Latest

ಶಕ್ತಿಸೌಧಕ್ಕೆ ತಂದಿದ್ದ 10 ಲಕ್ಷ ನಗದು ಜಪ್ತಿ!!!

ವಿಧಾನಸೌಧದ ಮುಂದೆ ದೊಡ್ಡದಾಗಿ ಸರ್ಕಾರಿ ಕೆಲಸ ದೇವರ ಕೆಲಸ ಎಂದು ನಮೂದು ಮಾಡಿದ್ದರೂ, ಅಲ್ಲಿ  ನಡೆಯುವುದು ಬರೀ ಭ್ರಷ್ಟಾಚಾರ ಎನ್ನುವುದು ಸಮಾನ್ಯ ಸಾರ್ವಜನಿಕರ ದೂರು ಆಗಿದೆ. ಆದಕ್ಕೆ ಪೂರಕ ಎಂಬಂತೆ ನಿನ್ನೆ ಸಂಜೆ ವಿಧಾನಸೌಧದಲ್ಲಿ ಅಧಿಕೃತ ದಾಖಲೆಗಳಿಲ್ಲದ 10 ಲಕ್ಷ ರೂ. ನಗದು ಹಣ ತೆಗೆದುಕೊಂಡು ಹೋಗುತ್ತಿದ್ದ ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ಅವರಿಂದ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ.

ಇನ್ನು ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್ ಜಗದೀಶ್ ರಿಂದ ಹಣ ಜಪ್ತಿ ಮಾಡಲಾಗಿದೆ. ಕೆಲಸ ನಿಮಿತ್ತ ವಿಕಾಸ ಸೌಧಕ್ಕೆ ಬಂದಿದ್ದ ಇಂಜಿನಿಯರ್ ಜಗದೀಶ್ ಅವರನ್ನು ವಿಧಾನಸೌಧ ಪಶ್ಚಿಮ ದ್ವಾರದ ಗೇಟ್‌ ಬಳಿ ಪೊಲೀಸರು ಭದ್ರತೆ ದೃಷ್ಟಿಯಿಂದ ಪರಿಶೀಲನೆ ಮಾಡಿದ್ದಾರೆ. ಈ ವೇಲೆ ಸೂಟ್ಕೇಸ್‌ನಲ್ಲಿ 10 ಲಕ್ಷ ರೂ. ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಪೊಲೀಸರು ವಿಚಾರಿಸಿದಾಗ ತಾನು ಈ ಹಣವನ್ನು ಮಂಡ್ಯಕ್ಕೆ ತೆಗೆದುಕೊಂಡು ಹೋಗಲು ತಂದಿರುವುದಾಗಿ ಪೊಲೀಸರ ಮುಂದೆ ಹೇಳಿದ್ದಾರೆ.

ಹಣದ ಬಗ್ಗೆ ದಾಖಲೆಗಳು ಲಭ್ಯವಾಗಿಲ್ಲ: ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ ಗೌಡ ಅವರು, ವಿಧಾನ ಸೌಧ ಮತ್ತು ವಿಕಾಸ ಸೌಧ ಭದ್ರತೆಯ ದಾಖಲೆಯಿಲ್ಲದ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. PWD ಇಲಾಖೆಯ ಜೂನಿಯರ್ ಇಂಜಿನಿಯರ್ ಒರ್ವರು ಹಣದ ಸಹಿತ ಬಂದಿದ್ದಾರೆ. ಈ ವೇಳೆ ಹಣದ ಬಗ್ಗೆ ಪ್ರಶ್ನೆ ಮಾಡಿದ್ದಾರೆ ಸರಿಯಾದ ಉತ್ತರ ಸಿಕ್ಕಿಲ್ಲ. ಬಳಿಕ ವಿಧಾನ ಸೌಧ ಪೊಲೀಸ್ ಠಾಣೆ ಗೆ ಮಾಹಿತಿ ನೀಡಿ ದೂರು ಬಂದಿದೆ. ದೂರಿನ ಅನ್ವಯ ಕೇಸ್ ದಾಖಲು ಮಾಡಲಾಗಿದೆ. ಹತ್ತು ಲಕ್ಷದ ಐವತ್ತು ಸಾವಿರ ಹಣ ವಶಕ್ಕೆ ಪಡೆಯಲಾಗಿದೆ. ನ್ಯಾಯಾಲಯಕ್ಕೆ ಹಣವನ್ನು ಹಾಜರು ಪಡಿಸಲಿದ್ದೆವೆ. ಹಣ ತಂದಿದ್ದ ವ್ಯಕ್ತಿಗೆ ನೋಟೀಸ್ ನೀಡಲಾಗಿದೆ. ಎಲ್ಲಿ ಡ್ರಾ ಮಾಡಲಾಗಿದೆ. ಯಾರಿಗೆ ಕೊಡುವ ಉದ್ದೇಶ ಇದೆ ಎಂಬುದನ್ನು ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

ಚುನಾವಣೆ ವೇಳೆ ಗಿಮಿಕ್‌ ಮಾಡಲಾಗುತ್ತಿದೆ: ವಿಧಾನಸೌಧದಲ್ಲಿ 10 ಲಕ್ಷ ಹಣ ಸಿಕ್ಕಿದೆ. ಯಾವ ಉದ್ದೇಶಕ್ಕೆ ಯಾರಿಗೆ ಹಣ ತಂದಿದ್ದ ಎನ್ನೋದು ಗೊತ್ತಾಗಬೇಕು. ಈಗಷ್ಟೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡುವುದು ತಪ್ಪಾಗುತ್ತದೆ. ಅವನ ಸ್ಟೇಟ್ ಮೆಂಟ್ ಪಡೆದ ಬಳಿಕವಷ್ಟೇ ಗೊತ್ತಾಗಬೇಕು. ಶೇಕಡಾ 40% ಅದು-ಇದೂ ಎಲ್ಲ ಹಿಂದಿನ ಸರ್ಕಾರದಲ್ಲೇ ನಡೆದಿತ್ತು. ಇಲ್ಲದಿದ್ದರೆ ಅವರು ಸರ್ಕಾರದಿಂದ ಯಾಕೆ ಇಳಿಯುತ್ತಿದ್ದರು? ಸುಮ್ಮನೆ ಚುನಾವಣೆ ಸಂದರ್ಭ ಗಿಮಿಕ್ ಮಾಡ್ತಿದ್ದಾರೆ. ಈಗಾಗಲೇ ಒಬ್ಬ ಮಂತ್ರಿ ಕೇಸ್ ಹಾಕಿದ್ದಾರೆ ಕೇಸ್ ತನಿಖೆ ನಡೆಯುತ್ತಿದೆ.- ಗೃಹ ಸಚಿವ ಆರಗ ಜ್ಞಾನೇಂದ್ರ

ಭ್ರಷ್ಟರ ಬೇಟೆ

Recent Posts

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

16 hours ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

16 hours ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

16 hours ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

16 hours ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

2 days ago