Latest

ಯೂನಿಫಾರಂ ಇಲ್ಲ ಎಂಬ ಕಾರಣಕ್ಕೆ ಭಯದಿಂದ 13 ವರ್ಷದ ಬಾಲಕಿ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಲಿಂಗದಹಳ್ಳಿ ಗ್ರಾಮದಲ್ಲಿ ಮನಕಲಕುವ ದಾರುಣ ಘಟನೆ ನಡೆದಿದೆ. ಯೂನಿಫಾರಂ ಇಲ್ಲದ ಕಾರಣ ಶಿಕ್ಷಕರು ಗದರಿಸಬಹುದು ಎಂಬ ಭಯದಿಂದ 13 ವರ್ಷದ ಬಾಲಕಿ ನಿವೇದಿತಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಶಾಲೆ ಆರಂಭವಾಗುತ್ತಿದ್ದಂತೆ ಶಿಕ್ಷಕರು ಎಲ್ಲ ವಿದ್ಯಾರ್ಥಿಗಳಿಗೂ ಯೂನಿಫಾರಂ ಧರಿಸುವಂತೆ ಸೂಚನೆ ನೀಡಿದ್ದರು. ನಿವೇದಿತಾ ಪೋಷಕರು ಕೂಡಾ ಈ ಸೂಚನೆಯಂತೆ ಸಮವಸ್ತ್ರವನ್ನು ಹೊಲಿಯಲು ಟೈಲರ್‌ಗೆ ನೀಡಿದ್ದಾರೆ. ಆದರೆ ಟೈಲರ್‌ನಿಂದ ಯೂನಿಫಾರಂ ಸಿದ್ಧವಾಗದೇ ಬಿಟ್ಟ ಕಾರಣ, ಶಿಕ್ಷಕರು ತಿರಸ್ಕಾರ ಮಾಡಬಹುದು ಎಂಬ ಆತಂಕ ಈ ಬಾಲಕಿ ಮನಸ್ಸಿಗೆ ತುಂಬಿಕೊಂಡಿತ್ತು.

ಈ ಭೀತಿಯಿಂದಾಗಿ ನಿವೇದಿತಾ ಸೋಮವಾರ ತನ್ನ ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದಳು. ಘಟನೆ ನಂತರ ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾದರೂ, ವೈದ್ಯರು ಚಿಕಿತ್ಸೆ ಫಲಕಾರಿಯಾಗದೇ ಮೃತಘೋಷಿಸಿದರು.

ಈ ದುರ್ಘಟನೆ ಪೋಷಕರಲ್ಲಿ ಮಾತ್ರವಲ್ಲದೆ ಗ್ರಾಮಸ್ಥರಲ್ಲೂ ಆಘಾತ ಮೂಡಿಸಿದೆ. ಮಕ್ಕಳು ಎಂತಹ ಎದೆಯ ನೋವನ್ನೂ ಹೊರಗೆ ಹೇಳಿಕೊಳ್ಳದೇ ಒಳಗೊಳಿಸಿಕೊಂಡು ಹೋಗುತ್ತಿರುವುದು ಈ ಘಟನೆ ಮತ್ತೊಮ್ಮೆ ತೋರಿಸಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

10 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

17 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

17 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago