ಕರ್ನಾಟಕ ಸರ್ಕಾರದ ಆದೇಶದಂತೆ ಬಂಗಾರಪೇಟೆ ಪುರಸಭೆ ವ್ಯಾಪ್ತಿಯಲ್ಲಿ ವ್ಯಾಪಾರ/ಉದ್ದಿಮೆ/ಕೈಗಾರಿಕೆಗಳನ್ನು ನಡೆಸುತ್ತಿರುವವರು ಸಾರ್ವಜನಿಕರ ಮಾಹಿತಿಗಾಗಿ ತಮ್ಮ ಅಂಗಡಿ ಮುಂಗಟ್ಟುಗಳ ನಾಮಫಲಕಗಳನ್ನು ಬರೆಸಿಕೊಂಡಿರುತ್ತಾರೆ. ಆದರೆ ಸರ್ಕಾರದ ಆದೇಶದಂತೆ ನಾಮಫಲಕಗಳಲ್ಲಿ ಕನ್ನಡ ಭಾಷೆಯಲ್ಲಿ ಶೇ. 60% ರಷ್ಟು ಬಾಕಿ ಉಳಿದ ಶೇ 40% ರಷ್ಟು ಬೇರೆ ಭಾಷೆ ಬರೆಸಿ ಕೊಳ್ಳಬಹುದಾಗಿರುತ್ತದೆ. ಇದರಂತೆ ಸರ್ಕಾರದ ಆದೇಶದಂತೆ ಕ್ರಮವಹಿಸಲು ಬಂಗಾರಪೇಟೆ ಪುರಸಭೆ ಕಚೇರಿ ಸಿಬ್ಬಂದಿವರ್ಗದವರು ಖುದ್ದಾಗಿ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಹಾಗೂ ಧ್ವನಿವರ್ಧಕಗಳ ಮೂಲಕ ಹಲವಾರು ಬಾರಿ ವ್ಯಾಪಕ ಪ್ರಚಾರ ನೀಡಲಾಗಿದೆ. ಆದರೂ ಸಹ ಇದಕ್ಕೆ ಕೆಲವರು ಸ್ಪಂದಿಸದೆ ಇನ್ನು ಹಳೆಯ ನಾಮಫಲಕಗಳನ್ನು ಮುಂದುವರಿಸಿಕೊಂಡು ಬರುತ್ತಿರುವುದನ್ನು ಬಂಗಾರಪೇಟೆ ಪುರಸಭೆಯು ಗಂಭೀರವಾಗಿ ಪರಿಗಣಿಸಿದೆ.
ಸರ್ಕಾರದ ಆದೇಶದಂತೆ ಶೇ. 60% ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕಗಳನ್ನು ಕೂಡಲೇ ದಿನಾಂಕ 10.02.2025 ರ ಒಳಗಾಗಿ ಯಾರೆಲ್ಲ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿ ತಮ್ಮ ವ್ಯಾಪಾರ ವಹಿವಾಟನ್ನು ನಡೆಸುತ್ತಿರುವವರು ಕೂಡಲೇ ಕನ್ನಡ ಭಾಷೆಯಲ್ಲಿ ಶೇ. 60% ರಷ್ಟು ನಾಮಫಲಕವನ್ನು ಅಳವಡಿಸಬೇಕು. ಈ ಆದೇಶವನ್ನು ತಪ್ಪಿದ್ದಲ್ಲಿ ಸರ್ಕಾರದ ನಿಯಮದಂತೆ ಸಂಬಂಧಿಸಿದವರ ವಿರುದ್ಧ ಚಾಲ್ತಿಯಲ್ಲಿರುವ ಕಾನೂನಿನಂತೆ ಕ್ರಮ ಜರುಗಿಸಲಾಗುವುದು ಎಂದು ಬಂಗಾರಪೇಟೆ ಪುರಸಭೆ ಮುಖ್ಯಾಧಿಕಾರಿ ಆದೇಶ ಹೊರಡಿಸಿ ಎಚ್ಚರಿಕೆ ನೀಡಿದ್ದಾರೆ. ವರದಿ: ರೋಶನ್ ಜಮೀರ್
ಉತ್ತರ ಪ್ರದೇಶದ ಜಲೌನ್ ಜಿಲ್ಲೆಯ ಒರೈ ಪೊಲೀಸ್ ಠಾಣೆಯಲ್ಲಿ ನಡೆದಿರುವ ಎನ್ನಲಾದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.…
ಶಾಮೀರ್ಪೇಟ ವ್ಯಾಪ್ತಿಯ ತಹಶೀಲ್ದಾರ್ ತುಮ್ಮಕೋಮ್ಮ ಸುಚಾರಿತಾ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ…
ಮಕ್ಕಳ ಆರೈಕೆ ಮತ್ತು ಸುರಕ್ಷತೆಗೆ ಮೀಸಲಾಗಿರುವ ಅಂಗನವಾಡಿ ಕೇಂದ್ರದಲ್ಲೇ ಪುಟ್ಟ ಮಗುವಿನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದಲ್ಲಿ…
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…