Latest

ಬ್ರಾಹ್ಮಣ ಹುಡುಗಿಗೆ 20 ಲಕ್ಷ, ದಲಿತ ಹುಡುಗಿಗೆ 10 ಲಕ್ಷ; ರಾಜಸ್ಥಾನದಲ್ಲಿ ಅಪ್ರಾಪ್ತ ಬಾಲಕಿಯರ ಬ್ಲ್ಯಾಕ್ಮೇಲ್ ಮತ್ತು ಬಲವಂತ ಮತಾಂತರ..!

ರಾಜಸ್ಥಾನದ ಬೇವಾರ ಜಿಲ್ಲೆಯ ವಿಜಯನಗರದಲ್ಲಿ, ಅಪ್ರಾಪ್ತ ಬಾಲಕಿಯರ ಬ್ಲ್ಯಾಕ್ಮೇಲ್, ಲೈಂಗಿಕ ದೌರ್ಜನ್ಯ ಮತ್ತು ಬಲವಂತ ಮತಾಂತರ ಪ್ರಕರಣಗಳು ಬೆಳಕಿಗೆ ಬಂದಿದ್ದು, ಪೊಲೀಸರು 12 ರಿಂದ 15 ಮಂದಿಯ ಮುಸ್ಲಿಂ ಗ್ಯಾಂಗ್ ಅನ್ನು ಬಂಧಿಸಿದ್ದಾರೆ.

ಸಂತ್ರಸ್ತೆಯ ಕುಟುಂಬದವರು ದೂರು ನೀಡಿದ ನಂತರ, ಈ ಪ್ರಕರಣ ಬಹಿರಂಗವಾಯಿತು. ತನಿಖೆಯಲ್ಲಿ, ಗ್ಯಾಂಗ್‌ನವರು ಅಪ್ರಾಪ್ತ ಶಾಲಾ ಬಾಲಕಿಯರನ್ನು ಬ್ಲ್ಯಾಕ್ಮೇಲ್ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿ, ಬಲವಂತವಾಗಿ ಮತಾಂತರ ಮಾಡಲು ಸಂಚು ರೂಪಿಸಿದ್ದರೆಂದು ತಿಳಿದುಬಂದಿದೆ. ವಿಶೇಷವಾಗಿ, ಬ್ರಾಹ್ಮಣ ಹುಡುಗಿಯರನ್ನು ಬಲೆಗೆ ಬೀಳಿಸಲು 20 ಲಕ್ಷ ರೂಪಾಯಿ, ದಲಿತ ಹುಡುಗಿಯರಿಗೆ 10 ಲಕ್ಷ ರೂಪಾಯಿ ನೀಡಲಾಗುತ್ತಿತ್ತು. ಗಮನಾರ್ಹವಾಗಿ, ಎಲ್ಲಾ ಆರೋಪಿಗಳು ಅನಕ್ಷರಸ್ಥರಾಗಿದ್ದಾರೆ.

ಈ ಪ್ರಕರಣವನ್ನು 1992ರ ಅಜ್ಮೇರ ಬ್ಲ್ಯಾಕ್ಮೇಲ್ ಪ್ರಕರಣಕ್ಕೆ ಹೋಲಿಸಲಾಗುತ್ತಿದೆ, ಅಲ್ಲಿ ಅಪ್ರಾಪ್ತ ಹಿಂದೂ ಶಾಲಾ ಬಾಲಕಿಯರನ್ನು ಗುರಿಯಾಗಿಸಲಾಗಿತ್ತು.

