ಕರ್ನಾಟಕ ಸರ್ಕಾರದ ಆದೇಶದಂತೆ ಬಂಗಾರಪೇಟೆ ಪುರಸಭೆ ವ್ಯಾಪ್ತಿಯಲ್ಲಿ ವ್ಯಾಪಾರ/ಉದ್ದಿಮೆ/ಕೈಗಾರಿಕೆಗಳನ್ನು ನಡೆಸುತ್ತಿರುವವರು ಸಾರ್ವಜನಿಕರ ಮಾಹಿತಿಗಾಗಿ ತಮ್ಮ ಅಂಗಡಿ ಮುಂಗಟ್ಟುಗಳ ನಾಮಫಲಕಗಳನ್ನು ಬರೆಸಿಕೊಂಡಿರುತ್ತಾರೆ. ಆದರೆ ಸರ್ಕಾರದ ಆದೇಶದಂತೆ ನಾಮಫಲಕಗಳಲ್ಲಿ ಕನ್ನಡ ಭಾಷೆಯಲ್ಲಿ ಶೇ. 60% ರಷ್ಟು ಬಾಕಿ ಉಳಿದ ಶೇ 40% ರಷ್ಟು ಬೇರೆ ಭಾಷೆ ಬರೆಸಿ ಕೊಳ್ಳಬಹುದಾಗಿರುತ್ತದೆ. ಇದರಂತೆ ಸರ್ಕಾರದ ಆದೇಶದಂತೆ ಕ್ರಮವಹಿಸಲು ಬಂಗಾರಪೇಟೆ ಪುರಸಭೆ ಕಚೇರಿ ಸಿಬ್ಬಂದಿವರ್ಗದವರು ಖುದ್ದಾಗಿ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಹಾಗೂ ಧ್ವನಿವರ್ಧಕಗಳ ಮೂಲಕ ಹಲವಾರು ಬಾರಿ ವ್ಯಾಪಕ ಪ್ರಚಾರ ನೀಡಲಾಗಿದೆ. ಆದರೂ ಸಹ ಇದಕ್ಕೆ ಕೆಲವರು ಸ್ಪಂದಿಸದೆ ಇನ್ನು ಹಳೆಯ ನಾಮಫಲಕಗಳನ್ನು ಮುಂದುವರಿಸಿಕೊಂಡು ಬರುತ್ತಿರುವುದನ್ನು ಬಂಗಾರಪೇಟೆ ಪುರಸಭೆಯು ಗಂಭೀರವಾಗಿ ಪರಿಗಣಿಸಿದೆ.
ಸರ್ಕಾರದ ಆದೇಶದಂತೆ ಶೇ. 60% ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕಗಳನ್ನು ಕೂಡಲೇ ದಿನಾಂಕ 10.02.2025 ರ ಒಳಗಾಗಿ ಯಾರೆಲ್ಲ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿ ತಮ್ಮ ವ್ಯಾಪಾರ ವಹಿವಾಟನ್ನು ನಡೆಸುತ್ತಿರುವವರು ಕೂಡಲೇ ಕನ್ನಡ ಭಾಷೆಯಲ್ಲಿ ಶೇ. 60% ರಷ್ಟು ನಾಮಫಲಕವನ್ನು ಅಳವಡಿಸಬೇಕು. ಈ ಆದೇಶವನ್ನು ತಪ್ಪಿದ್ದಲ್ಲಿ ಸರ್ಕಾರದ ನಿಯಮದಂತೆ ಸಂಬಂಧಿಸಿದವರ ವಿರುದ್ಧ ಚಾಲ್ತಿಯಲ್ಲಿರುವ ಕಾನೂನಿನಂತೆ ಕ್ರಮ ಜರುಗಿಸಲಾಗುವುದು ಎಂದು ಬಂಗಾರಪೇಟೆ ಪುರಸಭೆ ಮುಖ್ಯಾಧಿಕಾರಿ ಆದೇಶ ಹೊರಡಿಸಿ ಎಚ್ಚರಿಕೆ ನೀಡಿದ್ದಾರೆ. ವರದಿ: ರೋಶನ್ ಜಮೀರ್
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…