Latest

ಆಂಟಿಯ ಹನಿ ಟ್ರಾಪ್‌ಗೆ ಸಿಲುಕಿ 2.90 ಲಕ್ಷ ರೂ. ಸಂಬಳದ ಕೆಲಸದ ಜೊತೆ 20 ಲಕ್ಷ ಕಳೆದುಕೊಂಡ!

ರವಿ ಜಯರಾಮ್‌ ಎಂಬುವರೇ ಹನಿ ಟ್ರ್ಯಾಪ್‌ನಲ್ಲಿ ಸಿಲುಕಿ ಉದ್ಯೋಗ ಕಳೆದುಕೊಂಡಿರುವ ವ್ಯಕ್ತಿ. ಪಾರ್ಟಿಯಲ್ಲಿ ಭವಾನಿ ಅವರನ್ನು ರವಿ ಜಯರಾಮ್ ಭೇಟಿಯಾಗಿದ್ದರು. ಪರಿಚಯ ಸ್ನೇಹಕ್ಕೆ ತಿರುಗಿತ್ತು. ಮಹಿಳೆಗೆ ಹಣ ಸಹಾಯವನ್ನು ರವಿ ಮಾಡಿದ್ದರು. ಭವಾನಿ ಆಗಾಗ್ಗೆ ಮನೆಗೆ ಬಂದು ಹೋಗುತ್ತಿದ್ದರು. ಒಟ್ಟಿಗೆ ಹತ್ತಾರು ಬಾರಿ ಸೆಲ್ಪಿ ತೆಗೆದುಕೊಳ್ಳುತ್ತಿದ್ದರು. ಬಳಿಕ ಖಾಸಗಿ ವಿಡಿಯೋಗಳನ್ನು ಸೆರೆಹಿಡಿಯಲಾಗಿತು.
ನಂತರದ ದಿನಗಳಲ್ಲಿ ಭವಾನಿಯ ಅಸಲಿ ಮುಖವಾಡ ಬೆಳಕಿಗೆ ಬಂದಿದೆ. ಬ್ಲಾಕ್ ಮೇಲ್ ಮಾಡಲು ಭವಾನಿ ಗ್ಯಾಂಗ್‌ ಶುರು ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಫೋಟೋ ಅಪ್ಲೋಡ್ ಮಾಡೋದಾಗಿ ಬೆದರಿಕೆ ಹಾಕಲಾಗಿತು.
ನಿರಾಕರಿಸಿದಾಗ ದೂರುದಾರನ ಪತ್ನಿಗೂ ತಾವಿಬ್ಬರೇ ಇರುವ ಖಾಸಗಿ ವಿಡಿಯೋ ಫೊಟೋಗಳನ್ನು ಭವಾನಿ ಸೆಂಡ್ ಮಾಡಿದ್ದಳು. ನಂತರ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡೋದಾಗಿ ಬೆದರಿಕೆ ಹಾಕಿದ್ದಳು. ಈ ಹಿನ್ನಲೆಯಲ್ಲಿ ಹಂತ ಹಂತವಾಗಿ 20 ಲಕ್ಷ ರೂ.ಗಳನ್ನು ರವಿ ಜಯರಾಮ್ ನೀಡಿದ್ದ. ಭವಾನಿಗೆ ಸ್ವತಃ ಆಕೆಯ ತಾಯಿ, ತಮ್ಮ, ತಂಗಿ ಸೇರಿ ಇಡೀ ಕುಟುಂಬ ಸಾಥ್‌ ನೀಡಿತ್ತು.
ದೂರಿನಲ್ಲಿ ಇಡಿ ಕುಟುಂಬದ ಹೆಸರನ್ನ ರವಿ ಜಯರಾಮ್ ದಾಖಲಿಸಿದ್ದಾರೆ. ನಂತರ ಆಕೆಗೆ ಈಗಾಗಲೆ ಎರಡು ಮದುವೆ ಆಗಿರುವ ವಿಚಾರ ಗೊತ್ತಾಗಿದೆ. ಒಂದು ಡಿವೋರ್ಸ್ ಆಗಿದ್ದು ಮತ್ತೊಂದು ಡಿವೋರ್ಸ್ ಪ್ರಕರಣ ನ್ಯಾಯಾಲಯದಲ್ಲಿದೆ.
ರವಿ ಜಯರಾಮ್‌ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿ ಬಳಿ ಕೂಡ ಭವಾನಿ ಬಂದು ಗಲಾಟೆ ಮಾಡಿದ್ದರಿಂದ, ಕಂಪನಿ ಆತನನ್ನು ಉದ್ಯೋಗದಿಂದ ವಜಾಗೊಳಿಸಿತ್ತು. ಕೊನೆಗೆ ಈಕೆ ವಿರುದ್ಧ ಜಯರಾಮ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದ. ಈಕೆಯನ್ನು ಕರೆಸಿದಾಗ
ದೂರು ದಾಖಲಾದರೆ ಡಿಸಿಪಿ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಆರೋಪಿ ಭವಾನಿ ಬೆದರಿಸಿದ್ದಾರೆ. ಡಿಸಿಪಿ, ಎಸಿಪಿ ಕಚೇರಿ ಮುಂದೆಯೇ ಮಹಿಳೆ ಹೈಡ್ರಾಮಾ ಮಾಡಿದ್ದಳು.
ಇತ್ತ ಕೈತುಂಬ ಕೆಲಸವೂ ಇಲ್ಲದೆ , ಹೆಂಡತಿಯನ್ನೂ ಕಳೆದುಕೊಂಡು ರವಿ ಜಯರಾಮ್ ಅಲೆದಾಡುವ ಪರಿಸ್ಥಿತಿ ಬಂದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಭ್ರಷ್ಟರ ಬೇಟೆ

Recent Posts

ಮೀಟರ್ ಬಡ್ಡಿ ದಂದೆಕೋರನ ಮೇಲೆ ಡೆಡ್ಲಿ ಅಟ್ಯಾಕ್, ಮರ್ಡರ್ : ಆರೋಪಿಗಳ ಬಂಧನ

ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೋಟೆಲ್‌ನಲ್ಲಿ ಊಟಕ್ಕೆ ಕುಳಿತಿದ್ದಾಗ ನಡೆದಿದ್ದ ರೌಡಿ ಶೀಟರ್ ಜಮೀರ್…

10 hours ago

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

20 hours ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

20 hours ago

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

1 day ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

1 day ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

1 day ago