Latest

ತುಮಕೂರಿನಲ್ಲಿ 11 ಬಾಲ ಕಾರ್ಮಿಕರು ಪತ್ತೆ: ಜಿಲ್ಲಾಧಿಕಾರಿಯಿಂದ ತೀವ್ರ ಸೂಚನೆ.

ತುಮಕೂರು: ಜಿಲ್ಲೆಯಲ್ಲಿ ಬಾಲಕಾರ್ಮಿಕರ ಪತ್ತೆ ಕಾರ್ಯ ಇನ್ನೂ ಗಂಭೀರ ತೀವ್ರತೆಗೆ ತಲುಪಿಲ್ಲ ಎಂಬುದನ್ನು ತೋರುತ್ತದೆ. 2024-25ನೇ ಹಣಕಾಸು ವರ್ಷದಲ್ಲಿ ಕೇವಲ 11 ಬಾಲಕಾರ್ಮಿಕರು ಮಾತ್ರ ಪತ್ತೆಯಾಗಿರುವುದನ್ನು ಜಿಲ್ಲಾ ಅಧಿಕಾರಿಗಳು ಗಮನಿಸಿ, ಈ ಕಾರ್ಯದಲ್ಲಿ ಮತ್ತಷ್ಟು ಚುರುಕು ತರಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಖಡಕ್ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಬಾಲಕಾರ್ಮಿಕ ನಿರ್ಮೂಲನೆ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಹಾಗೂ ಜಿಲ್ಲಾ ಕಾರ್ಯಪಡೆ ಸಭೆಯಲ್ಲಿ ಅವರು ಮಾತನಾಡಿದರು. ಈ ಸಂದರ್ಭ, ಕಾರ್ಮಿಕ ಇಲಾಖೆ ಅಧಿಕಾರಿಗಳ ತಂಡ ಕಳೆದ ಒಂದು ವರ್ಷದಲ್ಲಿ ಕೇವಲ 397 ತಪಾಸಣೆಗಳನ್ನು ನಡೆಸಿರುವುದು ಸ್ಪಷ್ಟವಾಯಿತು.

ಇದರಿಂದ ತೃಪ್ತರಾಗದ ಜಿಲ್ಲಾಧಿಕಾರಿ, ಮುಂದಿನ ಹತ್ತು ದಿನಗಳಲ್ಲಿ ಕಾರ್ಮಿಕ ನಿರೀಕ್ಷಕರು ತಮ್ಮ ವ್ಯಾಪ್ತಿಯ ಕಾರ್ಖಾನೆಗಳು, ಮಾರಾಟ ಮಳಿಗೆಗಳು, ತೆಂಗಿನಕಾಯಿ ವಿತರಣಾ ಕೇಂದ್ರಗಳು, ಗ್ಯಾರೇಜುಗಳು ಸೇರಿದಂತೆ ವಿವಿಧ ಸ್ಥಳಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಕಟ್ಟುನಿಟ್ಟಾದ ಸೂಚನೆ ನೀಡಿದರು.

ಸಭೆಯಲ್ಲಿ ಮಾತನಾಡಿದ ಕಾರ್ಮಿಕ ಅಧಿಕಾರಿ ಕೆ. ತೇಜಾವತಿ, ಈವರೆಗೆ ಪತ್ತೆಯಾಗಿರುವ ಮೂವರು ಬಾಲಕಾರ್ಮಿಕರ ಪ್ರಕರಣಗಳಲ್ಲಿ ಮಾಲೀಕರ ವಿರುದ್ಧ ದೂರು ದಾಖಲಿಸಿ ದಂಡ ವಸೂಲಿಸಲಾಗಿದೆಯೆಂದು ತಿಳಿಸಿದ್ದಾರೆ. ಪತ್ತೆಯಾದ ನಾಲ್ವರು ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಲಾಗಿದೆ. ಉಳಿದ ಮಕ್ಕಳನ್ನು ಪೋಷಕರ ವಶಕ್ಕೆ ನೀಡಲಾಗಿದೆ ಎಂದರು.

ಸಭೆಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಾಲ್, ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ನಗರಾಭಿವೃದ್ಧಿ ಉಪನಿರ್ದೇಶಕ ಯೋಗಾನಂದ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯಕ್ರಮಾಧಿಕಾರಿ ದಿನೇಶ್ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.

ಬಾಲಕಾರ್ಮಿಕರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ನಿರಂತರ ಪರಿಶೀಲನೆ ಮತ್ತು ಕಠಿಣ ಕ್ರಮಗಳು ಅಗತ್ಯವಿದ್ದು, ಈ ನಿಟ್ಟಿನಲ್ಲಿ ಇಲಾಖೆ ಉತ್ಸಾಹದಿಂದ ಕಾರ್ಯನಿರ್ವಹಿಸಬೇಕು ಎಂಬುದು ಸಭೆಯಲ್ಲಿ ವ್ಯಕ್ತವಾಯಿತು.

nazeer ahamad

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

6 hours ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

6 hours ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

16 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

16 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

16 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

16 hours ago