Latest

ಬ್ರಾಹ್ಮಣ ಹುಡುಗಿಗೆ 20 ಲಕ್ಷ, ದಲಿತ ಹುಡುಗಿಗೆ 10 ಲಕ್ಷ; ರಾಜಸ್ಥಾನದಲ್ಲಿ ಅಪ್ರಾಪ್ತ ಬಾಲಕಿಯರ ಬ್ಲ್ಯಾಕ್ಮೇಲ್ ಮತ್ತು ಬಲವಂತ ಮತಾಂತರ..!

ರಾಜಸ್ಥಾನದ ಬೇವಾರ ಜಿಲ್ಲೆಯ ವಿಜಯನಗರದಲ್ಲಿ, ಅಪ್ರಾಪ್ತ ಬಾಲಕಿಯರ ಬ್ಲ್ಯಾಕ್ಮೇಲ್, ಲೈಂಗಿಕ ದೌರ್ಜನ್ಯ ಮತ್ತು ಬಲವಂತ ಮತಾಂತರ ಪ್ರಕರಣಗಳು ಬೆಳಕಿಗೆ ಬಂದಿದ್ದು, ಪೊಲೀಸರು 12 ರಿಂದ 15 ಮಂದಿಯ ಮುಸ್ಲಿಂ ಗ್ಯಾಂಗ್ ಅನ್ನು ಬಂಧಿಸಿದ್ದಾರೆ.

ಸಂತ್ರಸ್ತೆಯ ಕುಟುಂಬದವರು ದೂರು ನೀಡಿದ ನಂತರ, ಈ ಪ್ರಕರಣ ಬಹಿರಂಗವಾಯಿತು. ತನಿಖೆಯಲ್ಲಿ, ಗ್ಯಾಂಗ್‌ನವರು ಅಪ್ರಾಪ್ತ ಶಾಲಾ ಬಾಲಕಿಯರನ್ನು ಬ್ಲ್ಯಾಕ್ಮೇಲ್ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿ, ಬಲವಂತವಾಗಿ ಮತಾಂತರ ಮಾಡಲು ಸಂಚು ರೂಪಿಸಿದ್ದರೆಂದು ತಿಳಿದುಬಂದಿದೆ. ವಿಶೇಷವಾಗಿ, ಬ್ರಾಹ್ಮಣ ಹುಡುಗಿಯರನ್ನು ಬಲೆಗೆ ಬೀಳಿಸಲು 20 ಲಕ್ಷ ರೂಪಾಯಿ, ದಲಿತ ಹುಡುಗಿಯರಿಗೆ 10 ಲಕ್ಷ ರೂಪಾಯಿ ನೀಡಲಾಗುತ್ತಿತ್ತು. ಗಮನಾರ್ಹವಾಗಿ, ಎಲ್ಲಾ ಆರೋಪಿಗಳು ಅನಕ್ಷರಸ್ಥರಾಗಿದ್ದಾರೆ.

ಈ ಪ್ರಕರಣವನ್ನು 1992ರ ಅಜ್ಮೇರ ಬ್ಲ್ಯಾಕ್ಮೇಲ್ ಪ್ರಕರಣಕ್ಕೆ ಹೋಲಿಸಲಾಗುತ್ತಿದೆ, ಅಲ್ಲಿ ಅಪ್ರಾಪ್ತ ಹಿಂದೂ ಶಾಲಾ ಬಾಲಕಿಯರನ್ನು ಗುರಿಯಾಗಿಸಲಾಗಿತ್ತು.

