ಕಾರವಾರ: ಗುಡ್ಡಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ತರಗತಿ ಕೊಠಡಿಯಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾದ ಘಟನೆ ಕೆಲಕಾಲ ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಉಂಟುಮಾಡಿತು.
ತರಗತಿಯಲ್ಲಿ ಹಾವು ಬುಸುಗುಟ್ಟುತ್ತಿರುವುದನ್ನು ಗಮನಿಸಿದ ಶಿಕ್ಷಕರು ತಕ್ಷಣ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ ಸುರಕ್ಷತಾ ಕ್ರಮ ಕೈಗೊಂಡರು. ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು.
ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿ ಪರಿಶೀಲನೆ ನಡೆಸಿದಾಗ, ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ತರಗತಿಯ ಮೇಜಿನ ಕೆಳಗೆ ಸುತ್ತಿಕೊಂಡು ಕುಳಿತಿರುವುದು ಕಂಡುಬಂದಿತು. ಹಾವನ್ನು ಹೊರತೆಗೆದಲು ಯತ್ನಿಸಿದಾಗ ಅದು ಮೇಜಿನ ಮೇಲಿದ್ದ ಪುಸ್ತಕಗಳ ರಾಶಿಯೊಳಗೆ ನುಗ್ಗಿ ಅಡಗಿಕೊಂಡಿತು.
ದೀರ್ಘ ಕಾಲದ ಪ್ರಯತ್ನದ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಹಾವನ್ನು ಸುರಕ್ಷಿತವಾಗಿ ಹಿಡಿದು ದೂರದ ಅರಣ್ಯ ಪ್ರದೇಶದಲ್ಲಿ ಬಿಡುಗಡೆ ಮಾಡಿದರು.
ಸ್ಥಳೀಯರ ಮಾಹಿತಿ ಪ್ರಕಾರ, ಗುಡ್ಡಹಳ್ಳಿ ಸುತ್ತಮುತ್ತ ದಟ್ಟವಾದ ಮರಗಳು ಹಾಗೂ ತಂಪಾದ ವಾತಾವರಣ ಇರುವುದರಿಂದ ಕಾಳಿಂಗ ಸರ್ಪಗಳು ಕೆಲವೊಮ್ಮೆ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಗ್ರಾಮಸ್ಥರು ಸಾಮಾನ್ಯವಾಗಿ ಅವುಗಳನ್ನು ಕೊಲ್ಲದೇ ದೂರ ಓಡಿಸುವ ಪ್ರಯತ್ನ ಮಾಡುತ್ತಾರೆ ಎಂದು ತಿಳಿಸಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿಗಳ ಪ್ರಕಾರ, ಇಲಿ ಮತ್ತು ಹೆಗ್ಗಣಗಳಂತಹ ಸಣ್ಣ ಪ್ರಾಣಿಗಳನ್ನು ಬೇಟೆಯಾಡಲು ಹಾವು ತರಗತಿಗೆ ಬಂದಿರಬಹುದು. ಇತರ ಹಾವುಗಳ ವಾಸನೆಗಳನ್ನು ಕಾಳಿಂಗ ಸರ್ಪಗಳು ಸುಲಭವಾಗಿ ಗುರುತಿಸುವ ಸಾಮರ್ಥ್ಯ ಹೊಂದಿರುವುದರಿಂದ ಆ ವಾಸನೆ ಹಿಡಿದು ತರಗತಿಗೆ ನುಗ್ಗಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…