ಬೆಂಗಳೂರು: ಕಾಂಗ್ರೆಸ್ನ ಪ್ರಭಾವಿ ನಾಯಕರ ಮಾಧ್ಯಮ ಸಲಹೆಗಾರ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ, MLC ಸ್ಥಾನ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ₹1.50 ಕೋಟಿ ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಣ ವಂಚನೆಯ ಜೊತೆಗೆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪವೂ ಕೇಳಿಬಂದಿದ್ದು, ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ದೂರಿನ ಪ್ರಕಾರ, ಯರ್ರಿಸ್ವಾಮಿ ಎಂಬಾತ ತಾನು ಕಾಂಗ್ರೆಸ್ ನಾಯಕರ ಆಪ್ತ ಹಾಗೂ ಮಾಧ್ಯಮ ಸಲಹೆಗಾರ ಎಂದು ಹೇಳಿಕೊಂಡು, ಹಲವು ರಾಜಕೀಯ ಮುಖಂಡರೊಂದಿಗೆ ತೆಗೆಸಿಕೊಂಡಿದ್ದ ಫೋಟೋಗಳನ್ನು ತೋರಿಸಿ ಮಹಿಳೆಯ ವಿಶ್ವಾಸ ಗಳಿಸಿದ್ದಾನೆ. ಬಳಿಕ MLC ಸ್ಥಾನ ದೊರಕಿಸಿಕೊಡುವುದಾಗಿ ಹೇಳಿ ₹5 ಕೋಟಿ ಬೇಡಿಕೆ ಇಟ್ಟಿದ್ದಾನೆ.
ಆತನ ಮಾತು ನಂಬಿದ ಮಹಿಳೆ 2024ರ ಆಗಸ್ಟ್ನಿಂದ 2025ರ ಜನವರಿವರೆಗೆ ಹಂತ ಹಂತವಾಗಿ ₹1.50 ಕೋಟಿ ಹಣವನ್ನು ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆರೋಪಿಯ ಸೂಚನೆಯಂತೆ ಮೈಸೂರು ಬ್ಯಾಂಕ್ ಸರ್ಕಲ್ ಸಮೀಪದ ಶಿಕ್ಷಕರ ಸದನ ಹಾಗೂ ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆ ಬಳಿ ಆತನ ಸಹಚರರಾದ ಸಿದ್ದರಾಜು ಮತ್ತು ಬಸವರಾಜು ಹಣ ಸ್ವೀಕರಿಸಿದ್ದಾರೆ ಎನ್ನಲಾಗಿದೆ.
ಇದರ ನಡುವೆ, ಎಐಸಿಸಿ (AICC) ಹೈಕಮಾಂಡ್ ನಾಯಕರನ್ನು ಭೇಟಿಮಾಡಿಸುವ ನೆಪದಲ್ಲಿ ಮಹಿಳೆಯನ್ನು ದೆಹಲಿಗೆ ಕರೆದೊಯ್ದು, ಅಲ್ಲಿ ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಆರೋಪವೂ ಯರ್ರಿಸ್ವಾಮಿ ವಿರುದ್ಧ ಕೇಳಿಬಂದಿದೆ.
ತಾನು ವಂಚನೆಗೆ ಒಳಗಾಗಿರುವುದು ತಿಳಿದ ಬಳಿಕ ಮಹಿಳೆ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಯರ್ರಿಸ್ವಾಮಿ, ಬಸವರಾಜು ಹಾಗೂ ಸಿದ್ದರಾಜು ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ರಾಜಕೀಯ ಪ್ರಭಾವದ ಹೆಸರಿನಲ್ಲಿ MLC ಸ್ಥಾನ ಕೊಡಿಸುವ ಭರವಸೆ ನೀಡಿ ಕೋಟ್ಯಂತರ ರೂಪಾಯಿ ವಂಚಿಸಿರುವ ಈ ಪ್ರಕರಣದ ಹಿಂದೆ ಇನ್ನೂ ಯಾರ್ಯಾರ ಪಾತ್ರವಿದೆ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನೆಲಮಂಗಲ: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಮತ್ತು ವಿಭಜನೆಗೆ ಕಾರಣವಾಗುವ ರೀತಿಯ ಹೇಳಿಕೆಗಳನ್ನು ನೀಡಿದ ಆರೋಪದಡಿ ಖಾಸಗಿ…
ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ ತಾಯಿ-ಮಗನ ಪವಿತ್ರ ಬಾಂಧವ್ಯಕ್ಕೆ ಕಳಂಕ ತರುವಂತಹ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಸವತಿ ಮಗನೊಂದಿಗೆ ಅನೈತಿಕ…
ಬಿಹಾರ: ಮದುವೆಯಾಗುವ ಭರವಸೆ ನೀಡಿ ಬಳಿಕ ನಿರಾಕರಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳವು ಭೀಕರ ಸ್ವರೂಪ ಪಡೆದುಕೊಂಡಿದ್ದು, ಮಹಿಳೆಯೊಬ್ಬರನ್ನು ಬೈಕ್ನಲ್ಲಿ…
ಒಡಿಶಾ: ನಾಲ್ಕು ವರ್ಷಗಳ ಹಿಂದೆ ನಡೆದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಸೌಮ್ಯರಂಜನ್ ಮೊಹಾಪಾತ್ರ ಅವರ ಅನುಮಾನಾಸ್ಪದ ಸಾವು ಪ್ರಕರಣ…
ಚಿಕ್ಕಬಳ್ಳಾಪುರದಲ್ಲಿ ಮನಕಲಕುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಜನಿಸಿದ ಕೇವಲ ಎರಡು ದಿನಗಳ ಗಂಡು ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ತಾಯಿ ನಾಪತ್ತೆಯಾಗಿರುವ…
ಕೋಲಾರ ತಾಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮದಲ್ಲಿ ಸಾಲದ ಹೊರೆ ಮತ್ತು ಬಡ್ಡಿ ಕಿರುಕುಳದಿಂದ ಒಂದೇ ಕುಟುಂಬ ಸಂಪೂರ್ಣವಾಗಿ ನಾಶವಾದ ಮನಕಲಕುವ ಘಟನೆ…