Latest

ಪತಿಯ ಅತಿಯಾದ ಸಲುಗೆಯಿಂದ ಮನನೊಂದು 20 ವರ್ಷದ ಪತ್ನಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜ್ಯೋತಿನಗರದಲ್ಲಿ ಮದುವೆಯಾಗಿ ಕೇವಲ ನಾಲ್ಕು ತಿಂಗಳಾದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿದ ಯುವತಿ ಪೃಥ್ವಿರಾಣಿ (20). ಶಿರಾ ತಾಲೂಕಿನ ಬುಕಾಪಟ್ಟದ ಮೂಲದ ಆಕೆ, ಕಿಲಾರ್ಧಹಳ್ಳಿಯ ಜೈಮಾರುತಿ ನಾಯಕ್‌ನನ್ನು ಪ್ರೀತಿಸುತ್ತಿದ್ದರು. ಸುಮಾರು ನಾಲ್ಕು ವರ್ಷಗಳ ಕಾಲ ಪ್ರೀತಿಸಿದ ಬಳಿಕ, ಇತ್ತೀಚೆಗೆ ಧರ್ಮಸ್ಥಳದಲ್ಲಿ ವಿವಾಹವಾದರು. ಮದುವೆಯ ನಂತರ ದಂಪತಿ ಶಿರಾದ ಜ್ಯೋತಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ಪತಿಯ ಜೊತೆಗಿನ ಬೇರೆ ಯುವತಿಯ ಜಗಳ

ಮದುವೆಯಾದ ನಂತರ ಜೈಮಾರುತಿ ನಾಯಕ್‌ನ ಜೀವನದಲ್ಲಿ ಮತ್ತೊಬ್ಬ ಯುವತಿ ಪ್ರತ್ಯಕ್ಷವಾಗಿದ್ದಾಳೆ. ಆಕೆ “ನನ್ನನ್ನ ಪ್ರೀತಿಸಿ, ಈಗ ಬೇರೆ ಹುಡುಗಿಯನ್ನು ಮದುವೆಯಾಗಿದ್ದೀಯಾ” ಎಂದು ಜೈಮಾರುತಿಗೆ ಪದೇಪದೇ ಜಗಳವಾಡುತ್ತಿದ್ದಳು. ಅಲ್ಲದೆ ಬೆದರಿಕೆ ಹಾಕುತ್ತಿದ್ದುದರಿಂದ, ಈ ವಿಚಾರ ದಂಪತಿಯ ಮಧ್ಯೆ ಅನೇಕ ಬಾರಿ ತೀವ್ರ ವಾಗ್ವಾದಕ್ಕೂ ಕಾರಣವಾಗಿತ್ತು. ಪತಿಯೊಂದಿಗೆ ಜಗಳದ ವೇಳೆ ಹಲ್ಲೆಯ ಘಟನೆ ನಡೆದಿದ್ದರೂ ಎಂಬ ಆರೋಪವಿದೆ.

ಶವ ಪತ್ತೆಯಾದಾಗ ಹುಟ್ಟಿದ ಅನುಮಾನ

ಇತ್ತೀಚೆಗೆ ಪೃಥ್ವಿರಾಣಿ ತಮ್ಮ ತವರಿನವರೊಂದಿಗೆ ಸಂಪರ್ಕದಲ್ಲಿರದೆ ಇದ್ದ ಹಿನ್ನೆಲೆಯಲ್ಲಿ, ಜೈಮಾರುತಿಯ ಕುಟುಂಬದವರು ಕರೆಮಾಡಿ “ನಿಮ್ಮ ಮಗಳು ಮಾತನಾಡುತ್ತಿಲ್ಲ” ಎಂದು ತಿಳಿಸಿದ್ದಾರೆ. ತವರು ಮನೆಯಿಂದ ಬಂದ ಪೋಷಕರು ಮನೆಯೊಳಗೆ ಪ್ರವೇಶಿಸಿದಾಗ, ಪೃಥ್ವಿರಾಣಿ ಮಂಚದ ಮೇಲೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕುತ್ತಿಗೆಯ ಮೇಲೆ ಕಪ್ಪು ಗುರುತುಗಳು ಹಾಗೂ ಮೂಗಿನಿಂದ ರಕ್ತಸ್ರಾವ ಕಂಡ ಹಿನ್ನೆಲೆಯಲ್ಲಿ, ಆಕೆಯ ಪೋಷಕರು ಸಾವಿನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಪ್ರಕರಣ ದಾಖಲಾದ ಹಿನ್ನಲೆ

ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಪೋಷಕರ ಅನುಮಾನ ಹಿನ್ನೆಲೆಯಲ್ಲಿ ಪತಿ ಜೈಮಾರುತಿ ನಾಯಕ್‌ರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಪತಿಗೆ ಬೆದರಿಕೆ ಹಾಕುತ್ತಿದ್ದ ಮತ್ತೊಬ್ಬ ಯುವತಿಯನ್ನೂ ಪೊಲೀಸರು ಶೀಘ್ರ ವಿಚಾರಣೆ ಮಾಡುವ ಸಾಧ್ಯತೆ ಇದೆ.

ಈ ಘಟನೆ ಜ್ಯೋತಿನಗರದಲ್ಲಿ ಆತಂಕ ಮೂಡಿಸಿದ್ದು, ಯುವತಿ ಸಾವಿನ ನಿಜ ಕಾರಣ ಪತ್ತೆಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

4 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

10 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

10 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago