Latest

ಯೂನಿಫಾರಂ ಇಲ್ಲ ಎಂಬ ಕಾರಣಕ್ಕೆ ಭಯದಿಂದ 13 ವರ್ಷದ ಬಾಲಕಿ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಲಿಂಗದಹಳ್ಳಿ ಗ್ರಾಮದಲ್ಲಿ ಮನಕಲಕುವ ದಾರುಣ ಘಟನೆ ನಡೆದಿದೆ. ಯೂನಿಫಾರಂ ಇಲ್ಲದ ಕಾರಣ ಶಿಕ್ಷಕರು ಗದರಿಸಬಹುದು ಎಂಬ ಭಯದಿಂದ 13 ವರ್ಷದ ಬಾಲಕಿ ನಿವೇದಿತಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಶಾಲೆ ಆರಂಭವಾಗುತ್ತಿದ್ದಂತೆ ಶಿಕ್ಷಕರು ಎಲ್ಲ ವಿದ್ಯಾರ್ಥಿಗಳಿಗೂ ಯೂನಿಫಾರಂ ಧರಿಸುವಂತೆ ಸೂಚನೆ ನೀಡಿದ್ದರು. ನಿವೇದಿತಾ ಪೋಷಕರು ಕೂಡಾ ಈ ಸೂಚನೆಯಂತೆ ಸಮವಸ್ತ್ರವನ್ನು ಹೊಲಿಯಲು ಟೈಲರ್‌ಗೆ ನೀಡಿದ್ದಾರೆ. ಆದರೆ ಟೈಲರ್‌ನಿಂದ ಯೂನಿಫಾರಂ ಸಿದ್ಧವಾಗದೇ ಬಿಟ್ಟ ಕಾರಣ, ಶಿಕ್ಷಕರು ತಿರಸ್ಕಾರ ಮಾಡಬಹುದು ಎಂಬ ಆತಂಕ ಈ ಬಾಲಕಿ ಮನಸ್ಸಿಗೆ ತುಂಬಿಕೊಂಡಿತ್ತು.

ಈ ಭೀತಿಯಿಂದಾಗಿ ನಿವೇದಿತಾ ಸೋಮವಾರ ತನ್ನ ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದಳು. ಘಟನೆ ನಂತರ ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾದರೂ, ವೈದ್ಯರು ಚಿಕಿತ್ಸೆ ಫಲಕಾರಿಯಾಗದೇ ಮೃತಘೋಷಿಸಿದರು.

ಈ ದುರ್ಘಟನೆ ಪೋಷಕರಲ್ಲಿ ಮಾತ್ರವಲ್ಲದೆ ಗ್ರಾಮಸ್ಥರಲ್ಲೂ ಆಘಾತ ಮೂಡಿಸಿದೆ. ಮಕ್ಕಳು ಎಂತಹ ಎದೆಯ ನೋವನ್ನೂ ಹೊರಗೆ ಹೇಳಿಕೊಳ್ಳದೇ ಒಳಗೊಳಿಸಿಕೊಂಡು ಹೋಗುತ್ತಿರುವುದು ಈ ಘಟನೆ ಮತ್ತೊಮ್ಮೆ ತೋರಿಸಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ.

nazeer ahamad

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

6 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

6 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

6 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

6 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

21 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

21 hours ago