ಕಾರವಾರ: ಗುಡ್ಡಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ತರಗತಿ ಕೊಠಡಿಯಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾದ ಘಟನೆ ಕೆಲಕಾಲ ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಉಂಟುಮಾಡಿತು.
ತರಗತಿಯಲ್ಲಿ ಹಾವು ಬುಸುಗುಟ್ಟುತ್ತಿರುವುದನ್ನು ಗಮನಿಸಿದ ಶಿಕ್ಷಕರು ತಕ್ಷಣ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ ಸುರಕ್ಷತಾ ಕ್ರಮ ಕೈಗೊಂಡರು. ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು.
ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿ ಪರಿಶೀಲನೆ ನಡೆಸಿದಾಗ, ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ತರಗತಿಯ ಮೇಜಿನ ಕೆಳಗೆ ಸುತ್ತಿಕೊಂಡು ಕುಳಿತಿರುವುದು ಕಂಡುಬಂದಿತು. ಹಾವನ್ನು ಹೊರತೆಗೆದಲು ಯತ್ನಿಸಿದಾಗ ಅದು ಮೇಜಿನ ಮೇಲಿದ್ದ ಪುಸ್ತಕಗಳ ರಾಶಿಯೊಳಗೆ ನುಗ್ಗಿ ಅಡಗಿಕೊಂಡಿತು.
ದೀರ್ಘ ಕಾಲದ ಪ್ರಯತ್ನದ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಹಾವನ್ನು ಸುರಕ್ಷಿತವಾಗಿ ಹಿಡಿದು ದೂರದ ಅರಣ್ಯ ಪ್ರದೇಶದಲ್ಲಿ ಬಿಡುಗಡೆ ಮಾಡಿದರು.
ಸ್ಥಳೀಯರ ಮಾಹಿತಿ ಪ್ರಕಾರ, ಗುಡ್ಡಹಳ್ಳಿ ಸುತ್ತಮುತ್ತ ದಟ್ಟವಾದ ಮರಗಳು ಹಾಗೂ ತಂಪಾದ ವಾತಾವರಣ ಇರುವುದರಿಂದ ಕಾಳಿಂಗ ಸರ್ಪಗಳು ಕೆಲವೊಮ್ಮೆ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಗ್ರಾಮಸ್ಥರು ಸಾಮಾನ್ಯವಾಗಿ ಅವುಗಳನ್ನು ಕೊಲ್ಲದೇ ದೂರ ಓಡಿಸುವ ಪ್ರಯತ್ನ ಮಾಡುತ್ತಾರೆ ಎಂದು ತಿಳಿಸಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿಗಳ ಪ್ರಕಾರ, ಇಲಿ ಮತ್ತು ಹೆಗ್ಗಣಗಳಂತಹ ಸಣ್ಣ ಪ್ರಾಣಿಗಳನ್ನು ಬೇಟೆಯಾಡಲು ಹಾವು ತರಗತಿಗೆ ಬಂದಿರಬಹುದು. ಇತರ ಹಾವುಗಳ ವಾಸನೆಗಳನ್ನು ಕಾಳಿಂಗ ಸರ್ಪಗಳು ಸುಲಭವಾಗಿ ಗುರುತಿಸುವ ಸಾಮರ್ಥ್ಯ ಹೊಂದಿರುವುದರಿಂದ ಆ ವಾಸನೆ ಹಿಡಿದು ತರಗತಿಗೆ ನುಗ್ಗಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…