Categories: Latest

400 ವರ್ಷ ಹಿಂದಿನ ರಾಜನೆಂದು ಹೇಳುತ್ತಿರುವ 10 ವರ್ಷದ ಬಾಲಕ: ಪುನರ್ಜನ್ಮದ ರಹಸ್ಯವೇ?

ಪುನರ್ಜನ್ಮ ಎಂಬುದು ಇಂದಿಗೂ ವಿಜ್ಞಾನಕ್ಕೆ ಸವಾಲಾಗಿರುವ ಒಂದು ಗೂಢ ವಿಷಯ. ಕೆಲವೊಮ್ಮೆ ಸಣ್ಣ ಮಕ್ಕಳು ತಮ್ಮ ಹಿಂದಿನ ಜನ್ಮದ ಬಗ್ಗೆ ಹೇಳುವ ವಿಚಾರಗಳು ಜನರಲ್ಲಿ ಅಚ್ಚರಿ ಮೂಡಿಸುತ್ತವೆ. ಇದೀಗ ರಾಜಸ್ಥಾನದ ಟೋಂಕ್ ಜಿಲ್ಲೆಯಲ್ಲಿ ನಡೆದ ಒಂದು ಘಟನೆ ಇದೇ ರೀತಿಯ ಕುತೂಹಲವನ್ನು ಹುಟ್ಟುಹಾಕಿದೆ.

ಟೋಂಕ್ ಜಿಲ್ಲೆಯ ಜೈಕಮಾಬಾದ್ ಗ್ರಾಮದ 10 ವರ್ಷದ ಕನ್ಹಾರಾಮ್ ಬೈರ್ವಾ ಎಂಬ ಬಾಲಕ, ತಾನು ಸುಮಾರು 400 ವರ್ಷಗಳ ಹಿಂದೆ ಆಳ್ವಿಕೆ ನಡೆಸಿದ ಆಮೀರ್‌ನ ಪ್ರಸಿದ್ಧ ರಾಜ ಮಾನ್ ಸಿಂಗ್ ಎಂದು ಹೇಳಿಕೊಳ್ಳುತ್ತಿದ್ದು, ಈ ಹೇಳಿಕೆ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಕಳೆದ ಮೂರು ವರ್ಷಗಳಿಂದ ಕನ್ಹಾರಾಮ್ ತನ್ನ ಕುಟುಂಬದವರಿಗೆ “ನನ್ನನ್ನು ಆಮೀರ್ ಕೋಟೆಗೆ ಕರೆದುಕೊಂಡು ಹೋಗಿ, ನಾನು ಅಲ್ಲಿನ ರಾಜ” ಎಂದು ಒತ್ತಾಯಿಸುತ್ತಿದ್ದಾನೆ. ಆರಂಭದಲ್ಲಿ ಇದನ್ನು ಕುಟುಂಬದವರು ಮಗುವಿನ ಕಲ್ಪನೆ ಎಂದು ನಿರ್ಲಕ್ಷಿಸಿದ್ದರು. ಆದರೆ ಕಾಲಕ್ರಮೇಣ ಆತ ಹೇಳುತ್ತಿರುವ ಐತಿಹಾಸಿಕ ಘಟನೆಗಳು, ಯುದ್ಧಗಳ ವಿವರಗಳು ಹಾಗೂ ಆತನ ವರ್ತನೆಯಲ್ಲಿ ಕಾಣುತ್ತಿರುವ ಬದಲಾವಣೆಗಳು ಎಲ್ಲರ ಗಮನ ಸೆಳೆದಿವೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಬಾಲಕ, “ನನ್ನ ಹೆಸರು ರಾಜ ಮಾನ್ ಸಿಂಗ್. ನನಗೆ ಇಬ್ಬರು ರಾಣಿಯರು ಮತ್ತು ಮೂವರು ಸಹೋದರರಿದ್ದರು. ಜೈಪುರದ ಸವಾಯಿ ಮಾನ್ ಸಿಂಗ್ ಆಸ್ಪತ್ರೆ ನನ್ನ ಹೆಸರಿನಲ್ಲಿದೆ” ಎಂದು ಹೇಳಿದ್ದಾನೆ. ಇತಿಹಾಸದ ಪ್ರಕಾರ ರಾಜ ಮಾನ್ ಸಿಂಗ್ ಮೊಘಲ್ ಚಕ್ರವರ್ತಿ ಅಕ್ಬರ್‌ನ ಪ್ರಮುಖ ಸೇನಾಪತಿಯಾಗಿದ್ದು, 16ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ್ದರು. ಹಳದಿಘಾಟಿ ಯುದ್ಧದಲ್ಲಿ ಮಹಾರಾಣಾ ಪ್ರತಾಪ್ ವಿರುದ್ಧ ಹೋರಾಡಿದ್ದೆ ಎಂಬುದನ್ನೂ ಬಾಲಕ ಹೇಳುತ್ತಿರುವುದು ಆಶ್ಚರ್ಯ ಮೂಡಿಸಿದೆ.

