Latest

ಬಂಗಾರಪೇಟೆ ವ್ಯಾಪ್ತಿಯಲ್ಲಿ ನಿಯಮದ ಪ್ರಕಾರ ಕನ್ನಡ ನಾಮಪಲಕ ಅಳವಡಿಸಲು 10ನೇ ತಾರೀಕು ಕಡೆಯ ದಿನ.

ಕರ್ನಾಟಕ ಸರ್ಕಾರದ ಆದೇಶದಂತೆ ಬಂಗಾರಪೇಟೆ ಪುರಸಭೆ ವ್ಯಾಪ್ತಿಯಲ್ಲಿ ವ್ಯಾಪಾರ/ಉದ್ದಿಮೆ/ಕೈಗಾರಿಕೆಗಳನ್ನು ನಡೆಸುತ್ತಿರುವವರು ಸಾರ್ವಜನಿಕರ ಮಾಹಿತಿಗಾಗಿ ತಮ್ಮ ಅಂಗಡಿ ಮುಂಗಟ್ಟುಗಳ ನಾಮಫಲಕಗಳನ್ನು ಬರೆಸಿಕೊಂಡಿರುತ್ತಾರೆ. ಆದರೆ ಸರ್ಕಾರದ ಆದೇಶದಂತೆ ನಾಮಫಲಕಗಳಲ್ಲಿ ಕನ್ನಡ ಭಾಷೆಯಲ್ಲಿ ಶೇ. 60% ರಷ್ಟು ಬಾಕಿ ಉಳಿದ ಶೇ 40% ರಷ್ಟು ಬೇರೆ ಭಾಷೆ ಬರೆಸಿ ಕೊಳ್ಳಬಹುದಾಗಿರುತ್ತದೆ. ಇದರಂತೆ ಸರ್ಕಾರದ ಆದೇಶದಂತೆ ಕ್ರಮವಹಿಸಲು ಬಂಗಾರಪೇಟೆ ಪುರಸಭೆ ಕಚೇರಿ ಸಿಬ್ಬಂದಿವರ್ಗದವರು ಖುದ್ದಾಗಿ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಹಾಗೂ ಧ್ವನಿವರ್ಧಕಗಳ ಮೂಲಕ ಹಲವಾರು ಬಾರಿ ವ್ಯಾಪಕ ಪ್ರಚಾರ ನೀಡಲಾಗಿದೆ. ಆದರೂ ಸಹ ಇದಕ್ಕೆ ಕೆಲವರು ಸ್ಪಂದಿಸದೆ ಇನ್ನು ಹಳೆಯ ನಾಮಫಲಕಗಳನ್ನು ಮುಂದುವರಿಸಿಕೊಂಡು ಬರುತ್ತಿರುವುದನ್ನು ಬಂಗಾರಪೇಟೆ ಪುರಸಭೆಯು ಗಂಭೀರವಾಗಿ ಪರಿಗಣಿಸಿದೆ.

ಸರ್ಕಾರದ ಆದೇಶದಂತೆ ಶೇ. 60% ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕಗಳನ್ನು ಕೂಡಲೇ ದಿನಾಂಕ 10.02.2025 ರ ಒಳಗಾಗಿ ಯಾರೆಲ್ಲ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿ ತಮ್ಮ ವ್ಯಾಪಾರ ವಹಿವಾಟನ್ನು ನಡೆಸುತ್ತಿರುವವರು ಕೂಡಲೇ ಕನ್ನಡ ಭಾಷೆಯಲ್ಲಿ ಶೇ. 60% ರಷ್ಟು ನಾಮಫಲಕವನ್ನು ಅಳವಡಿಸಬೇಕು. ಈ ಆದೇಶವನ್ನು ತಪ್ಪಿದ್ದಲ್ಲಿ ಸರ್ಕಾರದ ನಿಯಮದಂತೆ ಸಂಬಂಧಿಸಿದವರ ವಿರುದ್ಧ ಚಾಲ್ತಿಯಲ್ಲಿರುವ ಕಾನೂನಿನಂತೆ ಕ್ರಮ ಜರುಗಿಸಲಾಗುವುದು ಎಂದು ಬಂಗಾರಪೇಟೆ ಪುರಸಭೆ ಮುಖ್ಯಾಧಿಕಾರಿ ಆದೇಶ ಹೊರಡಿಸಿ ಎಚ್ಚರಿಕೆ ನೀಡಿದ್ದಾರೆ. ವರದಿ: ರೋಶನ್ ಜಮೀರ್

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

19 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

23 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

23 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

23 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

23 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago