Categories: CrimeLatest

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ ಬಂದಿದೆ. ಮದರಸಾದ ಕಿರುಕುಳ ಸಹಿಸಲಾಗದೆ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದ ಬಿಹಾರ ಮೂಲದ 24 ಮಕ್ಕಳನ್ನು ರೈಲ್ವೆ ರಕ್ಷಣಾ ದಳ (RPF) ಬೆಂಗಳೂರು ರೈಲು ನಿಲ್ದಾಣದಲ್ಲಿ ರಕ್ಷಿಸಿದ್ದು, ಈ ವೇಳೆ ಮದರಸಾದ ಒಳಗಿನ ಕರಾಳ ಸತ್ಯ ಹೊರಬಿದ್ದಿದೆ.

ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಅಮ್ಲಾಪುರದಲ್ಲಿರುವ ‘ಜಾಮಿಯಾ ಅರೇಬಿಯಾ ಹಸೀನಿಯಾ ಟ್ರಸ್ಟ್’ ಮದರಸಾದಲ್ಲಿ ಈ ಘಟನೆಗಳು ನಡೆದಿರುವುದಾಗಿ ತಿಳಿದುಬಂದಿದೆ. ಮದರಸಾದಿಂದ ಹೇಗೋ ತಪ್ಪಿಸಿಕೊಂಡು ಬೆಂಗಳೂರು ತಲುಪಿದ್ದ ಮಕ್ಕಳನ್ನು ರೈಲ್ವೆ ಪೊಲೀಸರು ವಿಚಾರಣೆ ನಡೆಸಿದಾಗ, ಅವರು ಅನುಭವಿಸಿದ್ದ ಹಿಂಸೆ ಮತ್ತು ಕಿರುಕುಳದ ಭೀಕರ ವಿವರಗಳನ್ನು ಬಾಯ್ಬಿಟ್ಟಿದ್ದಾರೆ.

ಮಕ್ಕಳ ಹೇಳಿಕೆ ಪ್ರಕಾರ, ಮದರಸಾದ ಮೌಲ್ವಿ ಮೌಲಾಲಿ ಎಂಬಾತ ಮಕ್ಕಳನ್ನು ಬಲವಂತವಾಗಿ ದುಡಿಸಿಕೊಳ್ಳುತ್ತಿದ್ದನು. ಮಕ್ಕಳಿಂದ ಭಾರವಾದ ಕಲ್ಲುಗಳನ್ನು ಹೊರೆಸಲಾಗುತ್ತಿತ್ತು. ಕೆಲಸ ಮಾಡಲು ನಿರಾಕರಿಸಿದರೆ ಅಥವಾ ಸುಸ್ತಾಗಿ ಕುಳಿತರೆ ಕ್ರೂರವಾಗಿ ಹಲ್ಲೆ ನಡೆಸಲಾಗುತ್ತಿತ್ತು ಎನ್ನಲಾಗಿದೆ. ಇದಲ್ಲದೆ, ಮಕ್ಕಳಿಗೆ ಸಮರ್ಪಕ ಆಹಾರ ನೀಡದೆ ಉಪವಾಸ ಹಾಕಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗುತ್ತಿತ್ತು ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ರೈಲ್ವೆ ಪೊಲೀಸರು ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ (CWC) ವಶಕ್ಕೆ ಒಪ್ಪಿಸಿದ್ದರು. ಸಮಿತಿಯ ದೂರಿನ ಮೇರೆಗೆ ಮೊದಲು ಬೆಂಗಳೂರಿನಲ್ಲಿ ದಾಖಲಾಗಿದ್ದ ಶೂನ್ಯ ಎಫ್‌ಐಆರ್ ಅನ್ನು ಬಳಿಕ ತುಮಕೂರು ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ.

ಆರೋಪಿ ಮೌಲ್ವಿ ಮೌಲಾಲಿ ವಿರುದ್ಧ ಬಾಲ ನ್ಯಾಯ ಕಾಯ್ದೆ ಹಾಗೂ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ರಕ್ಷಿಸಲ್ಪಟ್ಟ ಮಕ್ಕಳನ್ನು ಸುರಕ್ಷಿತ ಸ್ಥಳದಲ್ಲಿ ಇರಿಸಲಾಗಿದ್ದು, ಮದರಸಾದ ಹೆಸರಿನಲ್ಲಿ ನಡೆಯುತ್ತಿದ್ದ ಈ ಶೋಷಣೆಯ ಪ್ರಕರಣ ಜಿಲ್ಲಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

5 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

5 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

5 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

5 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago