ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ಸಂಭಾವನೆ ಶೇ.15ರಷ್ಟು ಹೆಚ್ಚಿಸಲಾಗಿದ್ದು, ಏಪ್ರಿಲ್ 1 ರಿಂದ ಇದು ಅನ್ವಯವಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು, 5 ವರ್ಷಕ್ಕಿಂತ ಹೆಚ್ಚು ಕಾಲ ನಿರಂತರವಾಗಿ ಕಾರ್ಯ ನಿರ್ವಹಿಸಿದ ಎನ್.ಎಚ್.ಎಂ ಮೆಡಿಕಲ್ ಅಧಿಕಾರಿಗಳಿಗೆ (ಎಂ.ಬಿ.ಬಿ.ಎಸ್, ಆಯುಷ್, ಆರ್.ಬಿ.ಎಸ್.ಕೆ, ದಂತವೈದ್ಯ, ಸರ್ಜನ್ಗಳು) ಕೂಡ ಶೇ.15ರಷ್ಟು ಸಂಭಾವನೆ ಹೆಚ್ಚಿಸಲಾಗಿದೆ. ಸೇರ್ಪಡೆಯಾಗುವ ಸಂದರ್ಭದಲ್ಲಿ 20 ಸಾವಿರ ರೂ. ಗಿಂತ ಕಡಿಮೆ ಸಂಭಾವನೆ ಇರುವ ನೌಕರರಿಗೆ ಶೇ.15 ರಷ್ಟು ಹೆಚ್ಚಳವಾಗಲಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ ಎಂದು ಹೇಳಿದರು.
ಎನ್ಎಚ್ಎಂ ಗುತ್ತಿಗೆ ತಜ್ಞರಿಗೆ, 3-5 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.5, 5-10 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.10, 10 ವರ್ಷಕ್ಕೂ ಅಧಿಕ ಕಾಲ ಸೇವೆಯಲ್ಲಿರುವವರಿಗೆ ಶೇ.15ರಷ್ಟು ಸಂಭಾವನೆ ಹೆಚ್ಚಳ ಮಾಡಲಾಗಿದೆ.
ನೌಕರರಿಗೆ ಮಾತು ನೀಡಿದ್ದಂತೆಯೇ ಕ್ರಮ ವಹಿಸಲಾಗಿದೆ. ಈ ಮೂಲಕ ನಮ್ಮ ಸರ್ಕಾರ ನೌಕರರ ಕ್ಷೇಮದ ಬದುಕಿಗೆ ಸದಾ ಶ್ರಮಿಸುತ್ತದೆ ಎಂದು ಹೇಳಿದರು.
ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…
ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…