Latest

40% ಸರ್ಕಾರದಿಂದ 15% ಹೆಚ್ಚಳ; ಗುತ್ತಿಗೆ ನೌಕರರ ಸಂಭಾವನೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ಸಂಭಾವನೆ ಶೇ.15ರಷ್ಟು ಹೆಚ್ಚಿಸಲಾಗಿದ್ದು, ಏಪ್ರಿಲ್ 1 ರಿಂದ ಇದು ಅನ್ವಯವಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು, 5 ವರ್ಷಕ್ಕಿಂತ ಹೆಚ್ಚು ಕಾಲ ನಿರಂತರವಾಗಿ ಕಾರ್ಯ ನಿರ್ವಹಿಸಿದ ಎನ್‌.ಎಚ್‌.ಎಂ ಮೆಡಿಕಲ್‌ ಅಧಿಕಾರಿಗಳಿಗೆ (ಎಂ.ಬಿ.ಬಿ.ಎಸ್‌, ಆಯುಷ್‌, ಆರ್‌.ಬಿ.ಎಸ್‌.ಕೆ, ದಂತವೈದ್ಯ, ಸರ್ಜನ್‌ಗಳು) ಕೂಡ ಶೇ.15ರಷ್ಟು ಸಂಭಾವನೆ ಹೆಚ್ಚಿಸಲಾಗಿದೆ. ಸೇರ್ಪಡೆಯಾಗುವ ಸಂದರ್ಭದಲ್ಲಿ 20 ಸಾವಿರ ರೂ. ಗಿಂತ ಕಡಿಮೆ ಸಂಭಾವನೆ ಇರುವ ನೌಕರರಿಗೆ ಶೇ.15 ರಷ್ಟು ಹೆಚ್ಚಳವಾಗಲಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ ಎಂದು ಹೇಳಿದರು.
ಎನ್‌ಎಚ್‌ಎಂ ಗುತ್ತಿಗೆ ತಜ್ಞರಿಗೆ, 3-5 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.5, 5-10 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.10, 10 ವರ್ಷಕ್ಕೂ ಅಧಿಕ ಕಾಲ ಸೇವೆಯಲ್ಲಿರುವವರಿಗೆ ಶೇ.15ರಷ್ಟು ಸಂಭಾವನೆ ಹೆಚ್ಚಳ ಮಾಡಲಾಗಿದೆ.
ನೌಕರರಿಗೆ ಮಾತು ನೀಡಿದ್ದಂತೆಯೇ ಕ್ರಮ ವಹಿಸಲಾಗಿದೆ. ಈ ಮೂಲಕ ನಮ್ಮ ಸರ್ಕಾರ ನೌಕರರ ಕ್ಷೇಮದ ಬದುಕಿಗೆ ಸದಾ ಶ್ರಮಿಸುತ್ತದೆ ಎಂದು ಹೇಳಿದರು.

ಭ್ರಷ್ಟರ ಬೇಟೆ

Recent Posts

“ಶೇ.100ಫಲಿತಾಂಶದ ನಾಟಕದ ಹಿಂದೆ ಸುಳ್ಳು ಆಟ: ಖಾಸಗಿ ಶಾಲೆಗಳ ಮೂಲಕ ಸರ್ಕಾರಿ ಶಾಲೆಗಳ ದುರ್ಬಳಕೆ”

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…

6 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

20 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

22 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

2 days ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

2 days ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

2 days ago