ಹಾಸನ: ಎನ್ಸಿಆರ್ ಪ್ರಕರಣವೊಂದನ್ನು ಇತ್ಯರ್ಥಪಡಿಸಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಹಳೇಬೀಡು ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ಲಂಚದ ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.
ಎನ್ಸಿಆರ್ ಪ್ರಕರಣವನ್ನು ಇತ್ಯರ್ಥಪಡಿಸುವುದಕ್ಕಾಗಿ ನವೀನ್ ಎಂಬುವವರ ಬಳಿ ಪಿಎಸ್ಐ ಮಂಜುನಾಥ್ ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ ಮೊದಲ ಹಂತವಾಗಿ ₹20 ಸಾವಿರ ನೀಡುವಂತೆ ಸೂಚಿಸಿದ್ದರು ಎಂದು ತಿಳಿದುಬಂದಿದೆ.
ಈ ಕುರಿತು ನವೀನ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಹಾಸನದ ಹೋಟೆಲ್ವೊಂದರಲ್ಲಿ ₹20 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಪಿಎಸ್ಐ ಮಂಜುನಾಥ್ ಅವರನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಇನ್ಸ್ಪೆಕ್ಟರ್ಗಳಾದ ಶಿಲ್ಪಾ ಹಾಗೂ ಗವಿರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಲಂಚದ ಹಣ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರಿಸಿದ್ದು, ಲಂಚದ ಬೇಡಿಕೆಯ ಹಿನ್ನೆಲೆ ಹಾಗೂ ಪ್ರಕರಣದ ಸಂಪೂರ್ಣ ವಿವರಗಳನ್ನು ಪರಿಶೀಲಿಸಲಾಗುತ್ತಿದೆ.
ಲಖನೌ: ಸರ್ಕಾರಿ ಅಧಿಕಾರಿಯೊಬ್ಬರು ಮಹಿಳೆಯೊಂದಿಗೆ ಹೋಟೆಲ್ ಕೊಠಡಿಯಲ್ಲಿ ಇರುವ ದೃಶ್ಯ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೀಗ…
ಗೌರಿಬಿದನೂರು: ನಗರದ ಬೈಪಾಸ್ ರಸ್ತೆಯಲ್ಲಿರುವ ತೇಜಸ್ ಕಂಫರ್ಟ್ ಲಾಡ್ಜ್ನಲ್ಲಿ ಎಸ್ಬಿಐ ಬ್ಯಾಂಕ್ ಮ್ಯಾನೇಜರ್ ಒಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ…
ನಲಗೊಂಡ: ಹೆಣ್ಣು ಮಗು ಹುಟ್ಟಿದ ಕಾರಣಕ್ಕೆ ಮಹಿಳೆಯೊಬ್ಬರು ಕೌಟುಂಬಿಕ ಒತ್ತಡ ಹಾಗೂ ಕಿರುಕುಳಕ್ಕೆ ಒಳಗಾಗಿದ್ದರೆಂಬ ಆರೋಪ ಕೇಳಿಬಂದಿದ್ದು, ಕೊನೆಗೆ ಬಾಣಂತಿಯೊಬ್ಬರು…
ಕೋಲಾರ: ಹಣ-ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆ ಮಾಡಿರುವ ಆರೋಪದ ಪ್ರಕರಣ ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ಚನ್ನಸಂದ್ರ ಗ್ರಾಮದಲ್ಲಿ ಬೆಳಕಿಗೆ…
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೂ ಮೊಬೈಲ್ ಫೋನ್…
ಪಾವಗಡ: ತಾಲೂಕಿನ ರಂಗಸಮುದ್ರದಲ್ಲಿರುವ ಕಸ್ತೂರಬಾ ಗಾಂಧಿ ವಸತಿ ನಿಲಯದಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಿಯಾಂಕ ಎಂಬ ಬಾಲಕಿ ಅನುಮಾನಾಸ್ಪದವಾಗಿ…