Categories: CorruptionLatest

ದೇಶಭಕ್ತನ ಮುಖವಾಡದ ಹಿಂದೆ ₹150 ಕೋಟಿ ಅಕ್ರಮ ಆಸ್ತಿ! ಎಸಿಬಿ ದಾಳಿಯಲ್ಲಿ ಸರ್ಕಾರಿ ಎಂಜಿನಿಯರ್ ಬಂಡವಾಳ ಬಯಲು

ಸಾಮಾಜಿಕ ಜಾಲತಾಣಗಳಲ್ಲಿ ತಾನೊಬ್ಬ ದೇಶಭಕ್ತ, ಪ್ರಾಮಾಣಿಕ ಹಾಗೂ ನೈತಿಕ ವ್ಯಕ್ತಿ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದ ತೆಲಂಗಾಣದ ಸರ್ಕಾರಿ ಎಂಜಿನಿಯರ್‌ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ACB) ನಡೆಸಿದ ದಾಳಿಯಲ್ಲಿ ಅಚ್ಚರಿಯ ಸಂಗತಿಗಳು ಬೆಳಕಿಗೆ ಬಂದಿವೆ. ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದ್ದು, ಅಧಿಕಾರಿಯ ದ್ವಿಮುಖ ವ್ಯಕ್ತಿತ್ವ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ವೈರಲ್ ಆಗಿರುವ ಮಾಹಿತಿಯ ಪ್ರಕಾರ, ಈ ಎಂಜಿನಿಯರ್ ತಮ್ಮ ವಾಟ್ಸಾಪ್‌ ಡಿಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಇಟ್ಟುಕೊಂಡಿದ್ದು, ಇನ್‌ಸ್ಟಾಗ್ರಾಮ್‌ ಬಯೋದಲ್ಲಿ ತಾನೊಬ್ಬ “ರಾಷ್ಟ್ರವಾದಿ” ಎಂದು ಉಲ್ಲೇಖಿಸಿದ್ದರು. ಅಷ್ಟೇ ಅಲ್ಲದೆ, ಕಳೆದ ವರ್ಷ ವಿಶ್ವವಿದ್ಯಾನಿಲಯವೊಂದು ಅವರನ್ನು “ನೈತಿಕತೆ ಮತ್ತು ಪ್ರಾಮಾಣಿಕತೆ” ವಿಷಯದ ಕುರಿತು ಉಪನ್ಯಾಸ ನೀಡಲು ಮುಖ್ಯ ಅತಿಥಿಯಾಗಿ ಆಹ್ವಾನಿಸಿತ್ತು ಎನ್ನಲಾಗಿದೆ. ಆದರೆ, ಎಸಿಬಿ ದಾಳಿಯ ಬಳಿಕ ಅವರ ಈ ಸಾರ್ವಜನಿಕ ಇಮೇಜ್‌ಗೆ ಸಂಪೂರ್ಣ ವಿರುದ್ಧವಾದ ಚಿತ್ರಣ ಹೊರಬಿದ್ದಿದೆ.

ಖಚಿತ ಮಾಹಿತಿ ಆಧರಿಸಿ ಅಧಿಕಾರಿಯ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಸುಮಾರು ₹150 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆಹಚ್ಚಿದ್ದಾರೆ ಎಂದು ವರದಿಯಾಗಿದೆ. ದಾಳಿಯಲ್ಲಿ ನಾಲ್ಕು ಐಷಾರಾಮಿ ಫ್ಲ್ಯಾಟ್‌ಗಳು, ಸುಮಾರು 2 ಕೆಜಿ ಚಿನ್ನ ಸೇರಿದಂತೆ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಹೊರಗೆ ದೇಶಭಕ್ತಿ ಮತ್ತು ನೈತಿಕತೆಯ ಬಗ್ಗೆ ಮಾತನಾಡಿ, ಒಳಗಡೆ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆಯೇ ಎಂಬ ಪ್ರಶ್ನೆಗಳನ್ನು ನೆಟ್ಟಿಗರು ಎತ್ತುತ್ತಿದ್ದಾರೆ. ತನಿಖೆ ಮುಂದುವರಿದಿದ್ದು, ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಭ್ರಷ್ಟರ ಬೇಟೆ

