Latest

ಯಲ್ಲಾಪುರದ ಕಿರವತ್ತಿ ಚೆಕ್ ಪೋಸ್ಟ್ ನಲ್ಲಿ 1.20 ಲಕ್ಷ ಹಣ ಅಧಿಕಾರಿಗಳ ವಶಕ್ಕೆ

ಉತ್ತರಕನ್ನಡ ಜಿಲ್ಲೆಯಲ್ಲಿ ಬರುವ ಯಲ್ಲಾಪುರ ಮುಂಡಗೋಡ ,ಶಿರಸಿಗಳಲ್ಲಿ ಚುನಾವಣೆ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ ,ಅಷ್ಟೇ ಭರ್ಜರಿಯಾಗಿ ಅಕ್ರಮವಾಗಿ ಸಾಗಿಸುವ ಚುನಾವಣೆ ಪ್ರಯುಕ್ತ ಹಲವು ರೀತಿಯಲ್ಲಿ ಜನರಿಗೆ ಹಂಚಲು ವಸ್ತುಗಳು ಮತ್ತು ಹಣಗಳು ಸಾಗಿಸುವುದು ಸಾಮಾನ್ಯವಾಗಿದೆ, ಅವುಗಳನ್ನು ತಡೆಗಟ್ಟಲು ಚುನಾವಣಾ ಆಯೋಗದವರು ಆಯಾ ಜಾಗದಲ್ಲಿ ಚೆಕ್ ಪೋಸ್ಟ್ ನಿರ್ಮಿಸಿದ್ದು ನಿನ್ನೆ ಕಿರವತ್ತಿ ಚೆಕ್ ಪೋಸ್ಟ್ ನಲ್ಲಿ ಹಣವನ್ನು ವಶಕ್ಕೆ ಪಡೆದ ಘಟನೆ ನಡೆದಿದೆ,bಅರವಿಂದ ಬೇವಿನಗಿಡದ ,ಎಸ್ ಎಸ್ ಟಿ ತಂಡದ ಅಧಿಕಾರಿ ಇವರು ಉಲ್ಲೇಖಿತ ಪತ್ರದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಯಲ್ಲಾಪುರ ತಾಲ್ಲೂಕಿನ ಕಿರವತ್ತಿ ಚೆಕ್ ಪೋಸ್ಟ್ ನಲ್ಲಿ ದಿನಾಂಕ 28 – 03 – 2024 ರಂದು ಮದ್ಯಾನ 03 ಗಂಟೆಯ ಸುಮಾರು ಶ್ರೀ ವಿಶ್ವನಾಥ ಲೊಕ್ಕಯ್ಯ ಶೆಟ್ಟಿ ಇವರು ಪ್ರಯಾಣಿಸುತ್ತಿದ್ದ ವಾಹನ ಸಂಖ್ಯೆ MH 14 JR 9755 ವಾಹನವು ಪುಣೆಯಿಂದ ಉಡುಪಿಗೆ ಹೋಗುವ ಸಮಯದಲ್ಲಿ ಸದರಿ ವಾಹನವನ್ನು ಕರ್ತವ್ಯ ನಿರತ ಎಸ್ ಎಸ್ ಟಿ ತಂಡದವರು ಮತ್ತು ಪೊಲೀಸ್ ಸಿಬ್ಬಂದಿಗಳು ತಪಾಸಣೆ ನಡೆಸಲಾಗಿ 1.20.000-00 ರೂ ಗಳನ್ನು ಯಾವುದೇ ದಾಖಲೆಗಳಿಲ್ಲದ ನಗದು ದೊರಕಿದ್ದು ಅಧಿಕೃತ ದಾಖಲೆಗಳು ಪರಿಶೀಲನಾ ಸ್ಥಳದಲ್ಲಿ ಲಭ್ಯವಿಲ್ಲದ ಕಾರಣ ನಿಯಮಾನುಸಾರ ಮುಟ್ಟುಗೋಲು ಹಾಕಿಕೊಂಡಿರುವ ಬಗ್ಗೆ ಎಸ್ ಎಸ್ ಟಿ ತಂಡದವರು ಪಂಚನಾಮೆಯೊಂದಿಗೆ ಉಲ್ಲೇಖಿಸಿದ್ದಾರೆ .ಈ ಹಣವನ್ನು ಯಲ್ಲಾಪುರ ಉಪಖಜಾನೆಯಲ್ಲಿ ಇರಿಸಲಾಗಿದೆ ಎಂಬ ಮಾಹಿತಿಯನ್ನು ಮಾನ್ಯರ ಅವಗಾಹನೆಗಾಗಿ ಗೌರವ ಪೂರ್ವಕವಾಗಿ ಸಲ್ಲಿಸಿದೆ .

ವರದಿ: ಶ್ರೀಪಾದ್ ಎಸ್ ಏಚ್

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago