Latest

ಶಕ್ತಿಸೌಧಕ್ಕೆ ತಂದಿದ್ದ 10 ಲಕ್ಷ ನಗದು ಜಪ್ತಿ!!!

ವಿಧಾನಸೌಧದ ಮುಂದೆ ದೊಡ್ಡದಾಗಿ ಸರ್ಕಾರಿ ಕೆಲಸ ದೇವರ ಕೆಲಸ ಎಂದು ನಮೂದು ಮಾಡಿದ್ದರೂ, ಅಲ್ಲಿ  ನಡೆಯುವುದು ಬರೀ ಭ್ರಷ್ಟಾಚಾರ ಎನ್ನುವುದು ಸಮಾನ್ಯ ಸಾರ್ವಜನಿಕರ ದೂರು ಆಗಿದೆ. ಆದಕ್ಕೆ ಪೂರಕ ಎಂಬಂತೆ ನಿನ್ನೆ ಸಂಜೆ ವಿಧಾನಸೌಧದಲ್ಲಿ ಅಧಿಕೃತ ದಾಖಲೆಗಳಿಲ್ಲದ 10 ಲಕ್ಷ ರೂ. ನಗದು ಹಣ ತೆಗೆದುಕೊಂಡು ಹೋಗುತ್ತಿದ್ದ ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ಅವರಿಂದ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ.

ಇನ್ನು ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್ ಜಗದೀಶ್ ರಿಂದ ಹಣ ಜಪ್ತಿ ಮಾಡಲಾಗಿದೆ. ಕೆಲಸ ನಿಮಿತ್ತ ವಿಕಾಸ ಸೌಧಕ್ಕೆ ಬಂದಿದ್ದ ಇಂಜಿನಿಯರ್ ಜಗದೀಶ್ ಅವರನ್ನು ವಿಧಾನಸೌಧ ಪಶ್ಚಿಮ ದ್ವಾರದ ಗೇಟ್‌ ಬಳಿ ಪೊಲೀಸರು ಭದ್ರತೆ ದೃಷ್ಟಿಯಿಂದ ಪರಿಶೀಲನೆ ಮಾಡಿದ್ದಾರೆ. ಈ ವೇಲೆ ಸೂಟ್ಕೇಸ್‌ನಲ್ಲಿ 10 ಲಕ್ಷ ರೂ. ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಪೊಲೀಸರು ವಿಚಾರಿಸಿದಾಗ ತಾನು ಈ ಹಣವನ್ನು ಮಂಡ್ಯಕ್ಕೆ ತೆಗೆದುಕೊಂಡು ಹೋಗಲು ತಂದಿರುವುದಾಗಿ ಪೊಲೀಸರ ಮುಂದೆ ಹೇಳಿದ್ದಾರೆ.

ಹಣದ ಬಗ್ಗೆ ದಾಖಲೆಗಳು ಲಭ್ಯವಾಗಿಲ್ಲ: ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ ಗೌಡ ಅವರು, ವಿಧಾನ ಸೌಧ ಮತ್ತು ವಿಕಾಸ ಸೌಧ ಭದ್ರತೆಯ ದಾಖಲೆಯಿಲ್ಲದ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. PWD ಇಲಾಖೆಯ ಜೂನಿಯರ್ ಇಂಜಿನಿಯರ್ ಒರ್ವರು ಹಣದ ಸಹಿತ ಬಂದಿದ್ದಾರೆ. ಈ ವೇಳೆ ಹಣದ ಬಗ್ಗೆ ಪ್ರಶ್ನೆ ಮಾಡಿದ್ದಾರೆ ಸರಿಯಾದ ಉತ್ತರ ಸಿಕ್ಕಿಲ್ಲ. ಬಳಿಕ ವಿಧಾನ ಸೌಧ ಪೊಲೀಸ್ ಠಾಣೆ ಗೆ ಮಾಹಿತಿ ನೀಡಿ ದೂರು ಬಂದಿದೆ. ದೂರಿನ ಅನ್ವಯ ಕೇಸ್ ದಾಖಲು ಮಾಡಲಾಗಿದೆ. ಹತ್ತು ಲಕ್ಷದ ಐವತ್ತು ಸಾವಿರ ಹಣ ವಶಕ್ಕೆ ಪಡೆಯಲಾಗಿದೆ. ನ್ಯಾಯಾಲಯಕ್ಕೆ ಹಣವನ್ನು ಹಾಜರು ಪಡಿಸಲಿದ್ದೆವೆ. ಹಣ ತಂದಿದ್ದ ವ್ಯಕ್ತಿಗೆ ನೋಟೀಸ್ ನೀಡಲಾಗಿದೆ. ಎಲ್ಲಿ ಡ್ರಾ ಮಾಡಲಾಗಿದೆ. ಯಾರಿಗೆ ಕೊಡುವ ಉದ್ದೇಶ ಇದೆ ಎಂಬುದನ್ನು ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

ಚುನಾವಣೆ ವೇಳೆ ಗಿಮಿಕ್‌ ಮಾಡಲಾಗುತ್ತಿದೆ: ವಿಧಾನಸೌಧದಲ್ಲಿ 10 ಲಕ್ಷ ಹಣ ಸಿಕ್ಕಿದೆ. ಯಾವ ಉದ್ದೇಶಕ್ಕೆ ಯಾರಿಗೆ ಹಣ ತಂದಿದ್ದ ಎನ್ನೋದು ಗೊತ್ತಾಗಬೇಕು. ಈಗಷ್ಟೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡುವುದು ತಪ್ಪಾಗುತ್ತದೆ. ಅವನ ಸ್ಟೇಟ್ ಮೆಂಟ್ ಪಡೆದ ಬಳಿಕವಷ್ಟೇ ಗೊತ್ತಾಗಬೇಕು. ಶೇಕಡಾ 40% ಅದು-ಇದೂ ಎಲ್ಲ ಹಿಂದಿನ ಸರ್ಕಾರದಲ್ಲೇ ನಡೆದಿತ್ತು. ಇಲ್ಲದಿದ್ದರೆ ಅವರು ಸರ್ಕಾರದಿಂದ ಯಾಕೆ ಇಳಿಯುತ್ತಿದ್ದರು? ಸುಮ್ಮನೆ ಚುನಾವಣೆ ಸಂದರ್ಭ ಗಿಮಿಕ್ ಮಾಡ್ತಿದ್ದಾರೆ. ಈಗಾಗಲೇ ಒಬ್ಬ ಮಂತ್ರಿ ಕೇಸ್ ಹಾಕಿದ್ದಾರೆ ಕೇಸ್ ತನಿಖೆ ನಡೆಯುತ್ತಿದೆ.- ಗೃಹ ಸಚಿವ ಆರಗ ಜ್ಞಾನೇಂದ್ರ

ಭ್ರಷ್ಟರ ಬೇಟೆ

Recent Posts

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

13 hours ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

13 hours ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

13 hours ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

19 hours ago

ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ಯುದ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…

19 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆಗೆ ಸಂಚು: ಪತ್ನಿ ಸೇರಿ ಐವರ ಬಂಧನ

ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…

19 hours ago