ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ಸಂಭಾವನೆ ಶೇ.15ರಷ್ಟು ಹೆಚ್ಚಿಸಲಾಗಿದ್ದು, ಏಪ್ರಿಲ್ 1 ರಿಂದ ಇದು ಅನ್ವಯವಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು, 5 ವರ್ಷಕ್ಕಿಂತ ಹೆಚ್ಚು ಕಾಲ ನಿರಂತರವಾಗಿ ಕಾರ್ಯ ನಿರ್ವಹಿಸಿದ ಎನ್.ಎಚ್.ಎಂ ಮೆಡಿಕಲ್ ಅಧಿಕಾರಿಗಳಿಗೆ (ಎಂ.ಬಿ.ಬಿ.ಎಸ್, ಆಯುಷ್, ಆರ್.ಬಿ.ಎಸ್.ಕೆ, ದಂತವೈದ್ಯ, ಸರ್ಜನ್ಗಳು) ಕೂಡ ಶೇ.15ರಷ್ಟು ಸಂಭಾವನೆ ಹೆಚ್ಚಿಸಲಾಗಿದೆ. ಸೇರ್ಪಡೆಯಾಗುವ ಸಂದರ್ಭದಲ್ಲಿ 20 ಸಾವಿರ ರೂ. ಗಿಂತ ಕಡಿಮೆ ಸಂಭಾವನೆ ಇರುವ ನೌಕರರಿಗೆ ಶೇ.15 ರಷ್ಟು ಹೆಚ್ಚಳವಾಗಲಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ ಎಂದು ಹೇಳಿದರು.
ಎನ್ಎಚ್ಎಂ ಗುತ್ತಿಗೆ ತಜ್ಞರಿಗೆ, 3-5 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.5, 5-10 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.10, 10 ವರ್ಷಕ್ಕೂ ಅಧಿಕ ಕಾಲ ಸೇವೆಯಲ್ಲಿರುವವರಿಗೆ ಶೇ.15ರಷ್ಟು ಸಂಭಾವನೆ ಹೆಚ್ಚಳ ಮಾಡಲಾಗಿದೆ.
ನೌಕರರಿಗೆ ಮಾತು ನೀಡಿದ್ದಂತೆಯೇ ಕ್ರಮ ವಹಿಸಲಾಗಿದೆ. ಈ ಮೂಲಕ ನಮ್ಮ ಸರ್ಕಾರ ನೌಕರರ ಕ್ಷೇಮದ ಬದುಕಿಗೆ ಸದಾ ಶ್ರಮಿಸುತ್ತದೆ ಎಂದು ಹೇಳಿದರು.
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…