ಹೊಸೂರು: ರಾಜ್ಯದ ಗಡಿ ಭಾಗ ಆನೇಕಲ್ಗೆ ಹೊಂದಿಕೊಂಡ ತಮಿಳುನಾಡಿನ ಹೊಸೂರಿನಲ್ಲಿ ಸರ್ಕಾರಿ ಶಾಲೆಯೊಂದರ 150ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಸೂರು ಮಹಾನಗರ ಪಾಲಿಕೆಯ ಕಾಮರಾಜ್ ಕಾಲನಿಯಲ್ಲಿರು ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಶುಕ್ರವಾರ ಮಧ್ಯಾಹ್ನ ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥರಾಗಿದ್ದಾರೆ.
ಉಸಿರಾಟ ಸಮಸ್ಯೆಯಿಂದ ಕುಸಿದು ಬಿದ್ದಿದ್ದು, ಕೂಡಲೇ ಎಲ್ಲರನ್ನೂ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಶಾಲೆಯಲ್ಲಿ 1300 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎಂದಿನಂತೆ ಇಂದು ಮಧ್ಯಾಹ್ನ 1 ಗಂಟೆಗೆ ಊಟದ ವಿರಾಮ ನೀಡಲಾಗಿತ್ತು. ಊಟ ಮುಗಿಸಿ 2 ಗಂಟೆಗೆ ವಿದ್ಯಾರ್ಥಿಗಳೆಲ್ಲರೂ ಶಾಲಾ ಕೊಠಡಿಗೆ ತೆರಳಿದ್ದರು. ಸ್ವಲ್ಪ ಹೊತ್ತಿನ ಬಳಿಕ 6 ಮತ್ತು 7ನೇ ತರಗತಿಯ ಕೊಠಡಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಏಕಾಏಕಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕಣ್ಣು ಮಂಜಾಗಿದೆ. ನೋಡನೋಡುತ್ತಿದ್ದಂತೆ ಮಕ್ಕಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಕುಸಿದು ಬಿದ್ದಿದ್ದಾರೆ.
ಗಾಬರಿಗೊಂಡ ಶಿಕ್ಷಕರು ಮತ್ತು ಸಿಬ್ಬಂದಿ, ತಕ್ಷಣ ಸರ್ಕಾರಿ ಆಸ್ಪತ್ರೆಗೆ ಮಾಹಿತಿ ನೀಡಿದ್ದಾರೆ. ಆಂಬುಲೆನ್ಸ್ನಲ್ಲಿ ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಆತಂಕಗೊಂಡ ಪಾಲಕರು ಶಾಲೆ ಮತ್ತು ಆಸ್ಪತ್ರೆ ಬಳಿಗೆ ದೌಡಾಯಿಸಿದ್ದಾರೆ.
ಶಾಲಾ ಸಮೀಪ ಯಾವುದೋ ಕೆಮಿಕಲ್ ಟ್ಯಾಂಕ್ ಒಡೆದಿದ್ದು, ಪರಿಣಾಮ ಮಕ್ಕಳು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗುತ್ತಿದೆ. ತನಿಖೆ ಬಳಿಕ ಹಾಗೂ ಆಸ್ಪತ್ರೆಯ ವರದಿ ಬಂದ ಬಳಿಕ ಘಟನೆಗೆ ಕಾರಣ ಏನೆಂದು ತಿಳಿಯಲಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…