Latest

ತುಮಕೂರಿನಲ್ಲಿ 11 ಬಾಲ ಕಾರ್ಮಿಕರು ಪತ್ತೆ: ಜಿಲ್ಲಾಧಿಕಾರಿಯಿಂದ ತೀವ್ರ ಸೂಚನೆ.

ತುಮಕೂರು: ಜಿಲ್ಲೆಯಲ್ಲಿ ಬಾಲಕಾರ್ಮಿಕರ ಪತ್ತೆ ಕಾರ್ಯ ಇನ್ನೂ ಗಂಭೀರ ತೀವ್ರತೆಗೆ ತಲುಪಿಲ್ಲ ಎಂಬುದನ್ನು ತೋರುತ್ತದೆ. 2024-25ನೇ ಹಣಕಾಸು ವರ್ಷದಲ್ಲಿ ಕೇವಲ 11 ಬಾಲಕಾರ್ಮಿಕರು ಮಾತ್ರ ಪತ್ತೆಯಾಗಿರುವುದನ್ನು ಜಿಲ್ಲಾ ಅಧಿಕಾರಿಗಳು ಗಮನಿಸಿ, ಈ ಕಾರ್ಯದಲ್ಲಿ ಮತ್ತಷ್ಟು ಚುರುಕು ತರಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಖಡಕ್ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಬಾಲಕಾರ್ಮಿಕ ನಿರ್ಮೂಲನೆ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಹಾಗೂ ಜಿಲ್ಲಾ ಕಾರ್ಯಪಡೆ ಸಭೆಯಲ್ಲಿ ಅವರು ಮಾತನಾಡಿದರು. ಈ ಸಂದರ್ಭ, ಕಾರ್ಮಿಕ ಇಲಾಖೆ ಅಧಿಕಾರಿಗಳ ತಂಡ ಕಳೆದ ಒಂದು ವರ್ಷದಲ್ಲಿ ಕೇವಲ 397 ತಪಾಸಣೆಗಳನ್ನು ನಡೆಸಿರುವುದು ಸ್ಪಷ್ಟವಾಯಿತು.

ಇದರಿಂದ ತೃಪ್ತರಾಗದ ಜಿಲ್ಲಾಧಿಕಾರಿ, ಮುಂದಿನ ಹತ್ತು ದಿನಗಳಲ್ಲಿ ಕಾರ್ಮಿಕ ನಿರೀಕ್ಷಕರು ತಮ್ಮ ವ್ಯಾಪ್ತಿಯ ಕಾರ್ಖಾನೆಗಳು, ಮಾರಾಟ ಮಳಿಗೆಗಳು, ತೆಂಗಿನಕಾಯಿ ವಿತರಣಾ ಕೇಂದ್ರಗಳು, ಗ್ಯಾರೇಜುಗಳು ಸೇರಿದಂತೆ ವಿವಿಧ ಸ್ಥಳಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಕಟ್ಟುನಿಟ್ಟಾದ ಸೂಚನೆ ನೀಡಿದರು.

ಸಭೆಯಲ್ಲಿ ಮಾತನಾಡಿದ ಕಾರ್ಮಿಕ ಅಧಿಕಾರಿ ಕೆ. ತೇಜಾವತಿ, ಈವರೆಗೆ ಪತ್ತೆಯಾಗಿರುವ ಮೂವರು ಬಾಲಕಾರ್ಮಿಕರ ಪ್ರಕರಣಗಳಲ್ಲಿ ಮಾಲೀಕರ ವಿರುದ್ಧ ದೂರು ದಾಖಲಿಸಿ ದಂಡ ವಸೂಲಿಸಲಾಗಿದೆಯೆಂದು ತಿಳಿಸಿದ್ದಾರೆ. ಪತ್ತೆಯಾದ ನಾಲ್ವರು ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಲಾಗಿದೆ. ಉಳಿದ ಮಕ್ಕಳನ್ನು ಪೋಷಕರ ವಶಕ್ಕೆ ನೀಡಲಾಗಿದೆ ಎಂದರು.

ಸಭೆಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಾಲ್, ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ನಗರಾಭಿವೃದ್ಧಿ ಉಪನಿರ್ದೇಶಕ ಯೋಗಾನಂದ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯಕ್ರಮಾಧಿಕಾರಿ ದಿನೇಶ್ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.

ಬಾಲಕಾರ್ಮಿಕರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ನಿರಂತರ ಪರಿಶೀಲನೆ ಮತ್ತು ಕಠಿಣ ಕ್ರಮಗಳು ಅಗತ್ಯವಿದ್ದು, ಈ ನಿಟ್ಟಿನಲ್ಲಿ ಇಲಾಖೆ ಉತ್ಸಾಹದಿಂದ ಕಾರ್ಯನಿರ್ವಹಿಸಬೇಕು ಎಂಬುದು ಸಭೆಯಲ್ಲಿ ವ್ಯಕ್ತವಾಯಿತು.

nazeer ahamad

Recent Posts

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…

3 hours ago

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

18 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

1 day ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

1 day ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago