ವಿಧಾನಸೌಧದ ಮುಂದೆ ದೊಡ್ಡದಾಗಿ ಸರ್ಕಾರಿ ಕೆಲಸ ದೇವರ ಕೆಲಸ ಎಂದು ನಮೂದು ಮಾಡಿದ್ದರೂ, ಅಲ್ಲಿ ನಡೆಯುವುದು ಬರೀ ಭ್ರಷ್ಟಾಚಾರ ಎನ್ನುವುದು ಸಮಾನ್ಯ ಸಾರ್ವಜನಿಕರ ದೂರು ಆಗಿದೆ. ಆದಕ್ಕೆ ಪೂರಕ ಎಂಬಂತೆ ನಿನ್ನೆ ಸಂಜೆ ವಿಧಾನಸೌಧದಲ್ಲಿ ಅಧಿಕೃತ ದಾಖಲೆಗಳಿಲ್ಲದ 10 ಲಕ್ಷ ರೂ. ನಗದು ಹಣ ತೆಗೆದುಕೊಂಡು ಹೋಗುತ್ತಿದ್ದ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಅವರಿಂದ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ.
ಇನ್ನು ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್ ಜಗದೀಶ್ ರಿಂದ ಹಣ ಜಪ್ತಿ ಮಾಡಲಾಗಿದೆ. ಕೆಲಸ ನಿಮಿತ್ತ ವಿಕಾಸ ಸೌಧಕ್ಕೆ ಬಂದಿದ್ದ ಇಂಜಿನಿಯರ್ ಜಗದೀಶ್ ಅವರನ್ನು ವಿಧಾನಸೌಧ ಪಶ್ಚಿಮ ದ್ವಾರದ ಗೇಟ್ ಬಳಿ ಪೊಲೀಸರು ಭದ್ರತೆ ದೃಷ್ಟಿಯಿಂದ ಪರಿಶೀಲನೆ ಮಾಡಿದ್ದಾರೆ. ಈ ವೇಲೆ ಸೂಟ್ಕೇಸ್ನಲ್ಲಿ 10 ಲಕ್ಷ ರೂ. ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಪೊಲೀಸರು ವಿಚಾರಿಸಿದಾಗ ತಾನು ಈ ಹಣವನ್ನು ಮಂಡ್ಯಕ್ಕೆ ತೆಗೆದುಕೊಂಡು ಹೋಗಲು ತಂದಿರುವುದಾಗಿ ಪೊಲೀಸರ ಮುಂದೆ ಹೇಳಿದ್ದಾರೆ.
ಹಣದ ಬಗ್ಗೆ ದಾಖಲೆಗಳು ಲಭ್ಯವಾಗಿಲ್ಲ: ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ ಗೌಡ ಅವರು, ವಿಧಾನ ಸೌಧ ಮತ್ತು ವಿಕಾಸ ಸೌಧ ಭದ್ರತೆಯ ದಾಖಲೆಯಿಲ್ಲದ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. PWD ಇಲಾಖೆಯ ಜೂನಿಯರ್ ಇಂಜಿನಿಯರ್ ಒರ್ವರು ಹಣದ ಸಹಿತ ಬಂದಿದ್ದಾರೆ. ಈ ವೇಳೆ ಹಣದ ಬಗ್ಗೆ ಪ್ರಶ್ನೆ ಮಾಡಿದ್ದಾರೆ ಸರಿಯಾದ ಉತ್ತರ ಸಿಕ್ಕಿಲ್ಲ. ಬಳಿಕ ವಿಧಾನ ಸೌಧ ಪೊಲೀಸ್ ಠಾಣೆ ಗೆ ಮಾಹಿತಿ ನೀಡಿ ದೂರು ಬಂದಿದೆ. ದೂರಿನ ಅನ್ವಯ ಕೇಸ್ ದಾಖಲು ಮಾಡಲಾಗಿದೆ. ಹತ್ತು ಲಕ್ಷದ ಐವತ್ತು ಸಾವಿರ ಹಣ ವಶಕ್ಕೆ ಪಡೆಯಲಾಗಿದೆ. ನ್ಯಾಯಾಲಯಕ್ಕೆ ಹಣವನ್ನು ಹಾಜರು ಪಡಿಸಲಿದ್ದೆವೆ. ಹಣ ತಂದಿದ್ದ ವ್ಯಕ್ತಿಗೆ ನೋಟೀಸ್ ನೀಡಲಾಗಿದೆ. ಎಲ್ಲಿ ಡ್ರಾ ಮಾಡಲಾಗಿದೆ. ಯಾರಿಗೆ ಕೊಡುವ ಉದ್ದೇಶ ಇದೆ ಎಂಬುದನ್ನು ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.
ಚುನಾವಣೆ ವೇಳೆ ಗಿಮಿಕ್ ಮಾಡಲಾಗುತ್ತಿದೆ: ವಿಧಾನಸೌಧದಲ್ಲಿ 10 ಲಕ್ಷ ಹಣ ಸಿಕ್ಕಿದೆ. ಯಾವ ಉದ್ದೇಶಕ್ಕೆ ಯಾರಿಗೆ ಹಣ ತಂದಿದ್ದ ಎನ್ನೋದು ಗೊತ್ತಾಗಬೇಕು. ಈಗಷ್ಟೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡುವುದು ತಪ್ಪಾಗುತ್ತದೆ. ಅವನ ಸ್ಟೇಟ್ ಮೆಂಟ್ ಪಡೆದ ಬಳಿಕವಷ್ಟೇ ಗೊತ್ತಾಗಬೇಕು. ಶೇಕಡಾ 40% ಅದು-ಇದೂ ಎಲ್ಲ ಹಿಂದಿನ ಸರ್ಕಾರದಲ್ಲೇ ನಡೆದಿತ್ತು. ಇಲ್ಲದಿದ್ದರೆ ಅವರು ಸರ್ಕಾರದಿಂದ ಯಾಕೆ ಇಳಿಯುತ್ತಿದ್ದರು? ಸುಮ್ಮನೆ ಚುನಾವಣೆ ಸಂದರ್ಭ ಗಿಮಿಕ್ ಮಾಡ್ತಿದ್ದಾರೆ. ಈಗಾಗಲೇ ಒಬ್ಬ ಮಂತ್ರಿ ಕೇಸ್ ಹಾಕಿದ್ದಾರೆ ಕೇಸ್ ತನಿಖೆ ನಡೆಯುತ್ತಿದೆ.- ಗೃಹ ಸಚಿವ ಆರಗ ಜ್ಞಾನೇಂದ್ರ
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…