ಒಬ್ಬ ಸಂತ್ರಸ್ತೆಯ ಹೇಳಿಕೆಯ ಪ್ರಕಾರ, ಆರೋಪಿ ಯುವಕನ ಗುಂಪಿನಲ್ಲಿ ಅನೇಕ ಹುಡುಗರು ಇದ್ದಾರೆ, ಅವರು ಸಂಚು ಮಾಡಿ ಹುಡುಗಿಯರನ್ನು ಮತಾಂತರಿಸುತ್ತಿದ್ದರು. ಈ ಹುಡುಗಿಯರನ್ನು ಬಲೆಗೆ ಬೀಳಿಸಲು ಹುಡುಗರು ಪ್ರತಿದಿನ ಹೊಸ ಕಾರುಗಳನ್ನು ತರುತ್ತಿದ್ದರು. ಕೆಲವೊಮ್ಮೆ ಮೋಟಾರ್ ಸೈಕಲ್, ಕೆಲವೊಮ್ಮೆ ಬುಲೆಟ್ ಹೀಗೆ ಬೇರೆ ಬೇರೆ ವಾಹನಗಳನ್ನು ತರುತ್ತಿದ್ದರು. ಒಂದುವೇಳೆ ನಾವು ಬ್ರಾಹ್ಮಣರ ಹುಡುಗಿಯನ್ನು ಮಾರಿದರೆ ನಮಗೆ 20 ಲಕ್ಷ ರೂಪಾಯಿಗಳು ಸಿಗುತ್ತವೆ ಮತ್ತು ನಿಮ್ಮನ್ನು (ದಲಿತರನ್ನು) ಮಾರಿದರೆ ಅವರಿಗೆ 10 ಲಕ್ಷ ರೂಪಾಯಿಗಳು ಸಿಗುತ್ತವೆ ಎಂದು ಹೇಳಿದ್ದರು.

ಆ ಗ್ಯಾಂಗ್‌ನಲ್ಲಿದ್ದ ಮುಸ್ಲಿಮರು ಹುಡುಗಿಯರನ್ನು ತಮ್ಮ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಡ ಹೇರಿದರು. ಈ ಯುವಕರು ಹುಡುಗಿಯರ ಮೇಲೆ ‘ಕಲಮಾ’ ಪಠಿಸಲು ಮತ್ತು ಉಪವಾಸಗಳನ್ನು ಮಾಡಲು ಒತ್ತಡ ಹೇರಿದರು. ಇದಕ್ಕಾಗಿ ಅವರು ಈ ಹುಡುಗಿಯರ ಅಶ್ಲೀಲ ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ಮಾಡುವುದಾಗಿ ಬೆದರಿಕೆ ಹಾಕಿದರು.

ಈ ಪ್ರಕರಣದಲ್ಲಿ ಪೊಲೀಸರು 3 ದೂರುಗಳನ್ನು ದಾಖಲಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ರಿಹಾನ ಮಹಮ್ಮದ, ಸೊಹೈಲ ಮನ್ಸೂರಿ, ಲುಕಮಾನ, ಅರ್ಮಾನ ಪಠಾಣ ಮತ್ತು ಸಾಹಿಲ ಖುರೇಷಿ ಸೇರಿದ್ದಾರೆ. ಪೊಲೀಸರು ಇನ್ನೂ ಪರಾರಿಯಾಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಬಂಧಿತ ಆರೋಪಿಗಳನ್ನು ಪೊಲೀಸರು ಅಜ್ಮೇರ ಪೋಕ್ಸೊ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ವಕೀಲರು ಅವರನ್ನು ಥಳಿಸಿದರು. ನಾಲ್ಕು ದಿನಗಳ ಹಿಂದೆಯೂ ಇದೇ ರೀತಿ ವಕೀಲರು ಆರೋಪಿಗಳನ್ನು ಥಳಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಯಿತು. ಇನ್ನೊಂದೆಡೆ, ಆರೋಪಿಗಳಿಗೆ ಗಲ್ಲುಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಸರ್ವ ಸಮಾಜ ಸಂಘರ್ಷ ಸಮಿತಿಯು ನಗರದಲ್ಲಿ ಬಂದ್ ಆಚರಿಸಿತು. ಈ ಪ್ರಕರಣದಲ್ಲಿ 7 ಆರೋಪಿಗಳಲ್ಲದೆ, 3 ಅಪ್ರಾಪ್ತ ಹುಡುಗರೂ ಆರೋಪಿಗಳಾಗಿದ್ದಾರೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago