Latest

ಬ್ರಾಹ್ಮಣ ಹುಡುಗಿಗೆ 20 ಲಕ್ಷ, ದಲಿತ ಹುಡುಗಿಗೆ 10 ಲಕ್ಷ; ರಾಜಸ್ಥಾನದಲ್ಲಿ ಅಪ್ರಾಪ್ತ ಬಾಲಕಿಯರ ಬ್ಲ್ಯಾಕ್ಮೇಲ್ ಮತ್ತು ಬಲವಂತ ಮತಾಂತರ..!

ರಾಜಸ್ಥಾನದ ಬೇವಾರ ಜಿಲ್ಲೆಯ ವಿಜಯನಗರದಲ್ಲಿ, ಅಪ್ರಾಪ್ತ ಬಾಲಕಿಯರ ಬ್ಲ್ಯಾಕ್ಮೇಲ್, ಲೈಂಗಿಕ ದೌರ್ಜನ್ಯ ಮತ್ತು ಬಲವಂತ ಮತಾಂತರ ಪ್ರಕರಣಗಳು ಬೆಳಕಿಗೆ ಬಂದಿದ್ದು, ಪೊಲೀಸರು 12 ರಿಂದ 15 ಮಂದಿಯ ಮುಸ್ಲಿಂ ಗ್ಯಾಂಗ್ ಅನ್ನು ಬಂಧಿಸಿದ್ದಾರೆ.

ಸಂತ್ರಸ್ತೆಯ ಕುಟುಂಬದವರು ದೂರು ನೀಡಿದ ನಂತರ, ಈ ಪ್ರಕರಣ ಬಹಿರಂಗವಾಯಿತು. ತನಿಖೆಯಲ್ಲಿ, ಗ್ಯಾಂಗ್‌ನವರು ಅಪ್ರಾಪ್ತ ಶಾಲಾ ಬಾಲಕಿಯರನ್ನು ಬ್ಲ್ಯಾಕ್ಮೇಲ್ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿ, ಬಲವಂತವಾಗಿ ಮತಾಂತರ ಮಾಡಲು ಸಂಚು ರೂಪಿಸಿದ್ದರೆಂದು ತಿಳಿದುಬಂದಿದೆ. ವಿಶೇಷವಾಗಿ, ಬ್ರಾಹ್ಮಣ ಹುಡುಗಿಯರನ್ನು ಬಲೆಗೆ ಬೀಳಿಸಲು 20 ಲಕ್ಷ ರೂಪಾಯಿ, ದಲಿತ ಹುಡುಗಿಯರಿಗೆ 10 ಲಕ್ಷ ರೂಪಾಯಿ ನೀಡಲಾಗುತ್ತಿತ್ತು. ಗಮನಾರ್ಹವಾಗಿ, ಎಲ್ಲಾ ಆರೋಪಿಗಳು ಅನಕ್ಷರಸ್ಥರಾಗಿದ್ದಾರೆ.

ಈ ಪ್ರಕರಣವನ್ನು 1992ರ ಅಜ್ಮೇರ ಬ್ಲ್ಯಾಕ್ಮೇಲ್ ಪ್ರಕರಣಕ್ಕೆ ಹೋಲಿಸಲಾಗುತ್ತಿದೆ, ಅಲ್ಲಿ ಅಪ್ರಾಪ್ತ ಹಿಂದೂ ಶಾಲಾ ಬಾಲಕಿಯರನ್ನು ಗುರಿಯಾಗಿಸಲಾಗಿತ್ತು.

ಒಬ್ಬ ಸಂತ್ರಸ್ತೆಯ ಹೇಳಿಕೆಯ ಪ್ರಕಾರ, ಆರೋಪಿ ಯುವಕನ ಗುಂಪಿನಲ್ಲಿ ಅನೇಕ ಹುಡುಗರು ಇದ್ದಾರೆ, ಅವರು ಸಂಚು ಮಾಡಿ ಹುಡುಗಿಯರನ್ನು ಮತಾಂತರಿಸುತ್ತಿದ್ದರು. ಈ ಹುಡುಗಿಯರನ್ನು ಬಲೆಗೆ ಬೀಳಿಸಲು ಹುಡುಗರು ಪ್ರತಿದಿನ ಹೊಸ ಕಾರುಗಳನ್ನು ತರುತ್ತಿದ್ದರು. ಕೆಲವೊಮ್ಮೆ ಮೋಟಾರ್ ಸೈಕಲ್, ಕೆಲವೊಮ್ಮೆ ಬುಲೆಟ್ ಹೀಗೆ ಬೇರೆ ಬೇರೆ ವಾಹನಗಳನ್ನು ತರುತ್ತಿದ್ದರು. ಒಂದುವೇಳೆ ನಾವು ಬ್ರಾಹ್ಮಣರ ಹುಡುಗಿಯನ್ನು ಮಾರಿದರೆ ನಮಗೆ 20 ಲಕ್ಷ ರೂಪಾಯಿಗಳು ಸಿಗುತ್ತವೆ ಮತ್ತು ನಿಮ್ಮನ್ನು (ದಲಿತರನ್ನು) ಮಾರಿದರೆ ಅವರಿಗೆ 10 ಲಕ್ಷ ರೂಪಾಯಿಗಳು ಸಿಗುತ್ತವೆ ಎಂದು ಹೇಳಿದ್ದರು.

ಆ ಗ್ಯಾಂಗ್‌ನಲ್ಲಿದ್ದ ಮುಸ್ಲಿಮರು ಹುಡುಗಿಯರನ್ನು ತಮ್ಮ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಡ ಹೇರಿದರು. ಈ ಯುವಕರು ಹುಡುಗಿಯರ ಮೇಲೆ ‘ಕಲಮಾ’ ಪಠಿಸಲು ಮತ್ತು ಉಪವಾಸಗಳನ್ನು ಮಾಡಲು ಒತ್ತಡ ಹೇರಿದರು. ಇದಕ್ಕಾಗಿ ಅವರು ಈ ಹುಡುಗಿಯರ ಅಶ್ಲೀಲ ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ಮಾಡುವುದಾಗಿ ಬೆದರಿಕೆ ಹಾಕಿದರು.

ಈ ಪ್ರಕರಣದಲ್ಲಿ ಪೊಲೀಸರು 3 ದೂರುಗಳನ್ನು ದಾಖಲಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ರಿಹಾನ ಮಹಮ್ಮದ, ಸೊಹೈಲ ಮನ್ಸೂರಿ, ಲುಕಮಾನ, ಅರ್ಮಾನ ಪಠಾಣ ಮತ್ತು ಸಾಹಿಲ ಖುರೇಷಿ ಸೇರಿದ್ದಾರೆ. ಪೊಲೀಸರು ಇನ್ನೂ ಪರಾರಿಯಾಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಬಂಧಿತ ಆರೋಪಿಗಳನ್ನು ಪೊಲೀಸರು ಅಜ್ಮೇರ ಪೋಕ್ಸೊ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ವಕೀಲರು ಅವರನ್ನು ಥಳಿಸಿದರು. ನಾಲ್ಕು ದಿನಗಳ ಹಿಂದೆಯೂ ಇದೇ ರೀತಿ ವಕೀಲರು ಆರೋಪಿಗಳನ್ನು ಥಳಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಯಿತು. ಇನ್ನೊಂದೆಡೆ, ಆರೋಪಿಗಳಿಗೆ ಗಲ್ಲುಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಸರ್ವ ಸಮಾಜ ಸಂಘರ್ಷ ಸಮಿತಿಯು ನಗರದಲ್ಲಿ ಬಂದ್ ಆಚರಿಸಿತು. ಈ ಪ್ರಕರಣದಲ್ಲಿ 7 ಆರೋಪಿಗಳಲ್ಲದೆ, 3 ಅಪ್ರಾಪ್ತ ಹುಡುಗರೂ ಆರೋಪಿಗಳಾಗಿದ್ದಾರೆ.

nazeer ahamad

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

15 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

19 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

19 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

19 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

19 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

19 hours ago