ಒಬ್ಬ ಸಂತ್ರಸ್ತೆಯ ಹೇಳಿಕೆಯ ಪ್ರಕಾರ, ಆರೋಪಿ ಯುವಕನ ಗುಂಪಿನಲ್ಲಿ ಅನೇಕ ಹುಡುಗರು ಇದ್ದಾರೆ, ಅವರು ಸಂಚು ಮಾಡಿ ಹುಡುಗಿಯರನ್ನು ಮತಾಂತರಿಸುತ್ತಿದ್ದರು. ಈ ಹುಡುಗಿಯರನ್ನು ಬಲೆಗೆ ಬೀಳಿಸಲು ಹುಡುಗರು ಪ್ರತಿದಿನ ಹೊಸ ಕಾರುಗಳನ್ನು ತರುತ್ತಿದ್ದರು. ಕೆಲವೊಮ್ಮೆ ಮೋಟಾರ್ ಸೈಕಲ್, ಕೆಲವೊಮ್ಮೆ ಬುಲೆಟ್ ಹೀಗೆ ಬೇರೆ ಬೇರೆ ವಾಹನಗಳನ್ನು ತರುತ್ತಿದ್ದರು. ಒಂದುವೇಳೆ ನಾವು ಬ್ರಾಹ್ಮಣರ ಹುಡುಗಿಯನ್ನು ಮಾರಿದರೆ ನಮಗೆ 20 ಲಕ್ಷ ರೂಪಾಯಿಗಳು ಸಿಗುತ್ತವೆ ಮತ್ತು ನಿಮ್ಮನ್ನು (ದಲಿತರನ್ನು) ಮಾರಿದರೆ ಅವರಿಗೆ 10 ಲಕ್ಷ ರೂಪಾಯಿಗಳು ಸಿಗುತ್ತವೆ ಎಂದು ಹೇಳಿದ್ದರು.

ಆ ಗ್ಯಾಂಗ್‌ನಲ್ಲಿದ್ದ ಮುಸ್ಲಿಮರು ಹುಡುಗಿಯರನ್ನು ತಮ್ಮ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಡ ಹೇರಿದರು. ಈ ಯುವಕರು ಹುಡುಗಿಯರ ಮೇಲೆ ‘ಕಲಮಾ’ ಪಠಿಸಲು ಮತ್ತು ಉಪವಾಸಗಳನ್ನು ಮಾಡಲು ಒತ್ತಡ ಹೇರಿದರು. ಇದಕ್ಕಾಗಿ ಅವರು ಈ ಹುಡುಗಿಯರ ಅಶ್ಲೀಲ ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ಮಾಡುವುದಾಗಿ ಬೆದರಿಕೆ ಹಾಕಿದರು.

ಈ ಪ್ರಕರಣದಲ್ಲಿ ಪೊಲೀಸರು 3 ದೂರುಗಳನ್ನು ದಾಖಲಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ರಿಹಾನ ಮಹಮ್ಮದ, ಸೊಹೈಲ ಮನ್ಸೂರಿ, ಲುಕಮಾನ, ಅರ್ಮಾನ ಪಠಾಣ ಮತ್ತು ಸಾಹಿಲ ಖುರೇಷಿ ಸೇರಿದ್ದಾರೆ. ಪೊಲೀಸರು ಇನ್ನೂ ಪರಾರಿಯಾಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಬಂಧಿತ ಆರೋಪಿಗಳನ್ನು ಪೊಲೀಸರು ಅಜ್ಮೇರ ಪೋಕ್ಸೊ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ವಕೀಲರು ಅವರನ್ನು ಥಳಿಸಿದರು. ನಾಲ್ಕು ದಿನಗಳ ಹಿಂದೆಯೂ ಇದೇ ರೀತಿ ವಕೀಲರು ಆರೋಪಿಗಳನ್ನು ಥಳಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಯಿತು. ಇನ್ನೊಂದೆಡೆ, ಆರೋಪಿಗಳಿಗೆ ಗಲ್ಲುಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಸರ್ವ ಸಮಾಜ ಸಂಘರ್ಷ ಸಮಿತಿಯು ನಗರದಲ್ಲಿ ಬಂದ್ ಆಚರಿಸಿತು. ಈ ಪ್ರಕರಣದಲ್ಲಿ 7 ಆರೋಪಿಗಳಲ್ಲದೆ, 3 ಅಪ್ರಾಪ್ತ ಹುಡುಗರೂ ಆರೋಪಿಗಳಾಗಿದ್ದಾರೆ.

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

16 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

17 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

17 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

17 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

17 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

2 days ago