Latest

ಯೂನಿಫಾರಂ ಇಲ್ಲ ಎಂಬ ಕಾರಣಕ್ಕೆ ಭಯದಿಂದ 13 ವರ್ಷದ ಬಾಲಕಿ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಲಿಂಗದಹಳ್ಳಿ ಗ್ರಾಮದಲ್ಲಿ ಮನಕಲಕುವ ದಾರುಣ ಘಟನೆ ನಡೆದಿದೆ. ಯೂನಿಫಾರಂ ಇಲ್ಲದ ಕಾರಣ ಶಿಕ್ಷಕರು ಗದರಿಸಬಹುದು ಎಂಬ ಭಯದಿಂದ 13 ವರ್ಷದ ಬಾಲಕಿ ನಿವೇದಿತಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಶಾಲೆ ಆರಂಭವಾಗುತ್ತಿದ್ದಂತೆ ಶಿಕ್ಷಕರು ಎಲ್ಲ ವಿದ್ಯಾರ್ಥಿಗಳಿಗೂ ಯೂನಿಫಾರಂ ಧರಿಸುವಂತೆ ಸೂಚನೆ ನೀಡಿದ್ದರು. ನಿವೇದಿತಾ ಪೋಷಕರು ಕೂಡಾ ಈ ಸೂಚನೆಯಂತೆ ಸಮವಸ್ತ್ರವನ್ನು ಹೊಲಿಯಲು ಟೈಲರ್‌ಗೆ ನೀಡಿದ್ದಾರೆ. ಆದರೆ ಟೈಲರ್‌ನಿಂದ ಯೂನಿಫಾರಂ ಸಿದ್ಧವಾಗದೇ ಬಿಟ್ಟ ಕಾರಣ, ಶಿಕ್ಷಕರು ತಿರಸ್ಕಾರ ಮಾಡಬಹುದು ಎಂಬ ಆತಂಕ ಈ ಬಾಲಕಿ ಮನಸ್ಸಿಗೆ ತುಂಬಿಕೊಂಡಿತ್ತು.

ಈ ಭೀತಿಯಿಂದಾಗಿ ನಿವೇದಿತಾ ಸೋಮವಾರ ತನ್ನ ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದಳು. ಘಟನೆ ನಂತರ ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾದರೂ, ವೈದ್ಯರು ಚಿಕಿತ್ಸೆ ಫಲಕಾರಿಯಾಗದೇ ಮೃತಘೋಷಿಸಿದರು.

ಈ ದುರ್ಘಟನೆ ಪೋಷಕರಲ್ಲಿ ಮಾತ್ರವಲ್ಲದೆ ಗ್ರಾಮಸ್ಥರಲ್ಲೂ ಆಘಾತ ಮೂಡಿಸಿದೆ. ಮಕ್ಕಳು ಎಂತಹ ಎದೆಯ ನೋವನ್ನೂ ಹೊರಗೆ ಹೇಳಿಕೊಳ್ಳದೇ ಒಳಗೊಳಿಸಿಕೊಂಡು ಹೋಗುತ್ತಿರುವುದು ಈ ಘಟನೆ ಮತ್ತೊಮ್ಮೆ ತೋರಿಸಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ.

nazeer ahamad

Recent Posts

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

21 seconds ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

30 minutes ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

53 minutes ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

1 hour ago

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

5 hours ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

18 hours ago