ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ಸಂಭಾವನೆ ಶೇ.15ರಷ್ಟು ಹೆಚ್ಚಿಸಲಾಗಿದ್ದು, ಏಪ್ರಿಲ್ 1 ರಿಂದ ಇದು ಅನ್ವಯವಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು, 5 ವರ್ಷಕ್ಕಿಂತ ಹೆಚ್ಚು ಕಾಲ ನಿರಂತರವಾಗಿ ಕಾರ್ಯ ನಿರ್ವಹಿಸಿದ ಎನ್.ಎಚ್.ಎಂ ಮೆಡಿಕಲ್ ಅಧಿಕಾರಿಗಳಿಗೆ (ಎಂ.ಬಿ.ಬಿ.ಎಸ್, ಆಯುಷ್, ಆರ್.ಬಿ.ಎಸ್.ಕೆ, ದಂತವೈದ್ಯ, ಸರ್ಜನ್ಗಳು) ಕೂಡ ಶೇ.15ರಷ್ಟು ಸಂಭಾವನೆ ಹೆಚ್ಚಿಸಲಾಗಿದೆ. ಸೇರ್ಪಡೆಯಾಗುವ ಸಂದರ್ಭದಲ್ಲಿ 20 ಸಾವಿರ ರೂ. ಗಿಂತ ಕಡಿಮೆ ಸಂಭಾವನೆ ಇರುವ ನೌಕರರಿಗೆ ಶೇ.15 ರಷ್ಟು ಹೆಚ್ಚಳವಾಗಲಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ ಎಂದು ಹೇಳಿದರು.
ಎನ್ಎಚ್ಎಂ ಗುತ್ತಿಗೆ ತಜ್ಞರಿಗೆ, 3-5 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.5, 5-10 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.10, 10 ವರ್ಷಕ್ಕೂ ಅಧಿಕ ಕಾಲ ಸೇವೆಯಲ್ಲಿರುವವರಿಗೆ ಶೇ.15ರಷ್ಟು ಸಂಭಾವನೆ ಹೆಚ್ಚಳ ಮಾಡಲಾಗಿದೆ.
ನೌಕರರಿಗೆ ಮಾತು ನೀಡಿದ್ದಂತೆಯೇ ಕ್ರಮ ವಹಿಸಲಾಗಿದೆ. ಈ ಮೂಲಕ ನಮ್ಮ ಸರ್ಕಾರ ನೌಕರರ ಕ್ಷೇಮದ ಬದುಕಿಗೆ ಸದಾ ಶ್ರಮಿಸುತ್ತದೆ ಎಂದು ಹೇಳಿದರು.
ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…
ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…
ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…
ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…
ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…
ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…