Recent Posts

ದಳಪತಿ ಹತ್ಯೆ; 17 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಕನ್ಯಾಕೊಳೂರು ಗ್ರಾಮದಲ್ಲಿ 2014ರಲ್ಲಿ ನಡೆದಿದ್ದ ದಲಿತ ಮುಖಂಡ ದೇವೇಂದ್ರಪ್ಪ ಭೀಮಪ್ಪ ದಳಪತಿ ಹತ್ಯೆ ಪ್ರಕರಣಕ್ಕೆ…

6 hours ago

₹15 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಗದಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ

ಗದಗ: ಹೊರಗುತ್ತಿಗೆ ಆಧಾರದ ಉದ್ಯೋಗ ನೀಡುವ ನೆಪದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.…

6 hours ago

ಪ್ರಿಯಕರನೊಂದಿಗೆ ಸೇರಿ ಮನೆಯಲ್ಲೇ ₹69 ಲಕ್ಷಕ್ಕೂ ಹೆಚ್ಚು ಕಳ್ಳತನ; ಸೊಸೆ ಸೇರಿ ಇಬ್ಬರನ್ನೂ ಒಂದೇ ದಿನದಲ್ಲಿ ಬಂಧಿಸಿದ ಹಾಸನ ಪೊಲೀಸರು

ಹಾಸನ: ಹಾಡುಹಗಲೇ ನಡೆದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣವನ್ನು ಹಾಸನ ಗ್ರಾಮಾಂತರ ಪೊಲೀಸರು ಕೇವಲ…

6 hours ago

ಟ್ರೋಲ್‌ಗಳಿಂದ ಬೇಸತ್ತ ಬಿಗ್ ಬಾಸ್ ಖ್ಯಾತಿಯ ಧ್ರುವಂತ್; ಪೊಲೀಸರ ಮೊರೆ ಹೋದ ನಟ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ನಿರಂತರವಾಗಿ ಬರುತ್ತಿರುವ ನೆಗೆಟಿವ್ ಕಾಮೆಂಟ್‌ಗಳು ಹಾಗೂ ಅವಹೇಳನಕಾರಿ ಟ್ರೋಲ್‌ಗಳಿಂದ ಬೇಸತ್ತಿರುವ ಬಿಗ್ ಬಾಸ್…

6 hours ago

ಡ್ರೈವರ್ ಸಹವಾಸ, ಗಂಡು ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಪೋಕ್ಸೋ ಪ್ರಕರಣ ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ…

6 hours ago

ಮೊದಲ ಪತ್ನಿ ಇರುವಾಗಲೇ ಎರಡನೇ ಮದುವೆಗೆ ಸಿದ್ಧನಾದ ಭೂಪ, ಮಂಟಪಕ್ಕೆ ನುಗ್ಗಿ ಮೊದಲ ಪತ್ನಿ ಮಾಡಿದ ಕೆಲಸಕ್ಕೆ ಆಗಿದೆ ಬೇರೆ..?

ಉತ್ತರ ಪ್ರದೇಶ: ಕಾನೂನಾತ್ಮಕವಾಗಿ ವಿಚ್ಛೇದನ (ತಲಾಖ್) ನೀಡದೇ ರಹಸ್ಯವಾಗಿ ಎರಡನೇ ಮದುವೆಗೆ ಮುಂದಾಗಿದ್ದ ಪತಿಯ ಮದುವೆಯನ್ನು ಮೊದಲ ಪತ್ನಿಯೇ ಮಂಟಪಕ್ಕೆ…

6 hours ago