ಚಿತ್ರದುರ್ಗದಲ್ಲಿ ನಡೆದ ಘಟನೆ ಒಂದು ನಿಜಕ್ಕೂ ಪ್ರೇರಣಾದಾಯಕ ಉದಾಹರಣೆಯಾಗಿದೆ. ಕಾನೂನಿನ ಪ್ರಕಾರ ಅಪರಾಧವಾಗಿದ್ದರೂ, ಕೆಲವೆಡೆ ಇನ್ನೂ ಬಾಲ್ಯವಿವಾಹವನ್ನು ನೆರವೇರಿಸಲು ಮುಂದಾಗುವವರಿದ್ದಾರೆ. ಆದರೆ, ಇಂತಹ ಅನ್ಯಾಯದ ವಿರುದ್ಧ ಧೈರ್ಯವಾಗಿ ನಿಲ್ಲುವ ಹೆಣ್ಣು ಮಕ್ಕಳು ವಿರಳ. ಇತ್ತೀಚೆಗೆ, 16 ವರ್ಷದ ಬಾಲಕಿಯೊಬ್ಬಳು ತಮ್ಮ ಮದುವೆಯ ಸಿದ್ಧತೆ ನಡೆಯುತ್ತಿರುವುದು ತಿಳಿದು, ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಅದನ್ನು ತಡೆಗಟ್ಟುವಂತೆ ಮನವಿ ಮಾಡಿದ್ದಾರೆ.
ಈ ಪ್ರಕರಣದಲ್ಲಿ ಬಾಲಕಿಯ ಪೋಷಕರು, ಹೆಂಡತಿಯನ್ನು ಕಳೆದುಕೊಂಡ ವ್ಯಕ್ತಿಯೊಂದಿಗೆ ಆಕೆಯ ಮದುವೆ ಮಾಡುವ ಯೋಜನೆ ರೂಪಿಸಿದ್ದರು. ಎಲ್ಲ ಸಿದ್ಧತೆಗಳೂ ಮುಗಿಯುತ್ತಿದ್ದಂತೆಯೇ, ಆಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ತಮ್ಮ ಬಾಲ್ಯವನ್ನು ಕಸಿದುಕೊಳ್ಳಬಾರದು ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ಪಿಎಸ್ಐ ಮಹೇಶ್ ಲಕ್ಷ್ಮಣ್ ಹೊಸಪೇಟ ಅವರ ಮುಂದೆ ತನ್ನ ನೋವು ಹಂಚಿಕೊಂಡ ಆಕೆ, “ನನಗೆ ಕೇವಲ 16 ವರ್ಷ. ನಾನು ಎಂಟನೇ ತರಗತಿಯಲ್ಲಿ ಓದುತ್ತಿದ್ದಾಗ, ಪೊಲೀಸ್ ಸಿಬ್ಬಂದಿ ಶಾಲೆಗೆ ಬಂದು ಬಾಲ್ಯವಿವಾಹದ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದ್ದರು. ಬಾಲ್ಯದಲ್ಲಿ ಮದುವೆಯಾದರೆ ಎದುರಾಗುವ ಮಾನಸಿಕ, ದೈಹಿಕ ತೊಂದರೆಗಳ ಕುರಿತು ಅಂದು ಅವರು ಹೇಳಿದ ಮಾತು ನನ್ನ ಮನಸ್ಸಿನಲ್ಲಿ ಉಳಿದುಕೊಂಡಿತ್ತು. ಅದೇ ಧೈರ್ಯವನ್ನು ಇಂದು ನನಗೆ ಕೊಟ್ಟಿದೆ” ಎಂದು ಹೇಳಿಕೊಂಡಿದ್ದಾಳೆ.
ಈ ಘಟನೆಯಲ್ಲಿ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಮದುವೆಯನ್ನು ತಡೆಗಟ್ಟಿದ್ದಾರೆ. ಬಾಲಕಿಯ ಧೈರ್ಯಕ್ಕೆ ಚಳ್ಳಕೆರೆಯ ಡಿವೈಎಸ್ಪಿ ಡಿ. ರಾಜಣ್ಣ ಅವರು “ಶಬ್ಬಾಶ್” ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಈ ಘಟನೆ, ಜಾಗೃತಿ ಮತ್ತು ಶಿಕ್ಷಣವು ಮಕ್ಕಳಿಗೆ ತಮ್ಮ ಹಕ್ಕುಗಳನ್ನು ರಕ್ಷಿಸುವ ಶಕ್ತಿ ನೀಡುತ್ತದೆ ಎಂಬುದಕ್ಕೆ ಜೀವಂತ ಸಾಕ್ಷಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…