Latest

25 ಲಕ್ಷ ರೂಪಾಯಿಯಾ ಯಾತ್ರಿ ನಿವಾಸದ ಕಟ್ಟಡದ ಭೂಮಿ ಪೂಜೆ..!

ಕುಂದಗೋಳ:ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಇಲಾಖೆಯ 25 ಲಕ್ಷ ರೂಪಾಯಿಗಳ ಲೋಕೋಪಯೋಗಿ ಇಲಾಖೆ ಅನುದಾನದಡಿಯಲ್ಲಿ “ಯಾತ್ರಿ ನಿವಾಸ” ಶಂಕು ಸ್ಥಾಪನೆಗೆ ಶಿರಹಟ್ಟಿಯ ಶ್ರೀ ಮ. ನಿ. ಪ್ರ ಜಗದ್ಗುರು ಪಕ್ಕಿರೇಶ್ವರ ಸಂಸ್ಥಾನ ಮಠದ ಪಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ರಾಜ್ಯ ಸರ್ಕಾರವು ಇಂತಹ ಧಾರ್ಮಿಕ ಕಾರ್ಯಗಳಿಗೆ ಮುಂದಾಗಿರುವುದು ಮಠ ಮಾನ್ಯಗಳು ಉಳಿಯಲು ಸಾದ್ಯ. ಶಿರಹಟ್ಟಿಯ ಜಗದ್ಗುರು ಪಕ್ಕಿರೇಶ್ವರ ಸಂಸ್ಥಾನ ಮಠದ ಶ್ರೀ ಮ. ನಿ. ಪ್ರ ಪಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಹೇಳಿದರು.

ಅವರು ಕುಂದಗೋಳ ತಾಲೂಕಿನ ಮಳ್ಳಹಳ್ಳಿ ಗ್ರಾಮದ ಶ್ರೀ ಚನ್ನವಿರೇಶ್ವರ ವಿರಕ್ತಮಠದಲ್ಲಿ ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಇಲಾಖೆ ವತಿಯಿಂದ ಮಂಜೂರಾದ 25 ಲಕ್ಷ ರೂಪಾಯಿ ವೆಚ್ಚದ ಯಾತ್ರಿ ನಿವಾಸ ಕಟ್ಟಡದ ಶಂಕು ಸ್ಥಾಪನೆಯನ್ನು ನೆರೆವೆರಿಸಿ ಮಾತನಾಡಿದ ಅವರು ಸರಕಾರ ಮಹತ್ವದ ಯೋಜನೆ ಕಾರ್ಯರೂಪಕ್ಕೆ ತಂದಿದ್ದು ಸಂತೋಷದ ವಿಷಯ ಈ ಮಠದ ಪಾರಂಪಾರಿಕ ಹಿನ್ನೆಲೆ ಇದೆ. ಅಭಿವೃದ್ಧಿಗೆ ಮುನ್ನಡೆ ಪಡೆದುಕೊಂಡಿದೆ ಎಂದರು.

ಮಳ್ಳೂಳ್ಳಿ ಶ್ರೀ ಚನ್ನವಿರೇಶ್ವರ ವಿರಕ್ತಮಠದ ಶ್ರೀ ಮ. ನಿ. ಪ್ರ ಶಿವಯೋಗಿಶ್ವರ ಮಹಾಸ್ವಾಮಿಗಳು ಮಾತನಾಡಿ ಮುಳಹಳ್ಳಿ ಹಾಗೂ ಸುತ್ತು ಮುತ್ತಲಿನ ಗ್ರಾಮಗಳ ಜನೆತೆಯ ಸರ್ವ ಸಹಕಾರದಿಂದ ಈ ಮಠದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆಯತ್ತಾ ಬಂದಿದೆ. ಇವತ್ತು ನಮ್ಮ ಮಠ ಅಭಿವೃದ್ಧಿ ಕಾರ್ಯ ನಡೆಯೋದು ಸಂತಸ ತಂದಿದೆ ಎಂದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣಿ ಮತ್ತು ರಪ್ತು ನಿಗಮದ ಅದ್ಯಕ್ಷರು , ಎಸ್ ಐ ಚಿಕ್ಕನಗೌಡ್ರ ಮಾತನಾಡಿ ಶ್ರೀ ಚನ್ನವಿರೇಶ್ವರ ವಿರಕ್ತಮಠಕ್ಕೆ ತಾಲೂಕಿನಾದ್ಯಂತ ಅನೇಕ ಭಕ್ತರಿದ್ದು ಪ್ರಸ್ತುತ ಎಲ್ಲರೂ ಸರ್ವ ಸಮ್ಮತದಿಂದ ಕೂಡಿ ಸೇರಿಕೊಂಡು ಅಭಿವೃದ್ಧಿ ಕಾರ್ಯ ಮುಂದುವರಿಸಿಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ಮಾಜಿ ಶಾಸಕ ಎಮ್ ಎಸ್ ಅಕ್ಕಿ ಈ ಮಠಕ್ಕೆ ಸಾವಿರಾರು ಭಕ್ತಾ ಸಮೂಹ ಇದ್ದು. ಶೀಘ್ರದಲ್ಲೇ ಅಭಿವೃದ್ಧಿ ಕಾಮಗಾರಿ ಗುಣಮಟ್ಟದ ಮತ್ತು ಪೂರ್ಣಗೂಳ್ಳಲ್ಲಿ ಎಂದು ಗುತ್ತಿಗೆದಾರನಗೆ ಕರೆ ನೀಡಿದರು.

ಕಾರ್ಯಕ್ರಮ ಪ್ರಾರಂಭವನ್ನು ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡುವುದರ ಜೊತೆಗೆ ಕಾರ್ಯಕ್ರಮ ಶೋಬೆ ತಂದರು. ಸ್ವಾಗತ ಭಾಷಣ ರಾಘವೇಂದ್ರ ಕುರಿ ನೆರೆವೆರಿಸಿದರು. ಶಾಂತಯ್ಯ ಮಲಕೈಯ್ಯನವರ ನಿರೂಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮುಖಂಡ ಶಂಕರಗೌಡ ನಿರಂಜನಗೌಡ್ರ, ದಾನಪ್ಪ ಗಂಗಯ್ಯ
ಎ ಬಿ. ಉಪ್ಪಿನ, ಗ್ರಾಮ ಪಂಚಾಯಿತಿ ಅಧ್ಯಕ್ಷರು , ಉಪ್ಯಾದ್ಯಕ್ಷರು ಹಾಗೂ ಗ್ರಾಮ ಪಂಚಾಯಿತಿ ಸರ್ವ ಸದಸ್ಯರು, ಪಕ್ಕಿರಪ್ಪ ಮೂಲಿಮನಿ ಸಿದ್ದಪ್ಪ ಹುಣಸಣ್ಣನವರ, ಬಾಬಣ್ಣ ಬೆಟಗೇರಿ, ಗುರಲಿಂಗಪ್ಪ ಸೂರಟೂರ, ರುದ್ರಗೌಡ್ರ ಚನ್ನಪ್ಪಗೌಡ್ರ, ಸದಾಶಿವಯ್ಯ ಹೀರೆಮಠ, ಆಶೋಕಗೌಡ್ರ ಪಾಟೀಲ, ಪಕ್ಕಿರಪ್ಪ ದೇವನೂರ, ನಾಗಾರಾಜ ಅಳ್ಳಿಕಟ್ಟಿ, ಎಚ್ ಡಿ ಹೀರೆಗೌಡ್ರ, ಅಡಿವೆಪ್ಪ ಸುಣಗಾರ, ಹನಮಂತಗೌಡ್ರ ನಾಗನಗೌಡ್ರ ಜಗದೇವಯ್ಯ ಶಾಸ್ತ್ರೀಯಗಳು, ಶಾನವಾಡ ಅರವಿಂದಪ್ಪ ಮೇಲ್ಮಾಳಗಿ, ಶೇಕಯ್ಯ ಹೀರೆಮಠ, ಮಹದೇವಪ್ಪ ತಟ್ಟಿಮಸಿ, ಬಸುವರೆಡ್ಡಿ ಹಾಗೂ ಊರಿನ ಸಧ್ಭಕ್ತರು ಪಾಲ್ಗೊಂಡಿದರು.

ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago