
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ ಮಾಹಿತಿಗಳು ಹಾಗೂ ಆತ ನೀಡಿದ್ದಾನೆ ಎನ್ನಲಾದ ಹೇಳಿಕೆಗಳು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿವೆ.
ಮುಜಫರ್ನಗರ ಮೂಲದ ಸಮದ್ ಖುರೇಷಿ ವೆಲ್ಡರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಕಳೆದ ಆರು ತಿಂಗಳಲ್ಲಿ 13ರಿಂದ 15 ವರ್ಷದೊಳಗಿನ ಆರು ಶಾಲಾ ಬಾಲಕಿಯರನ್ನು ಪ್ರೀತಿಯ ಹೆಸರಿನಲ್ಲಿ ಸಂಪರ್ಕಿಸಿ ಬಲೆಗೆ ಬೀಳಿಸಿದ್ದಾಗಿ ಆತ ವಿಚಾರಣೆ ವೇಳೆ ಹೇಳಿದ್ದಾನೆ ಎನ್ನಲಾಗಿದೆ.
ಈ ಕೃತ್ಯಕ್ಕೆ ಸೋನು ಟರ್ಕಿ, ರಿಯಾನ್ ಹಾಗೂ ಸೋಹೇಬ್ ಎಂಬವರು ₹30 ಸಾವಿರದಿಂದ ₹40 ಸಾವಿರದವರೆಗೆ ಹಣ ನೀಡುತ್ತಿದ್ದರು ಎಂದು ಆರೋಪಿ ತಿಳಿಸಿದ್ದಾನೆ ಎನ್ನಲಾಗಿದೆ. ಬಾಲಕಿಯರನ್ನು ಹೇಗೆ ಸಂಪರ್ಕಿಸಲಾಗುತ್ತಿತ್ತು ಹಾಗೂ ಹಣದ ವ್ಯವಹಾರ ಹೇಗೆ ನಡೆಯುತ್ತಿತ್ತು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆರೋಪಿಯ ಮೊಬೈಲ್ ಫೋನ್ ಪರಿಶೀಲಿಸಿದಾಗ ಶಸ್ತ್ರಾಸ್ತ್ರಗಳ ವಿಡಿಯೋಗಳು ಸೇರಿದಂತೆ ಹಲವು ಆಕ್ಷೇಪಾರ್ಹ ದಾಖಲೆಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.
ಸ್ಥಳೀಯರು ಆರೋಪಿಯನ್ನು ಹಿಡಿದು ವಿಚಾರಣೆ ನಡೆಸಿದ ಬಳಿಕ ಪೊಲೀಸರಿಗೆ ಹಸ್ತಾಂತರಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆತನ ಹೇಳಿಕೆಗಳು ಹಾಗೂ ಮೊಬೈಲ್ನಲ್ಲಿ ಪತ್ತೆಯಾದ ಮಾಹಿತಿಗಳ ಆಧಾರದ ಮೇಲೆ ತನಿಖೆ ಮುಂದುವರಿಸಿದ್ದಾರೆ.
ಆರೋಪಿಯ ವಿರುದ್ಧದ ಆರೋಪಗಳು ತನಿಖೆಯ ಹಂತದಲ್ಲಿದ್ದು, ಪ್ರಕರಣದ ಸಂಪೂರ್ಣ ಸತ್ಯಾಂಶ ತನಿಖೆ ಪೂರ್ಣಗೊಂಡ ಬಳಿಕವೇ ಸ್ಪಷ್ಟವಾಗಬೇಕಿದೆ.






