ಹೊಸೂರು: ರಾಜ್ಯದ ಗಡಿ ಭಾಗ ಆನೇಕಲ್ಗೆ ಹೊಂದಿಕೊಂಡ ತಮಿಳುನಾಡಿನ ಹೊಸೂರಿನಲ್ಲಿ ಸರ್ಕಾರಿ ಶಾಲೆಯೊಂದರ 150ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಸೂರು ಮಹಾನಗರ ಪಾಲಿಕೆಯ ಕಾಮರಾಜ್ ಕಾಲನಿಯಲ್ಲಿರು ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಶುಕ್ರವಾರ ಮಧ್ಯಾಹ್ನ ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥರಾಗಿದ್ದಾರೆ.
ಉಸಿರಾಟ ಸಮಸ್ಯೆಯಿಂದ ಕುಸಿದು ಬಿದ್ದಿದ್ದು, ಕೂಡಲೇ ಎಲ್ಲರನ್ನೂ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಶಾಲೆಯಲ್ಲಿ 1300 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎಂದಿನಂತೆ ಇಂದು ಮಧ್ಯಾಹ್ನ 1 ಗಂಟೆಗೆ ಊಟದ ವಿರಾಮ ನೀಡಲಾಗಿತ್ತು. ಊಟ ಮುಗಿಸಿ 2 ಗಂಟೆಗೆ ವಿದ್ಯಾರ್ಥಿಗಳೆಲ್ಲರೂ ಶಾಲಾ ಕೊಠಡಿಗೆ ತೆರಳಿದ್ದರು. ಸ್ವಲ್ಪ ಹೊತ್ತಿನ ಬಳಿಕ 6 ಮತ್ತು 7ನೇ ತರಗತಿಯ ಕೊಠಡಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಏಕಾಏಕಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕಣ್ಣು ಮಂಜಾಗಿದೆ. ನೋಡನೋಡುತ್ತಿದ್ದಂತೆ ಮಕ್ಕಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಕುಸಿದು ಬಿದ್ದಿದ್ದಾರೆ.
ಗಾಬರಿಗೊಂಡ ಶಿಕ್ಷಕರು ಮತ್ತು ಸಿಬ್ಬಂದಿ, ತಕ್ಷಣ ಸರ್ಕಾರಿ ಆಸ್ಪತ್ರೆಗೆ ಮಾಹಿತಿ ನೀಡಿದ್ದಾರೆ. ಆಂಬುಲೆನ್ಸ್ನಲ್ಲಿ ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಆತಂಕಗೊಂಡ ಪಾಲಕರು ಶಾಲೆ ಮತ್ತು ಆಸ್ಪತ್ರೆ ಬಳಿಗೆ ದೌಡಾಯಿಸಿದ್ದಾರೆ.
ಶಾಲಾ ಸಮೀಪ ಯಾವುದೋ ಕೆಮಿಕಲ್ ಟ್ಯಾಂಕ್ ಒಡೆದಿದ್ದು, ಪರಿಣಾಮ ಮಕ್ಕಳು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗುತ್ತಿದೆ. ತನಿಖೆ ಬಳಿಕ ಹಾಗೂ ಆಸ್ಪತ್ರೆಯ ವರದಿ ಬಂದ ಬಳಿಕ ಘಟನೆಗೆ ಕಾರಣ ಏನೆಂದು ತಿಳಿಯಲಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…