ಇದಲ್ಲದೆ, ಆಮೀರ್ ಕೋಟೆಯ ಶೀಲಾ ದೇವಿ ದೇವಸ್ಥಾನದ ಬಗ್ಗೆ ಕೂಡ ಬಾಲಕ ನೀಡುತ್ತಿರುವ ಮಾಹಿತಿ ಹೆಚ್ಚು ಗಮನ ಸೆಳೆದಿದೆ. “ನಾನೇ ಬಂಗಾಳದಿಂದ ಶೀಲಾ ದೇವಿಯ ಮೂರ್ತಿಯನ್ನು ತರಿಸಿ ಆಮೀರ್‌ನಲ್ಲಿ ಪ್ರತಿಷ್ಠಾಪಿಸಿದ್ದೆ. ಅಲ್ಲಿ ರಹಸ್ಯ ಕೋಣೆಯಲ್ಲಿ ಅಸಲಿ ಮೂರ್ತಿ ಇಂದಿಗೂ ಇದೆ” ಎಂದು ಆತ ಹೇಳುತ್ತಾನೆ. ಇತಿಹಾಸದಲ್ಲಿಯೂ ರಾಜ ಮಾನ್ ಸಿಂಗ್ ಶೀಲಾ ದೇವಿಯ ಮೂರ್ತಿಯನ್ನು ಬಂಗಾಳದಿಂದ ತಂದಿದ್ದಾರೆ ಎಂಬ ಉಲ್ಲೇಖವಿದೆ.

ಕುಟುಂಬದವರ ಪ್ರಕಾರ, ಕನ್ಹಾರಾಮ್ ಈಗ ಸಾಮಾನ್ಯ ಮಗುವಿನಂತೆ ವರ್ತಿಸುತ್ತಿಲ್ಲ. ಆಹಾರದಲ್ಲಿ ಹೆಚ್ಚಿನ ತುಪ್ಪ ಬೇಕೆಂದು ಒತ್ತಾಯಿಸುವುದು, “ನಾನು ರಾಜ” ಎಂದು ಹೇಳುವುದು ಹಾಗೂ ಮನೆಯವರೊಂದಿಗೆ ಸಾಮಾನ್ಯವಾಗಿ ಬೆರೆಯದಿರುವುದು ಗಮನಾರ್ಹವಾಗಿದೆ. ಆತನ ಮಾತು ಹಾಗೂ ನಡೆ-ನುಡಿಯಲ್ಲಿ ರಾಜವಂಶದ ಛಾಯೆ ಕಾಣಿಸುತ್ತಿದೆ ಎಂದು ಕುಟುಂಬದವರು ಹೇಳಿದ್ದಾರೆ.

ಈ ಘಟನೆ ಪುನರ್ಜನ್ಮದ ನಿಜಾಸ್ತಿ ಅಥವಾ ಮಾನಸಿಕ ಭ್ರಮೆಯೇ ಎಂಬ ಪ್ರಶ್ನೆಯನ್ನು ಮತ್ತೆ ಮುಂದಿಟ್ಟಿದ್ದು, ಜನರಲ್ಲಿ ಹಾಗೂ ಇತಿಹಾಸಕಾರರಲ್ಲಿ ಕುತೂಹಲ ಕೆರಳಿಸಿದೆ.

https://twitter.com/Mukeshbaitu/status/2045007219159388664?ref_src=twsrc%5Etfw

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

16 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

16 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

16 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

16 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

16 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

16 hours ago