ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ಸಂಭಾವನೆ ಶೇ.15ರಷ್ಟು ಹೆಚ್ಚಿಸಲಾಗಿದ್ದು, ಏಪ್ರಿಲ್ 1 ರಿಂದ ಇದು ಅನ್ವಯವಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು, 5 ವರ್ಷಕ್ಕಿಂತ ಹೆಚ್ಚು ಕಾಲ ನಿರಂತರವಾಗಿ ಕಾರ್ಯ ನಿರ್ವಹಿಸಿದ ಎನ್.ಎಚ್.ಎಂ ಮೆಡಿಕಲ್ ಅಧಿಕಾರಿಗಳಿಗೆ (ಎಂ.ಬಿ.ಬಿ.ಎಸ್, ಆಯುಷ್, ಆರ್.ಬಿ.ಎಸ್.ಕೆ, ದಂತವೈದ್ಯ, ಸರ್ಜನ್ಗಳು) ಕೂಡ ಶೇ.15ರಷ್ಟು ಸಂಭಾವನೆ ಹೆಚ್ಚಿಸಲಾಗಿದೆ. ಸೇರ್ಪಡೆಯಾಗುವ ಸಂದರ್ಭದಲ್ಲಿ 20 ಸಾವಿರ ರೂ. ಗಿಂತ ಕಡಿಮೆ ಸಂಭಾವನೆ ಇರುವ ನೌಕರರಿಗೆ ಶೇ.15 ರಷ್ಟು ಹೆಚ್ಚಳವಾಗಲಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ ಎಂದು ಹೇಳಿದರು.
ಎನ್ಎಚ್ಎಂ ಗುತ್ತಿಗೆ ತಜ್ಞರಿಗೆ, 3-5 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.5, 5-10 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.10, 10 ವರ್ಷಕ್ಕೂ ಅಧಿಕ ಕಾಲ ಸೇವೆಯಲ್ಲಿರುವವರಿಗೆ ಶೇ.15ರಷ್ಟು ಸಂಭಾವನೆ ಹೆಚ್ಚಳ ಮಾಡಲಾಗಿದೆ.
ನೌಕರರಿಗೆ ಮಾತು ನೀಡಿದ್ದಂತೆಯೇ ಕ್ರಮ ವಹಿಸಲಾಗಿದೆ. ಈ ಮೂಲಕ ನಮ್ಮ ಸರ್ಕಾರ ನೌಕರರ ಕ್ಷೇಮದ ಬದುಕಿಗೆ ಸದಾ ಶ್ರಮಿಸುತ್ತದೆ ಎಂದು ಹೇಳಿದರು.
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…