ಹೊಸೂರು: ರಾಜ್ಯದ ಗಡಿ ಭಾಗ ಆನೇಕಲ್ಗೆ ಹೊಂದಿಕೊಂಡ ತಮಿಳುನಾಡಿನ ಹೊಸೂರಿನಲ್ಲಿ ಸರ್ಕಾರಿ ಶಾಲೆಯೊಂದರ 150ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಸೂರು ಮಹಾನಗರ ಪಾಲಿಕೆಯ ಕಾಮರಾಜ್ ಕಾಲನಿಯಲ್ಲಿರು ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಶುಕ್ರವಾರ ಮಧ್ಯಾಹ್ನ ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥರಾಗಿದ್ದಾರೆ.
ಉಸಿರಾಟ ಸಮಸ್ಯೆಯಿಂದ ಕುಸಿದು ಬಿದ್ದಿದ್ದು, ಕೂಡಲೇ ಎಲ್ಲರನ್ನೂ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಶಾಲೆಯಲ್ಲಿ 1300 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎಂದಿನಂತೆ ಇಂದು ಮಧ್ಯಾಹ್ನ 1 ಗಂಟೆಗೆ ಊಟದ ವಿರಾಮ ನೀಡಲಾಗಿತ್ತು. ಊಟ ಮುಗಿಸಿ 2 ಗಂಟೆಗೆ ವಿದ್ಯಾರ್ಥಿಗಳೆಲ್ಲರೂ ಶಾಲಾ ಕೊಠಡಿಗೆ ತೆರಳಿದ್ದರು. ಸ್ವಲ್ಪ ಹೊತ್ತಿನ ಬಳಿಕ 6 ಮತ್ತು 7ನೇ ತರಗತಿಯ ಕೊಠಡಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಏಕಾಏಕಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕಣ್ಣು ಮಂಜಾಗಿದೆ. ನೋಡನೋಡುತ್ತಿದ್ದಂತೆ ಮಕ್ಕಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಕುಸಿದು ಬಿದ್ದಿದ್ದಾರೆ.
ಗಾಬರಿಗೊಂಡ ಶಿಕ್ಷಕರು ಮತ್ತು ಸಿಬ್ಬಂದಿ, ತಕ್ಷಣ ಸರ್ಕಾರಿ ಆಸ್ಪತ್ರೆಗೆ ಮಾಹಿತಿ ನೀಡಿದ್ದಾರೆ. ಆಂಬುಲೆನ್ಸ್ನಲ್ಲಿ ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಆತಂಕಗೊಂಡ ಪಾಲಕರು ಶಾಲೆ ಮತ್ತು ಆಸ್ಪತ್ರೆ ಬಳಿಗೆ ದೌಡಾಯಿಸಿದ್ದಾರೆ.
ಶಾಲಾ ಸಮೀಪ ಯಾವುದೋ ಕೆಮಿಕಲ್ ಟ್ಯಾಂಕ್ ಒಡೆದಿದ್ದು, ಪರಿಣಾಮ ಮಕ್ಕಳು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗುತ್ತಿದೆ. ತನಿಖೆ ಬಳಿಕ ಹಾಗೂ ಆಸ್ಪತ್ರೆಯ ವರದಿ ಬಂದ ಬಳಿಕ ಘಟನೆಗೆ ಕಾರಣ ಏನೆಂದು ತಿಳಿಯಲಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…