Latest

ಆಂಟಿಯ ಹನಿ ಟ್ರಾಪ್‌ಗೆ ಸಿಲುಕಿ 2.90 ಲಕ್ಷ ರೂ. ಸಂಬಳದ ಕೆಲಸದ ಜೊತೆ 20 ಲಕ್ಷ ಕಳೆದುಕೊಂಡ!

ರವಿ ಜಯರಾಮ್‌ ಎಂಬುವರೇ ಹನಿ ಟ್ರ್ಯಾಪ್‌ನಲ್ಲಿ ಸಿಲುಕಿ ಉದ್ಯೋಗ ಕಳೆದುಕೊಂಡಿರುವ ವ್ಯಕ್ತಿ. ಪಾರ್ಟಿಯಲ್ಲಿ ಭವಾನಿ ಅವರನ್ನು ರವಿ ಜಯರಾಮ್ ಭೇಟಿಯಾಗಿದ್ದರು. ಪರಿಚಯ ಸ್ನೇಹಕ್ಕೆ ತಿರುಗಿತ್ತು. ಮಹಿಳೆಗೆ ಹಣ ಸಹಾಯವನ್ನು ರವಿ ಮಾಡಿದ್ದರು. ಭವಾನಿ ಆಗಾಗ್ಗೆ ಮನೆಗೆ ಬಂದು ಹೋಗುತ್ತಿದ್ದರು. ಒಟ್ಟಿಗೆ ಹತ್ತಾರು ಬಾರಿ ಸೆಲ್ಪಿ ತೆಗೆದುಕೊಳ್ಳುತ್ತಿದ್ದರು. ಬಳಿಕ ಖಾಸಗಿ ವಿಡಿಯೋಗಳನ್ನು ಸೆರೆಹಿಡಿಯಲಾಗಿತು.
ನಂತರದ ದಿನಗಳಲ್ಲಿ ಭವಾನಿಯ ಅಸಲಿ ಮುಖವಾಡ ಬೆಳಕಿಗೆ ಬಂದಿದೆ. ಬ್ಲಾಕ್ ಮೇಲ್ ಮಾಡಲು ಭವಾನಿ ಗ್ಯಾಂಗ್‌ ಶುರು ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಫೋಟೋ ಅಪ್ಲೋಡ್ ಮಾಡೋದಾಗಿ ಬೆದರಿಕೆ ಹಾಕಲಾಗಿತು.
ನಿರಾಕರಿಸಿದಾಗ ದೂರುದಾರನ ಪತ್ನಿಗೂ ತಾವಿಬ್ಬರೇ ಇರುವ ಖಾಸಗಿ ವಿಡಿಯೋ ಫೊಟೋಗಳನ್ನು ಭವಾನಿ ಸೆಂಡ್ ಮಾಡಿದ್ದಳು. ನಂತರ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡೋದಾಗಿ ಬೆದರಿಕೆ ಹಾಕಿದ್ದಳು. ಈ ಹಿನ್ನಲೆಯಲ್ಲಿ ಹಂತ ಹಂತವಾಗಿ 20 ಲಕ್ಷ ರೂ.ಗಳನ್ನು ರವಿ ಜಯರಾಮ್ ನೀಡಿದ್ದ. ಭವಾನಿಗೆ ಸ್ವತಃ ಆಕೆಯ ತಾಯಿ, ತಮ್ಮ, ತಂಗಿ ಸೇರಿ ಇಡೀ ಕುಟುಂಬ ಸಾಥ್‌ ನೀಡಿತ್ತು.
ದೂರಿನಲ್ಲಿ ಇಡಿ ಕುಟುಂಬದ ಹೆಸರನ್ನ ರವಿ ಜಯರಾಮ್ ದಾಖಲಿಸಿದ್ದಾರೆ. ನಂತರ ಆಕೆಗೆ ಈಗಾಗಲೆ ಎರಡು ಮದುವೆ ಆಗಿರುವ ವಿಚಾರ ಗೊತ್ತಾಗಿದೆ. ಒಂದು ಡಿವೋರ್ಸ್ ಆಗಿದ್ದು ಮತ್ತೊಂದು ಡಿವೋರ್ಸ್ ಪ್ರಕರಣ ನ್ಯಾಯಾಲಯದಲ್ಲಿದೆ.
ರವಿ ಜಯರಾಮ್‌ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿ ಬಳಿ ಕೂಡ ಭವಾನಿ ಬಂದು ಗಲಾಟೆ ಮಾಡಿದ್ದರಿಂದ, ಕಂಪನಿ ಆತನನ್ನು ಉದ್ಯೋಗದಿಂದ ವಜಾಗೊಳಿಸಿತ್ತು. ಕೊನೆಗೆ ಈಕೆ ವಿರುದ್ಧ ಜಯರಾಮ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದ. ಈಕೆಯನ್ನು ಕರೆಸಿದಾಗ
ದೂರು ದಾಖಲಾದರೆ ಡಿಸಿಪಿ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಆರೋಪಿ ಭವಾನಿ ಬೆದರಿಸಿದ್ದಾರೆ. ಡಿಸಿಪಿ, ಎಸಿಪಿ ಕಚೇರಿ ಮುಂದೆಯೇ ಮಹಿಳೆ ಹೈಡ್ರಾಮಾ ಮಾಡಿದ್ದಳು.
ಇತ್ತ ಕೈತುಂಬ ಕೆಲಸವೂ ಇಲ್ಲದೆ , ಹೆಂಡತಿಯನ್ನೂ ಕಳೆದುಕೊಂಡು ರವಿ ಜಯರಾಮ್ ಅಲೆದಾಡುವ ಪರಿಸ್ಥಿತಿ ಬಂದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

10 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

15 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

15 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

15 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

15 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

20 hours ago