚಂದ್ರಶೇಖರ್ ಕೆ.ಎನ್., ಉಡುಪಿ ಠಾಣೆಯ ಇನ್‌ಸ್ಪೆಕ್ಟರ್ ಮಂಜುನಾಥ ಹಾಗೂ ಅವರ ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿರುತ್ತದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

9 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

14 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago