ತುಮಕೂರು: ಜಿಲ್ಲೆಯಲ್ಲಿ ಬಾಲಕಾರ್ಮಿಕರ ಪತ್ತೆ ಕಾರ್ಯ ಇನ್ನೂ ಗಂಭೀರ ತೀವ್ರತೆಗೆ ತಲುಪಿಲ್ಲ ಎಂಬುದನ್ನು ತೋರುತ್ತದೆ. 2024-25ನೇ ಹಣಕಾಸು ವರ್ಷದಲ್ಲಿ ಕೇವಲ 11 ಬಾಲಕಾರ್ಮಿಕರು ಮಾತ್ರ ಪತ್ತೆಯಾಗಿರುವುದನ್ನು ಜಿಲ್ಲಾ ಅಧಿಕಾರಿಗಳು ಗಮನಿಸಿ, ಈ ಕಾರ್ಯದಲ್ಲಿ ಮತ್ತಷ್ಟು ಚುರುಕು ತರಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಖಡಕ್ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಬಾಲಕಾರ್ಮಿಕ ನಿರ್ಮೂಲನೆ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಹಾಗೂ ಜಿಲ್ಲಾ ಕಾರ್ಯಪಡೆ ಸಭೆಯಲ್ಲಿ ಅವರು ಮಾತನಾಡಿದರು. ಈ ಸಂದರ್ಭ, ಕಾರ್ಮಿಕ ಇಲಾಖೆ ಅಧಿಕಾರಿಗಳ ತಂಡ ಕಳೆದ ಒಂದು ವರ್ಷದಲ್ಲಿ ಕೇವಲ 397 ತಪಾಸಣೆಗಳನ್ನು ನಡೆಸಿರುವುದು ಸ್ಪಷ್ಟವಾಯಿತು.
ಇದರಿಂದ ತೃಪ್ತರಾಗದ ಜಿಲ್ಲಾಧಿಕಾರಿ, ಮುಂದಿನ ಹತ್ತು ದಿನಗಳಲ್ಲಿ ಕಾರ್ಮಿಕ ನಿರೀಕ್ಷಕರು ತಮ್ಮ ವ್ಯಾಪ್ತಿಯ ಕಾರ್ಖಾನೆಗಳು, ಮಾರಾಟ ಮಳಿಗೆಗಳು, ತೆಂಗಿನಕಾಯಿ ವಿತರಣಾ ಕೇಂದ್ರಗಳು, ಗ್ಯಾರೇಜುಗಳು ಸೇರಿದಂತೆ ವಿವಿಧ ಸ್ಥಳಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಕಟ್ಟುನಿಟ್ಟಾದ ಸೂಚನೆ ನೀಡಿದರು.
ಸಭೆಯಲ್ಲಿ ಮಾತನಾಡಿದ ಕಾರ್ಮಿಕ ಅಧಿಕಾರಿ ಕೆ. ತೇಜಾವತಿ, ಈವರೆಗೆ ಪತ್ತೆಯಾಗಿರುವ ಮೂವರು ಬಾಲಕಾರ್ಮಿಕರ ಪ್ರಕರಣಗಳಲ್ಲಿ ಮಾಲೀಕರ ವಿರುದ್ಧ ದೂರು ದಾಖಲಿಸಿ ದಂಡ ವಸೂಲಿಸಲಾಗಿದೆಯೆಂದು ತಿಳಿಸಿದ್ದಾರೆ. ಪತ್ತೆಯಾದ ನಾಲ್ವರು ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಲಾಗಿದೆ. ಉಳಿದ ಮಕ್ಕಳನ್ನು ಪೋಷಕರ ವಶಕ್ಕೆ ನೀಡಲಾಗಿದೆ ಎಂದರು.
ಸಭೆಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಾಲ್, ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ನಗರಾಭಿವೃದ್ಧಿ ಉಪನಿರ್ದೇಶಕ ಯೋಗಾನಂದ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯಕ್ರಮಾಧಿಕಾರಿ ದಿನೇಶ್ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.
ಬಾಲಕಾರ್ಮಿಕರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ನಿರಂತರ ಪರಿಶೀಲನೆ ಮತ್ತು ಕಠಿಣ ಕ್ರಮಗಳು ಅಗತ್ಯವಿದ್ದು, ಈ ನಿಟ್ಟಿನಲ್ಲಿ ಇಲಾಖೆ ಉತ್ಸಾಹದಿಂದ ಕಾರ್ಯನಿರ್ವಹಿಸಬೇಕು ಎಂಬುದು ಸಭೆಯಲ್ಲಿ ವ್ಯಕ್ತವಾಯಿತು.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…