Latest

ಹೋಟೆಲ್‌ನಲ್ಲಿ ನಕಲಿ ನೋಟು ಮುದ್ರಣೆ: 23 ವರ್ಷದ ಯುವಕನ ಬಂಧನ”

ಬೆಂಗಳೂರು ನಗರದ ಹೃದಯಭಾಗವಾದ ಟಾಸ್ಕರ್‌ಟೌನ್ ಪ್ರದೇಶದ ಹೋಟೆಲ್‌ವೊಂದರಲ್ಲಿ ನಕಲಿ ನೋಟು ಮುದ್ರಣೆ ನಡೆಸುತ್ತಿದ್ದ 23 ವರ್ಷದ ಯುವಕನೊಬ್ಬನನ್ನು ಕಮರ್ಷಿಯಲ್‌ ಸ್ಟ್ರೀಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನು ಉದ್ಯಮಿಯ ಪುತ್ರನಾಗಿರುವ ಕ್ರಿಷ್ ಮಾಲಿ ಎನ್ನಲಾಗಿದೆ.

ಮನೆನಲ್ಲಿ ಜಗಳ ನಡೆದ ಹಿನ್ನೆಲೆಯಲ್ಲಿ ಮನವಿರಸಿನಿಂದ ಹೊರಬಂದಿದ್ದ ಕ್ರಿಷ್, ಜೂನ್ 1ರಂದು ಆನ್‌ಲೈನ್ ಮೂಲಕ ಟಾಸ್ಕರ್‌ಟೌನ್‌ನಲ್ಲಿರುವ ಹೋಟೆಲ್‌ವೊಂದರಲ್ಲಿ ರೂಂ ಬುಕ್ ಮಾಡಿದ್ದ. ಅಲ್ಲೇ ತಂಗಿ ಮುಂದಿನ ದಿನಗಳಲ್ಲಿ ತನ್ನ ಖರ್ಚುಗಳನ್ನು ನಿರ್ವಹಿಸಲು ಏನು ಮಾಡುವುದು ಎಂಬ ಸಂಕಟದಲ್ಲಿದ್ದ ಆತ, ಖೋಟಾ ನೋಟು ಮುದ್ರಣೆಯ ಯೋಜನೆ ರೂಪಿಸುತ್ತಾನೆ.

ಆಂದಾಜು ಕಾರ್ಯಚಟುವಟಿಕೆಗೆ ಬೇಕಾದ ಪ್ರಿಂಟರ್‌ ಮತ್ತು ಸ್ಕ್ಯಾನರ್‌ ಖರೀದಿಸಿ, ಹೋಟೆಲ್ ರೂಮಿಗೆ ತರಿಸಿಕೊಂಡಿದ್ದ. ನಂತರ 500 ರೂ. ಮುಖಬೆಲೆಯ ನಕಲಿ ನೋಟುಗಳನ್ನು ಕಲರ್ ಜೆರಾಕ್ಸ್ ಮೂಲಕ ತಯಾರಿಸುತ್ತಿದ್ದ. ಜೂನ್ 7ರಂದು ಹೋಟೆಲ್‌ನಿಂದ ಚೆಕ್‌ಔಟ್‌ ಆದ ಕ್ರಿಷ್, ಅಂತಿಮವಾಗಿ ಹೋಟೆಲ್‌ಗೆ 3 ಸಾವಿರ ರೂ. ನಕಲಿ ನೋಟುಗಳನ್ನೇ ಪಾವತಿಸಿದ್ದ.

ಪ್ರಾರಂಭದಲ್ಲಿ ಹೋಟೆಲ್ ಸಿಬ್ಬಂದಿ ಈ ನೋಟುಗಳನ್ನು ಅಸಲೀ ಎನ್ನುತ್ತಿದ್ದರು. ಆದರೆ ಆತ ತಂಗಿದ್ದ ರೂಮನ್ನು ಸ್ವಚ್ಛಗೊಳಿಸುತ್ತಿದ್ದಾಗ ಪೌರಕಾರ್ಮಿಕರು ತ್ಯಾಜ್ಯದೊಂದಿಗೆ ನಕಲಿ ನೋಟುಗಳು ಕಂಡುಬಂದುದನ್ನು ಗಮನಿಸಿದರು. ಈ ವಿಚಾರವನ್ನು ಮ್ಯಾನೇಜರ್ ಗಮನಕ್ಕೆ ತಂದಾಗ ಅವರು ತಕ್ಷಣ ನೋಟುಗಳನ್ನು ಪರಿಶೀಲಿಸಿದರು.

ಪರಿಶೀಲನೆಯ ಸಂದರ್ಭದಲ್ಲಿ ನೋಟುಗಳು ನಕಲಿತನ ಹೊಂದಿದ್ದವು ಎಂಬುದು ಖಚಿತವಾಯಿತು. ಕೂಡಲೇ ಹೋಟೆಲ್ ಮ್ಯಾನೇಜರ್ ಕಮರ್ಷಿಯಲ್‌ ಸ್ಟ್ರೀಟ್‌ ಠಾಣೆಗೆ ದೂರು ಸಲ್ಲಿಸಿದರು. ಪೊಲೀಸರು ತಕ್ಷಣ ಪ್ರಕರಣವನ್ನು ಗಂಭೀರವಾಗಿ ಕೈಗೊಂಡು ತನಿಖೆ ಆರಂಭಿಸಿದರು.

ಕ್ರಿಷ್ ಮಾಲಿಯ ಹೋಟೆಲ್‌ ರೂಮ್‌ ಪರಿಶೀಲನೆಯ ವೇಳೆ ನಕಲಿ ನೋಟುಗಳ ತುಂಡುಗಳು, ಬಿಳಿ ಕಾಗದದ ಬಂಡಲ್ ಮತ್ತು ಮುದ್ರಣಕ್ಕೆ ಬಳಸಿದ ಸಾಧನಗಳು ಸಿಕ್ಕಿವೆ. ಇದೀಗ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ನಕಲಿ ನೋಟು ಮುದ್ರಣದ ಹಿಂದೆ ಇರುವ ಇನ್ನಿತರ ಸಂದರ್ಭಗಳು ಹಾಗೂ ತಂತ್ರಜ್ಞಾನ ಬಳಕೆಯ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

13 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

20 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

20 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago