Latest

ಪತಿಯ ಅತಿಯಾದ ಸಲುಗೆಯಿಂದ ಮನನೊಂದು 20 ವರ್ಷದ ಪತ್ನಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜ್ಯೋತಿನಗರದಲ್ಲಿ ಮದುವೆಯಾಗಿ ಕೇವಲ ನಾಲ್ಕು ತಿಂಗಳಾದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿದ ಯುವತಿ ಪೃಥ್ವಿರಾಣಿ (20). ಶಿರಾ ತಾಲೂಕಿನ ಬುಕಾಪಟ್ಟದ ಮೂಲದ ಆಕೆ, ಕಿಲಾರ್ಧಹಳ್ಳಿಯ ಜೈಮಾರುತಿ ನಾಯಕ್‌ನನ್ನು ಪ್ರೀತಿಸುತ್ತಿದ್ದರು. ಸುಮಾರು ನಾಲ್ಕು ವರ್ಷಗಳ ಕಾಲ ಪ್ರೀತಿಸಿದ ಬಳಿಕ, ಇತ್ತೀಚೆಗೆ ಧರ್ಮಸ್ಥಳದಲ್ಲಿ ವಿವಾಹವಾದರು. ಮದುವೆಯ ನಂತರ ದಂಪತಿ ಶಿರಾದ ಜ್ಯೋತಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ಪತಿಯ ಜೊತೆಗಿನ ಬೇರೆ ಯುವತಿಯ ಜಗಳ

ಮದುವೆಯಾದ ನಂತರ ಜೈಮಾರುತಿ ನಾಯಕ್‌ನ ಜೀವನದಲ್ಲಿ ಮತ್ತೊಬ್ಬ ಯುವತಿ ಪ್ರತ್ಯಕ್ಷವಾಗಿದ್ದಾಳೆ. ಆಕೆ “ನನ್ನನ್ನ ಪ್ರೀತಿಸಿ, ಈಗ ಬೇರೆ ಹುಡುಗಿಯನ್ನು ಮದುವೆಯಾಗಿದ್ದೀಯಾ” ಎಂದು ಜೈಮಾರುತಿಗೆ ಪದೇಪದೇ ಜಗಳವಾಡುತ್ತಿದ್ದಳು. ಅಲ್ಲದೆ ಬೆದರಿಕೆ ಹಾಕುತ್ತಿದ್ದುದರಿಂದ, ಈ ವಿಚಾರ ದಂಪತಿಯ ಮಧ್ಯೆ ಅನೇಕ ಬಾರಿ ತೀವ್ರ ವಾಗ್ವಾದಕ್ಕೂ ಕಾರಣವಾಗಿತ್ತು. ಪತಿಯೊಂದಿಗೆ ಜಗಳದ ವೇಳೆ ಹಲ್ಲೆಯ ಘಟನೆ ನಡೆದಿದ್ದರೂ ಎಂಬ ಆರೋಪವಿದೆ.

ಶವ ಪತ್ತೆಯಾದಾಗ ಹುಟ್ಟಿದ ಅನುಮಾನ

ಇತ್ತೀಚೆಗೆ ಪೃಥ್ವಿರಾಣಿ ತಮ್ಮ ತವರಿನವರೊಂದಿಗೆ ಸಂಪರ್ಕದಲ್ಲಿರದೆ ಇದ್ದ ಹಿನ್ನೆಲೆಯಲ್ಲಿ, ಜೈಮಾರುತಿಯ ಕುಟುಂಬದವರು ಕರೆಮಾಡಿ “ನಿಮ್ಮ ಮಗಳು ಮಾತನಾಡುತ್ತಿಲ್ಲ” ಎಂದು ತಿಳಿಸಿದ್ದಾರೆ. ತವರು ಮನೆಯಿಂದ ಬಂದ ಪೋಷಕರು ಮನೆಯೊಳಗೆ ಪ್ರವೇಶಿಸಿದಾಗ, ಪೃಥ್ವಿರಾಣಿ ಮಂಚದ ಮೇಲೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕುತ್ತಿಗೆಯ ಮೇಲೆ ಕಪ್ಪು ಗುರುತುಗಳು ಹಾಗೂ ಮೂಗಿನಿಂದ ರಕ್ತಸ್ರಾವ ಕಂಡ ಹಿನ್ನೆಲೆಯಲ್ಲಿ, ಆಕೆಯ ಪೋಷಕರು ಸಾವಿನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಪ್ರಕರಣ ದಾಖಲಾದ ಹಿನ್ನಲೆ

ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಪೋಷಕರ ಅನುಮಾನ ಹಿನ್ನೆಲೆಯಲ್ಲಿ ಪತಿ ಜೈಮಾರುತಿ ನಾಯಕ್‌ರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಪತಿಗೆ ಬೆದರಿಕೆ ಹಾಕುತ್ತಿದ್ದ ಮತ್ತೊಬ್ಬ ಯುವತಿಯನ್ನೂ ಪೊಲೀಸರು ಶೀಘ್ರ ವಿಚಾರಣೆ ಮಾಡುವ ಸಾಧ್ಯತೆ ಇದೆ.

ಈ ಘಟನೆ ಜ್ಯೋತಿನಗರದಲ್ಲಿ ಆತಂಕ ಮೂಡಿಸಿದ್ದು, ಯುವತಿ ಸಾವಿನ ನಿಜ ಕಾರಣ ಪತ್ತೆಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

12 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

16 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

16 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

16 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

16 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

21 hours ago