ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ, ಖಾತಾ ಮ್ಯೂಟೇಶನ್ಗೆ ಲಂಚ ಬೇಡಿಕೆ ಇಟ್ಟ ಆರೋಪದಡಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. 2 ಲಕ್ಷ ರೂಪಾಯಿ ಲಂಚ ಕೇಳಿದ್ದರೆಂಬ ದೂರಿನ ಆಧಾರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ.
ಸಿರವಾರ ಪಟ್ಟಣದ ಹೊಸ ಲೇಔಟ್ನ 34 ನಿವೇಶನಗಳ ಖಾತಾ ಮ್ಯೂಟೇಶನ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಲೇಔಟ್ ಮಾಲೀಕ ರಘರಾಮ್ ರೆಡ್ಡಿಯಿಂದ ಸುರೇಶ್ ಶೆಟ್ಟಿ ಲಂಚ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ರೆಡ್ಡಿ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು.
ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ನಿನ್ನೆ ರಘರಾಮ್ ರೆಡ್ಡಿ ಅವರು 1 ಲಕ್ಷ ರೂಪಾಯಿ ಹಣವನ್ನು ನೀಡುವ ವೇಳೆ ದಾಳಿ ನಡೆಸಿದರು. ಆದರೆ ದಾಳಿ ವೇಳೆ ಸುರೇಶ್ ಶೆಟ್ಟಿ ಹಣ ಸಮೇತ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ.
ಪರಾರಿಯಾದ ಶೆಟ್ಟಿ, ಸಿರವಾರದಿಂದ ಕವಿತಾಳ ಕಡೆಗೆ ತೆರಳಿ ತನ್ನ ಸ್ನೇಹಿತರ ಮನೆಯಲ್ಲಿ ಅಡಗಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಲೋಕಾಯುಕ್ತ ತಂಡ, ಮೊಬೈಲ್ ಲೊಕೇಶನ್ ಟ್ರೇಸ್ ಮೂಲಕ ಕವಿತಾಳ ಪಟ್ಟಣದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದೆ.
ಸಿನಿಮೀಯ ಶೈಲಿಯಲ್ಲಿ ನಡೆದ ಈ ಕಾರ್ಯಾಚರಣೆ ಗಮನ ಸೆಳೆದಿದ್ದು, ಸದ್ಯ ಸುರೇಶ್ ಶೆಟ್ಟಿಯನ್ನು ವಿಚಾರಣೆಗೊಳಪಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…