ಕಾರವಾರ: ಗುಡ್ಡಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ತರಗತಿ ಕೊಠಡಿಯಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾದ ಘಟನೆ ಕೆಲಕಾಲ ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಉಂಟುಮಾಡಿತು.
ತರಗತಿಯಲ್ಲಿ ಹಾವು ಬುಸುಗುಟ್ಟುತ್ತಿರುವುದನ್ನು ಗಮನಿಸಿದ ಶಿಕ್ಷಕರು ತಕ್ಷಣ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ ಸುರಕ್ಷತಾ ಕ್ರಮ ಕೈಗೊಂಡರು. ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು.
ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿ ಪರಿಶೀಲನೆ ನಡೆಸಿದಾಗ, ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ತರಗತಿಯ ಮೇಜಿನ ಕೆಳಗೆ ಸುತ್ತಿಕೊಂಡು ಕುಳಿತಿರುವುದು ಕಂಡುಬಂದಿತು. ಹಾವನ್ನು ಹೊರತೆಗೆದಲು ಯತ್ನಿಸಿದಾಗ ಅದು ಮೇಜಿನ ಮೇಲಿದ್ದ ಪುಸ್ತಕಗಳ ರಾಶಿಯೊಳಗೆ ನುಗ್ಗಿ ಅಡಗಿಕೊಂಡಿತು.
ದೀರ್ಘ ಕಾಲದ ಪ್ರಯತ್ನದ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಹಾವನ್ನು ಸುರಕ್ಷಿತವಾಗಿ ಹಿಡಿದು ದೂರದ ಅರಣ್ಯ ಪ್ರದೇಶದಲ್ಲಿ ಬಿಡುಗಡೆ ಮಾಡಿದರು.
ಸ್ಥಳೀಯರ ಮಾಹಿತಿ ಪ್ರಕಾರ, ಗುಡ್ಡಹಳ್ಳಿ ಸುತ್ತಮುತ್ತ ದಟ್ಟವಾದ ಮರಗಳು ಹಾಗೂ ತಂಪಾದ ವಾತಾವರಣ ಇರುವುದರಿಂದ ಕಾಳಿಂಗ ಸರ್ಪಗಳು ಕೆಲವೊಮ್ಮೆ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಗ್ರಾಮಸ್ಥರು ಸಾಮಾನ್ಯವಾಗಿ ಅವುಗಳನ್ನು ಕೊಲ್ಲದೇ ದೂರ ಓಡಿಸುವ ಪ್ರಯತ್ನ ಮಾಡುತ್ತಾರೆ ಎಂದು ತಿಳಿಸಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿಗಳ ಪ್ರಕಾರ, ಇಲಿ ಮತ್ತು ಹೆಗ್ಗಣಗಳಂತಹ ಸಣ್ಣ ಪ್ರಾಣಿಗಳನ್ನು ಬೇಟೆಯಾಡಲು ಹಾವು ತರಗತಿಗೆ ಬಂದಿರಬಹುದು. ಇತರ ಹಾವುಗಳ ವಾಸನೆಗಳನ್ನು ಕಾಳಿಂಗ ಸರ್ಪಗಳು ಸುಲಭವಾಗಿ ಗುರುತಿಸುವ ಸಾಮರ್ಥ್ಯ ಹೊಂದಿರುವುದರಿಂದ ಆ ವಾಸನೆ ಹಿಡಿದು ತರಗತಿಗೆ ನುಗ್ಗಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…