Latest

ಪತಿಯ ಅತಿಯಾದ ಸಲುಗೆಯಿಂದ ಮನನೊಂದು 20 ವರ್ಷದ ಪತ್ನಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜ್ಯೋತಿನಗರದಲ್ಲಿ ಮದುವೆಯಾಗಿ ಕೇವಲ ನಾಲ್ಕು ತಿಂಗಳಾದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿದ ಯುವತಿ ಪೃಥ್ವಿರಾಣಿ (20). ಶಿರಾ ತಾಲೂಕಿನ ಬುಕಾಪಟ್ಟದ ಮೂಲದ ಆಕೆ, ಕಿಲಾರ್ಧಹಳ್ಳಿಯ ಜೈಮಾರುತಿ ನಾಯಕ್‌ನನ್ನು ಪ್ರೀತಿಸುತ್ತಿದ್ದರು. ಸುಮಾರು ನಾಲ್ಕು ವರ್ಷಗಳ ಕಾಲ ಪ್ರೀತಿಸಿದ ಬಳಿಕ, ಇತ್ತೀಚೆಗೆ ಧರ್ಮಸ್ಥಳದಲ್ಲಿ ವಿವಾಹವಾದರು. ಮದುವೆಯ ನಂತರ ದಂಪತಿ ಶಿರಾದ ಜ್ಯೋತಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ಪತಿಯ ಜೊತೆಗಿನ ಬೇರೆ ಯುವತಿಯ ಜಗಳ

ಮದುವೆಯಾದ ನಂತರ ಜೈಮಾರುತಿ ನಾಯಕ್‌ನ ಜೀವನದಲ್ಲಿ ಮತ್ತೊಬ್ಬ ಯುವತಿ ಪ್ರತ್ಯಕ್ಷವಾಗಿದ್ದಾಳೆ. ಆಕೆ “ನನ್ನನ್ನ ಪ್ರೀತಿಸಿ, ಈಗ ಬೇರೆ ಹುಡುಗಿಯನ್ನು ಮದುವೆಯಾಗಿದ್ದೀಯಾ” ಎಂದು ಜೈಮಾರುತಿಗೆ ಪದೇಪದೇ ಜಗಳವಾಡುತ್ತಿದ್ದಳು. ಅಲ್ಲದೆ ಬೆದರಿಕೆ ಹಾಕುತ್ತಿದ್ದುದರಿಂದ, ಈ ವಿಚಾರ ದಂಪತಿಯ ಮಧ್ಯೆ ಅನೇಕ ಬಾರಿ ತೀವ್ರ ವಾಗ್ವಾದಕ್ಕೂ ಕಾರಣವಾಗಿತ್ತು. ಪತಿಯೊಂದಿಗೆ ಜಗಳದ ವೇಳೆ ಹಲ್ಲೆಯ ಘಟನೆ ನಡೆದಿದ್ದರೂ ಎಂಬ ಆರೋಪವಿದೆ.

ಶವ ಪತ್ತೆಯಾದಾಗ ಹುಟ್ಟಿದ ಅನುಮಾನ

ಇತ್ತೀಚೆಗೆ ಪೃಥ್ವಿರಾಣಿ ತಮ್ಮ ತವರಿನವರೊಂದಿಗೆ ಸಂಪರ್ಕದಲ್ಲಿರದೆ ಇದ್ದ ಹಿನ್ನೆಲೆಯಲ್ಲಿ, ಜೈಮಾರುತಿಯ ಕುಟುಂಬದವರು ಕರೆಮಾಡಿ “ನಿಮ್ಮ ಮಗಳು ಮಾತನಾಡುತ್ತಿಲ್ಲ” ಎಂದು ತಿಳಿಸಿದ್ದಾರೆ. ತವರು ಮನೆಯಿಂದ ಬಂದ ಪೋಷಕರು ಮನೆಯೊಳಗೆ ಪ್ರವೇಶಿಸಿದಾಗ, ಪೃಥ್ವಿರಾಣಿ ಮಂಚದ ಮೇಲೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕುತ್ತಿಗೆಯ ಮೇಲೆ ಕಪ್ಪು ಗುರುತುಗಳು ಹಾಗೂ ಮೂಗಿನಿಂದ ರಕ್ತಸ್ರಾವ ಕಂಡ ಹಿನ್ನೆಲೆಯಲ್ಲಿ, ಆಕೆಯ ಪೋಷಕರು ಸಾವಿನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಪ್ರಕರಣ ದಾಖಲಾದ ಹಿನ್ನಲೆ

ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಪೋಷಕರ ಅನುಮಾನ ಹಿನ್ನೆಲೆಯಲ್ಲಿ ಪತಿ ಜೈಮಾರುತಿ ನಾಯಕ್‌ರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಪತಿಗೆ ಬೆದರಿಕೆ ಹಾಕುತ್ತಿದ್ದ ಮತ್ತೊಬ್ಬ ಯುವತಿಯನ್ನೂ ಪೊಲೀಸರು ಶೀಘ್ರ ವಿಚಾರಣೆ ಮಾಡುವ ಸಾಧ್ಯತೆ ಇದೆ.

ಈ ಘಟನೆ ಜ್ಯೋತಿನಗರದಲ್ಲಿ ಆತಂಕ ಮೂಡಿಸಿದ್ದು, ಯುವತಿ ಸಾವಿನ ನಿಜ ಕಾರಣ ಪತ್ತೆಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago